
CHITRADURGA NEWS | 24 OCTOBER 2025
ಹೊಳಲ್ಕೆರೆ: ಸಮುದಾಯ ಭವನ ಎಲ್ಲಾ ಜಾತಿಯವರ ಕಲ್ಯಾಣಕ್ಕೆ ಬಳಕೆಯಾಗಲಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ನಗರಸಭೆ ಸದಸ್ಯರ ಪ್ರವಾಸ | ಅಕ್ರಮ ಮತ್ತು ಮೋಜು ಮಸ್ತಿಗಾಗಿ | ಮಹೇಶ್ ಸಿ ನಗರಂಗೆರೆ
ತಾಲ್ಲೂಕಿನ ಚಿಕ್ಕಜಾಜೂರಿನಲ್ಲಿ ಶ್ರೀ ಬನಶಂಕರಿ ಅಮ್ಮನವರ 25 ನೇ ವರ್ಷದ ರಜತ ಮಹೋತ್ಸವ ಹಾಗೂ ಬನಶಂಕರಿ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು.
ಸಮುದಾಯ ಭವನಕ್ಕೆ ಅನೇಕ ದಾನಿಗಳು ನೆರವು ನೀಡಿದ್ದಾರೆ. ನಾರಾಯಣ ಎಂಬುವರನ್ನು ರಾಜ್ಯಸಭೆ ಸದಸ್ಯರನ್ನಾಗಿ ನೇಮಕ ಮಾಡಿರುವ ದೇಶದ ಪ್ರಧಾನಿ ನರೇಂದ್ರ ಮೋದಿರವರು ಈ ಜನಾಂಗಕ್ಕೆ ಗೌರವ ತಂದು ಕೊಟ್ಟಿರುವುದು ನಿಮ್ಮೆಲ್ಲರ ಭಾಗ್ಯ.
ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರಲ್ಲಿ ರೈತರು, ಬಡವರ ಬಗ್ಗೆ ಕಾಳಜಿಯಿರುವುದರಿಂದ ಭರಮಸಾಗರ ಹೋಬಳಿ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಬರಲು ಸಾಧ್ಯವಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 24| ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ರೈತರ ಬದುಕನ್ನು ಸ್ವಂತ ಬದುಕೆಂದು ಅರ್ಥ ಮಾಡಿಕೊಂಡಿದ್ದಾರೆ. ಎರಡು ಮೂರು ತಿಂಗಳಲ್ಲಿ 37 ಕೆರೆಗಳಿಗೆ ಭದ್ರ ಯೋಜನೆಯಿಂದ ನೀರು ಹರಿಯಲಿದೆ.
ಕೇಂದ್ರ ಸರ್ಕಾರ ಜಿ.ಎಸ್.ಟಿ. ಕಡಿಮೆಗೊಳಿಸಿರುವುದರಿಂದ ಬಡ ರೈತರು ಕಾರು ಖರೀಧಿಸಬಹುದು. ಅಡಿಕೆಗೆ ಒಳ್ಳೆಯ ದರವಿದೆ. ಅಡಿಕೆ ತೋಟ ಮಾಡಿಕೊಳ್ಳಿ ಎಂದು ರೈತರಲ್ಲಿ ಮನವಿ ಮಾಡಿದರು.
ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಭಾರತದ ದೇಶದಲ್ಲಿ ವಿಭಿನ್ನ ಸಂಸ್ಕøತಿ, ಸಂಪ್ರದಾಯ, ಆಚರಣೆಯಿದ್ದರೂ ಅವುಗಳ ಹಿಂದೆ ಗಾಢವಾದ ನಂಬಿಕೆಯಿದೆ.
ಹನ್ನೆರಡನೆ ಶತಮಾನದ ಸಮಾನತೆಯ ಹರಿಕಾರ ಬಸವಣ್ಣನವರ ಸಂದೇಶ ಪ್ರಪಂಚದೆಲ್ಲೆಡೆ ಪಸರಿಸಿದೆ. ಯಾರೋ ಕೊಟ್ಟಿದ್ದನ್ನು ಮತ್ತೊಬ್ಬರಿಗೆ ದಾನ ಮಾಡುವುದು ದಾನವಲ್ಲ. ಸ್ವಂತ ಶ್ರಮಪಟ್ಟು ದುಡಿದು ಕಷ್ಟದಲ್ಲಿರುವವರಿಗೆ ದಾನ ಮಾಡುವುದಿದೆಯಲ್ಲಾ ಅದುವೇ ನಿಜವಾದ ದಾನ ಎಂದರು.
ಗಾಳಿ, ನೀರು, ಬೆಳಕು, ಅನ್ನ, ಆಹಾರ ನೀಡಿರುವ ದೇವರನ್ನು ಸ್ಮರಿಸಬೇಕೆಂದು ದೇವರ ದಾಸಿಮಯ್ಯ ಹೇಳಿದ್ದಾರೆ. ಜಗತ್ತಿನಾದ್ಯಂತ ಶರಣರ ವಚನ ಸಾಹಿತ್ಯಗಳು ಪ್ರಚಾರವಾಗಬೇಕೆಂಬುದು ಅವರ ಆಶಯವಾಗಿತ್ತು. ಕಿತ್ತೂರರಾಣಿ ಚೆನ್ನಮ್ಮ ಬ್ರಿಟೀಷರ ವಿರುದ್ದ ಹೋರಾಡಿದ ಪ್ರಥಮ ರಾಣಿ ಎಂದು ಸ್ಮರಿಸಿದರು.
ಇದನ್ನೂ ಓದಿ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ | ನಾನು ಸಹಾ ಆಕಾಂಕ್ಷಿ | ವಸಂತಕುಮಾರ್
ಹಂಪಿ ಹೇಮಕೂಟ ಗಾಯತ್ರಿ ಪೀಠದ ಸಂಸ್ಥಾಪನಾಧೀಶರಾದ ದಯಾನಂದಪುರಿ ಸ್ವಾಮೀಜಿ ಮಾತನಾಡಿದರು.
ದೇವಾಂಗ ಸಮಾಜದ ಅಧ್ಯಕ್ಷ ಆರ್.ಎ.ಅಶೋಕ್, ಸಂಸದ ಗೋವಿಂದ ಎಂ.ಕಾರಜೋಳ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಎಂ.ಡಿ.ಲಕ್ಷ್ಮಿನಾರಾಯಣ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಸುಮಿತ್ರಕ್ಕ, ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಗೋ ತಿಪ್ಪೇಶ್, ಚಿಕ್ಕಜಾಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಜಲಿ ಇತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
