CHITRADURGA NEWS | 03 AUGUST 20-25
ಚಿತ್ರದುರ್ಗ: ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜ್ ಮುಂಭಾಗ ಇರುವ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ವಿದ್ಯಾರ್ಥಿಗಳಿಗೆ ಹಾಗೂ ವಸತಿ ಶಾಲೆ ಮಕ್ಕಳಿಗೆ ಶನಿವಾರ ಬುದ್ಧ ನಗರ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಡಿ.ಸುರೇಂದ್ರ ಕುಮಾರ್ ಅವರು ವೈದ್ಯಕೀಯ ತಪಾಸಣೆ ನಡೆಸಿ, ಸ್ವಚ್ಛತೆ ಕುರಿತು ಆರೋಗ್ಯ ಶಿಕ್ಷಣ ನೀಡಿದರು.
ಇದನ್ನೂ ಓದಿ: ಕೃಷಿ ಪಂಪ್ಸೆಟ್ ಬಳಕೆಯಿಂದ ಇಂಧನ ಉಳಿತಾಯ | ಡಾ.ರಾಜಶೇಖರ್ ಭಾರ್ಕೆರ್
ಜಿಲ್ಲಾ ಸಿಎಂಡಿ ವಿಭಾಗದ ಎಸ್.ಅಶೋಕ್ ಅವರು, ಡೆಂಗ್ಯೂ ವಿರೋಧಿ ಮಾಸಚರಣೆ ಪ್ರಯುಕ್ತ ಡೆಂಗ್ಯೂ ಜ್ವರ ಹರಡುವ ವಿಧಾನ, ಜ್ವರದ ಲಕ್ಷಣಗಳು, ತಡೆಗಟ್ಟುವ ಕ್ರಮಗಳು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಕ್ಕಳಿಗೆ ತಿಳಿಸಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಆರ್.ನಾಗರಾಜ್, ಅಡಿಗೆ ಮಾಡುವ ಸಹಾಯಕರಿಗೆ ಸ್ವಚ್ಛತೆ ಬಗ್ಗೆ ಹಾಗೂ ವೈಯಕ್ತಿಕ ಸ್ವಚ್ಛತೆ ಬಗ್ಗೆ ತಿಳಿಸಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಕೆ.ಶಿವಕುಮಾರ್, ವಸತಿ ನಿಲಯದ. ಅವರಣದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ದಿನ ಭವಿಷ್ಯ | ಆಗಸ್ಟ್ 03 | ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ದೂರದ ಪ್ರಯಾಣದಲ್ಲಿ ಎಚ್ಚರ
ಈ ಸಂದರ್ಭದಲ್ಲಿ ವಸತಿ ನಿಲಯದ ಮೇಲ್ವಿಚಾರಕರಾದ ಎಲ್.ಎಂ.ಶೇಖರ್ ಹಾಗೂ ಸಿಬ್ಬಂದಿಗಳು ಇದ್ದರು.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
