
CHITRADURGA NEWS | 28 FEBRUARY 2025
ಚಿತ್ರದುರ್ಗ: ಚಿತ್ರದುರ್ಗ ನೂತನ ಉಪವಿಭಾಗಾಧಿಕಾರಿಯಾಗಿ ಮೆಹಬೂಬ್ ಜಿಲಾನ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಉಪವಿಭಾಗಾಧಿಕಾರಿಯಾಗಿದ್ದ ಕಾರ್ತಿಕ್ ಅವರ ವರ್ಗಾವಣೆ ಬಳಿಕ, ಭೂಸ್ವಾಧೀನ ಅಧಿಕಾರಿಯಾಗಿದ್ದ ವೆಂಕಟೇಶ್ ನಾಯಕ್ ಅವರು ಉಪವಿಭಾಗಾಧಿಕಾರಿ ಹುದ್ದೆಯ ಪ್ರಭಾರ ವಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.
ಇದೀಗ ಮೆಹಬೂಬ್ ಜಿಲಾನ್ ಅವರನ್ನು ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ ಸರ್ಕಾರ ನೇಮಿಸಿದ ಹಿನ್ನೆಲೆಯಲ್ಲಿ, ಅವರು ಶುಕ್ರವಾರ ಇಲ್ಲಿನ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
Also Read: ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ.ಜಿ.ಪರಮೇಶ್ವರಪ್ಪ ಆಯ್ಕೆ
ಮೆಹಬೂಬ್ ಜಿಲಾನ್ ಅವರು ಇಲ್ಲಿಗೆ ಬರುವ ಪೂರ್ವದಲ್ಲಿ ರಾಯಚೂರು ಮಹಾನಗರಪಾಲಿಕೆ ಹಿರಿಯ ಶ್ರೇಣಿ ವಲಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
