CHITRADURGA NEWS | 13 OCTOBER 2024
ಹೊಳಲ್ಕೆರೆ: ಬಿಜೆಪಿ ಸದಸ್ಯತ್ವ ನೊಂದಣಿ(Membership Registration) ಅಭಿಯಾನದಲ್ಲಿ ನೊಂದಣಿ ಹೆಚ್ಚಾದರೆ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸುಲಭವಾಗುತ್ತದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ಕ್ಲಿಕ್ ಮಾಡಿ ಓದಿ: Jaldhi Festival; ಬುಡಕಟ್ಟು ಸಂಪ್ರದಾಯದ ಜಲಧಿ ಉತ್ಸವ | ಶಾಂತವೀರ ಶ್ರೀ ಭಾಗೀ
ನಗರದ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ನೊಂದಣಿ ಅಭಿಯಾನದ ಕಾರ್ಯಕರ್ತರ ಸಭೆ ಹಾಗೂ ರಾಜಾವೀರ ಮದಕರಿನಾಯಕ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಶತ್ರುಗಳನ್ನು ಸದೆಬಡಿದು ಗಂಡುಮೆಟ್ಟಿನ ನಾಡು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ರಕ್ಷಿಸಿ ಎಲ್ಲರ ಪ್ರಾಣ ಮಾನ ಕಾಪಾಡಿದ ರಾಜಾವೀರ ಮದಕರಿನಾಯಕನನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕು ಎಂದರು.
ಹಳ್ಳಿ ಹಳ್ಳಿಗೆ ತೆರಳಿ ಸದಸ್ಯತ್ವ ನೊಂದಣಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ಒಂದೊoದು ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಐದೈದು ಸದಸ್ಯರುಗಳನ್ನು ಕಳಿಸುತ್ತೇನೆ. ಕಾರ್ಯಕರ್ತರು ಮುಖಂಡರು ಮನಸ್ಸು ಮಾಡಿದರೆ ಕನಿಷ್ಠ ಒಂದು ಲಕ್ಷ ಸದಸ್ಯತ್ವ ನೊಂದಾಯಿಸಬಹುದು.
ಕ್ಲಿಕ್ ಮಾಡಿ ಓದಿ: Bichchugatti Bharamanna Nayaka; ಜಯದೇವ ಶ್ರೀಗಳಿಗೆ ಬಿಚ್ಚುಗತ್ತಿ ಭರಮಣ್ಣನಾಯಕ ವಂಶಸ್ಥರಿಂದ ಭಕ್ತಿ ಸಮರ್ಪಣೆ
500 ಸದಸ್ಯತ್ವ ನೊಂದಣಿ ಮಾಡಿಸಿದವರಿಗೆ 5000 ಸಾವಿರ ರೂ. 1 ಸಾವಿರ ಸದಸ್ಯತ್ವ ನೊಂದಾಯಿಸಿದವರಿಗೆ 10 ಸಾವಿರ ರೂ.ಗಳ ಬಹುಮಾನ ನೀಡಲಾಗುವುದು. ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡುತ್ತದೆ ಎಂದು ಹೇಳಿದರು.
ಕಳೆದ ಸಾರಿ 78 ಸಾವಿರ ಸದಸ್ಯತ್ವ ನೊಂದಾಯಿಸಿದ್ದರಿoದ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಎ.ಪಿ.ಎಂ.ಸಿ.ಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.
ವಿಧಾನಸಭೆ ಚುನಾವಣೆಯಲ್ಲಿ 40 ಸಾವಿರ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ್ದೀರ, ಅದೇ ರೀತಿ ಪಾರ್ಲಿಮೆಂಟ್ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರಿಗೆ ಜಯ ಸಿಕ್ಕಿತ್ತು. ನರೇಂದ್ರಮೋದಿ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿರುವುದರಿಂದ ಪಕ್ಷ ಗಟ್ಟಿಯಾಗಿದೆ.
ಚುನಾವಣೆಗೂ ಮುನ್ನ ಐದು ಗ್ಯಾರೆಂಟಿಗಳನ್ನು ಘೋಷಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದು ವರ್ಷ ನಾಲ್ಕು ತಿಂಗಳು ಕಳೆದರೂ ಯಾವ ವಿಧಾನಸಭಾ ಕ್ಷೇತ್ರಕ್ಕೂ ಅಭಿವೃದ್ದಿಗಾಗಿ ನಯಾ ಪೈಸೆಯನ್ನು ನೀಡಿಲ್ಲ.
ಕ್ಲಿಕ್ ಮಾಡಿ ಓದಿ: Astrology; ದಿನ ಭವಿಷ್ಯ | 13 ಅಕ್ಟೋಬರ್ | ವೃತ್ತಿಪರ ಉದ್ಯೋಗದಲ್ಲಿ ಹೊಸ ಸ್ಥಾನಮಾನ, ಸ್ನೇಹಿತರಿಂದ ಉಡುಗೊರೆ, ಪ್ರಯಾಣದಲ್ಲಿ ಎಚ್ಚರ
ಹರಿಯಾಣದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆಂದು ಎಲ್ಲಾ ಮಾಧ್ಯಮಗಳು ಹೇಳಿದ್ದವು. ಆದರೆ ಸಮೀಕ್ಷೆಗಳು ಹುಸಿಯಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕರೆಂಟ್ ಬಿಲ್ ಕಟ್ಟಲು ಹಣವಿಲ್ಲದಂತಾಗಿದೆ. ನೌಕರರಿಗೆ ವೇತನ ಕೊಡಲು ಆಗುತ್ತಿಲ್ಲ ಎಂದು ಪರಿಸ್ಥಿತಿಯನ್ನು ಟೀಕಿಸಿದರು.
ಹೊಳಲ್ಕೆರೆ ಮಂಡಲ ಅಧ್ಯಕ್ಷ ಎಂ.ಬಿ.ಸಿದ್ದೇಶ್, ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಪುರಸಭೆ ಸದಸ್ಯರುಗಳಾದ ಮುರುಗೇಶ್, ಸುಧಾ ಬಸವರಾಜ್, ಪ್ರಧಾನ ಕಾರ್ಯದರ್ಶಿ ರೂಪ ಸುರೇಶ್, ತಾಲ್ಲೂಕಿನ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number