
CHITRADURGA NEWS | 29 JUNE 2026
ಚಿತ್ರದುರ್ಗ: ಈ ವರ್ಷದ ಅಂತ್ಯಕ್ಕೆ ಬ್ಯಾಂಕಿನ ಅಮೃತ ಮಹೋತ್ಸವವನ್ನು ನಗರದಲ್ಲಿ ಎರಡು ದಿನಗಳ ಕಾಲ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಬ್ಯಾಂಕಿನ ನೂತನ ಅಧ್ಯಕ್ಷ ರಘುರಾಮರೆಡ್ಡಿ ಘೋಷಿಸಿದರು.
ಇದನ್ನೂ ಓದಿ: ಅಂತರಾಷ್ಟ್ರೀಯ MSME ದಿನಾಚರಣೆ | ಭಿತ್ತಿಪತ್ರ ಬಿಡುಗಡೆಗೊಳಿಸಿದ ಸಿಇಓ ಡಾ.ಆಕಾಶ್
ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ. ಕಲ್ಯಾಣ ಮಂಟಪದಲ್ಲಿ ನಡೆದ ಮರ್ಚೆಂಟ್ಸ್ ಬ್ಯಾಂಕಿನ 75ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು,
ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕೆಂದೇ ಹೆಸರಾಗಿರುವ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕು ಈ ಸಾಲಿಗೆ ಅಮೃತ ಮಹೋತ್ಸವ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಬ್ಯಾಂಕಿನ ಸದಸ್ಯರ, ಗ್ರಾಹಕರ, ಸಾರ್ವಜನಿಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷರಾದ ಎಸ್.ಆರ್. ಲಕ್ಷ್ಮಿಕಾಂತರೆಡ್ಡಿ ಅವರ ಮಹಾದಾಸೆಯಂತೆ ಆಡಳಿತ ಮಂಡಳಿಯ ಸರ್ವಾನುಮತದ ತೀರ್ಮಾನದಂತೆ ಬ್ಯಾಂಕಿನ ಸದಸ್ಯರ ಅಂತ್ಯ ಸಂಸ್ಕಾರ ನಿಧಿಯನ್ನು ಹಾಲಿ ಇರುವ ರೂ. 15,000 ದಿಂದ ರೂ. 25,000 ಕ್ಕೆ ಹೆಚ್ಚಿಸುವುದಾಗಿ ಘೋಷಣೆ ಮಾಡಿದಾಗ, ಸಭೆಯಲ್ಲಿ ಉಪಸ್ಥಿತರಿದ್ದ ಸರ್ವ ಸದಸ್ಯರು ಕರತಾಡನದ ಮೂಲಕ ಸ್ವಾಗತಿಸಿದರು.
ಇದನ್ನೂ ಓದಿ: ಈ ತರಕಾರಿಗಳನ್ನು ಹಸಿಯಾಗಿ ತಿನ್ನುವ ಬದಲು ಬೇಯಿಸಿ ತಿಂದರೆ ಹೆಚ್ಚು ಪ್ರಯೋಜನಕಾರಿಯಂತೆ
ಹಾಗೆಯೇ ಬ್ಯಾಂಕಿನ ಹತ್ತು ಹಲವು ಸೌಲಭ್ಯಗಳ ಜೊತೆಗೆ ದಶಕಗಳಿಂದ ಶೇರುದಾರರಿಗೆ ವಿತರಣೆ ಮಾಡಿಕೊಂಡು ಬರುತ್ತಿದ್ದ ಬ್ಯಾಂಕಿನ ಲಾಭಾಂಶವನ್ನು ಈ ವರ್ಷವೂ ಶೇ. 25 ರಷ್ಟು ವಿತರಣೆ ಮಾಡಲು ಸಭೆಯ ಒಪ್ಪಿಗೆ ಕೇಳಿದಾಗ ಮತ್ತೊಮ್ಮೆ ಕರತಾಡನದೊಂದಿಗೆ ಸದಸ್ಯರು ಒಪ್ಪಿಗೆ ಸೂಚಿಸಿದರು.
ನಿಕಟಪೂರ್ವ ಅಧ್ಯಕ್ಷರ ಮಹಾದಾಸೆಯಂತೆ ಬ್ಯಾಂಕಿನಲ್ಲಿ ಸಾಲ ತೆಗೆದುಕೊಳ್ಳುವ ಬಡ, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಾಯಿದೆ ಸಾಲದ ಬಡ್ಡಿ ದರವನ್ನು ಶೇ.13 ರಿಂದ 10ಕ್ಕೆ ಇಳಿಸುವುದಾಗಿಯೂ, ಎಲ್ಲಾ ರೀತಿಯ ಸಾಲಗಳ ಮೇಲೆ ಈಗಿರುವ ಬಡ್ಡಿ ದರವನ್ನು ಶೇ. 0.50 ರಷ್ಟು ಬಡ್ಡಿ ಕಡಿಮೆ ಮಾಡಲಾಗುವುದು ಎಂದು ಹೇಳಿದರು.
ಬ್ಯಾಂಕು 2025-26ನೇ ಸಾಲಿನಲ್ಲಿ ಅಂದರೆ 31-03-2026ರ ಅಂತ್ಯಕ್ಕೆ ಬ್ಯಾಂಕಿನ ತೆರಿಗೆ ಮತ್ತು ಅವಕಾಶಗಳ ಮುಂಚಿನ ವರಮಾನವು ರೂ. 5.57 ಕೋಟಿಗಳಿದ್ದು, ಈ ಪೈಕಿ ತೆರಿಗೆ ಮತ್ತು ಅವಕಾಶಗಳಿಗೆ ರೂ. 1.71 ಕೋಟಿ ಪಾವತಿಸಿದ ನಂತರ ನಿವ್ವಳ ವರಮಾನವು ರೂ. 3.86 ಕೋಟಿಗಳಾಗಿರುತ್ತದೆ ಎಂದು ರಘುರಾಮರೆಡ್ಡಿ ಬ್ಯಾಂಕಿನ ನಿವ್ವಳ ಅನುತ್ಪಾದಕ ಸಾಲ ಶೂನ್ಯ ಪ್ರಮಾಣದಲ್ಲಿರುವುದು ಬ್ಯಾಂಕಿನ ಸದೃಢತೆಯನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: ಈ ಯೋಗಾಸನಗಳು 40 ವರ್ಷದ ನಂತರವೂ ನೀವು ಯಂಗ್ ಆಗಿ ಕಾಣುವಂತೆ ಮಾಡುತ್ತದೆಯಂತೆ
2026-27ನೇ ಸಾಲಿನ ಆಯವ್ಯಯಕ್ಕೆ ಸದಸ್ಯರುಗಳಿಂದ ಅನುಮೋದನೆ ಪಡೆದರು.
ಇದೇ ಸಂದರ್ಭದಲ್ಲಿ 42 ವರ್ಷಗಳ ಕಾಲ ಬ್ಯಾಂಕಿನ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಮೂರೂವರೆ ದಶಕಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಹಾಲಿ ನಿರ್ದೇಶಕರಾಗಿರುವ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಸ್.ಆರ್. ಲಕ್ಷ್ಮಿಕಾಂತರೆಡ್ಡಿ ಅವರನ್ನು ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು.
ಲಕ್ಷ್ಮೀಕಾಂತರೆಡ್ಡಿ ಅವರು ಬ್ಯಾಂಕಿಗೆ ಸಲ್ಲಿಸಿರುವ ಸೇವೆ ಹಾಗೂ ಸಾಧನೆಯ ಸಂಕ್ಷಿಪ್ತ ಪರಿಚಯವನ್ನು ಬ್ಯಾಂಕಿನ ನಿರ್ದೇಶಕ ಶ. ಮಂಜುನಾಥ ವಾಚನ ಮಾಡಿದರು.
ಬ್ಯಾಂಕಿನ ನಿರ್ದೇಶಕ ಪಿ.ಎಲ್. ಸುರೇಶ್ ರಾಜು ಸ್ವಾಗತಿಸಿದರು. ಬ್ಯಾಂಕಿನ ಹಿರಿಯ ಸದಸ್ಯರು, ಸದಸ್ಯರ ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗದವರ ಎಸ್.ಎಸ್.ಎಲ್.ಸಿ., ಪಿ.ಯು.ಸಿ.ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪ್ರತಿಭಾನ್ವಿತರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ: ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
2024-25ನೇ ಸಾಲಿನ ಸರ್ವ ಸದಸ್ಯರ ನಡವಳಿಗಳನ್ನು ಅಂಗೀಕರಿಸಿ, ಅನುಮೋದಿಸುವ ವರದಿಯನ್ನು ಶಾಖಾ ವ್ಯವಸ್ಥಾಪಕ ಬಿ.ಎಸ್. ತಿಪ್ಪೇಸ್ವಾಮಿ ವಾಚನ ಮಾಡಿದರು.
ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ಮಲ್ಲಿಕಾರ್ಜುನ ಸಭೆಯ ಕಾರ್ಯ ಕಲಾಪಗಳನ್ನು ಯಶಸ್ವಿಯಾಗಿ ನಿರ್ವಹಿಸಿದರೆ, ಬ್ಯಾಂಕಿನ ನಿರ್ದೇಶಕ ಶ. ಮಂಜುನಾಥ ವಂದನಾರ್ಪಣೆ ಮಾಡಿದರು.
ಸರ್ವ ಸದಸ್ಯರ ಸಭೆಯಲ್ಲಿ ಆಡಳಿತ ಮಂಡಳಿ ನಿರ್ದೇಶಕರು, ಬ್ಯಾಂಕಿನ ಸಿಬ್ಬಂದಿ ವರ್ಗ ಹಾಗೂ ಶೇರುದಾರರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

