By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ
    ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ 
    22 minutes ago
    ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
    ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
    1 hour ago
    ಶಾಸಕ ಟಿ.ರಘುಮೂರ್ತಿ ಜನ್ಮ ದಿನಾಚರಣೆಯಲ್ಲಿ ಮಠಾಧೀಶರು ಭಾಗೀ
    ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ದೊರೆಯಲಿ | ಮಠಾಧೀಶರ ಕೂಗು 
    2 hours ago
    ಅರ್ಜಿ ಅಹ್ವಾನ
    ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
    3 hours ago
    ಟಿ. ರಘುಮೂರ್ತಿ
    ಟಿ.ರಘುಮೂರ್ತಿಗೆ ಬರ್ತ್‌ ಡೇ ಗಿಫ್ಟ್‌ ಕೊಡ್ತಾರಾ ಡಿಕೆಶಿ ..?!
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    5 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    5 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    6 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    5 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 month ago
  • Life Style
    Life StyleShow More
    Tube block
    ಮುಟ್ಟಿನ ಸಮಯದಲ್ಲಿ ನೀವು ಮಾಡುವಂತಹ ಈ ತಪ್ಪು ಟ್ಯೂಬ್ ಬ್ಲಾಕ್‌ಗೆ ಕಾರಣವಾಗಬಹುದು ಎಚ್ಚರ
    13 hours ago
    ace pack or scrub
    ಫೇಸ್ ಪ್ಯಾಕ್ ಅಥವಾ ಸ್ಕ್ರಬ್ ಹಚ್ಚುವಾಗ ಈ ತಪ್ಪುಗಳನ್ನು ಮಾಡಬೇಡಿ
    14 hours ago
    Use this fruit hair mask to stop hair fall
    ಕೂದಲು ಉದುರುವುದು ನಿಲ್ಲಲು ಈ ಹಣ್ಣಿನ ಹೇರ್ ಮಾಸ್ಕ್ ಬಳಸಿ
    2 days ago
    Goddess Lakshmi
    ನಿಮ್ಮ ಅತ್ತೆಯ ಮನೆಯಿಂದ ಈ ವಸ್ತುಗಳನ್ನು ಎಂದಿಗೂ ತರಬೇಡಿ, ಇದರಿಂದ ಲಕ್ಷ್ಮಿ ದೇವಿ ಕೋಪಗೊಳ್ಳಬಹುದು
    2 days ago
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    3 days ago
Reading: ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | ಸಹಕಾರ ಕ್ಷೇತ್ರದ ಗಣನೀಯ ಸೇವೆಗೆ ಸಂದ ಗೌರವ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | ಸಹಕಾರ ಕ್ಷೇತ್ರದ ಗಣನೀಯ ಸೇವೆಗೆ ಸಂದ ಗೌರವ

News Desk Chitradurga News
Last updated: 21 August 2025 17:06
News Desk Chitradurga News
10 months ago
Share
ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ
SHARE

CHITRADURGA NEWS | 21 AUGUST 2025

ಚಿತ್ರದುರ್ಗ: ಸಹಕಾರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಗಣನೀಯ ಸೇವೆ ಸಲ್ಲಿಸಿರುವ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಿ.ಸುಧಾಕರ್ ಅವರ ಸಹಕಾರಿ ಸೇವೆ ಗುರುತಿಸಿ, ಸರ್ಕಾರ 2024ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದೆ.

ಇದನ್ನೂ ಓದಿ: ಮಳೆಯಿಂದ ಈರುಳ್ಳಿ ಬೆಳೆ ಹಾನಿ | ಪರಿಹಾರಕ್ಕೆ ಅರ್ಜಿ

ಬೆಂಗಳೂರಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಟಿ. ದೇವೇಗೌಡ ಅವರು ಸಚಿವ ಡಿ.ಸುಧಾಕರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿ, ಸನ್ಮಾನಿಸಿದರು.

ಹಲವು ದಶಕಗಳಿಂದ ಸಹಕಾರ ಕ್ಷೇತ್ರದ ಮುಖಂಡರಾಗಿ ಸೇವೆ ಸಲ್ಲಿಸುವ ಮೂಲಕ ಹಲವಾರು ಸಂಘ ಸಂಸ್ಥೆಗಳ ಸ್ಥಾಪನೆ, ಬೆಳವಣಿಗೆ, ಅಭಿವೃದ್ಧಿಗೆ ಸಚಿವ ಡಿ.ಸುಧಾಕರ್ ಶ್ರಮಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್. ನವೀನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ: 

ಚಿತ್ರದುರ್ಗ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತವಾಗಿ, ಧರ್ಮಾತೀತವಾಗಿ ಹೆಸರಿಸಬಹುದಾದ ಕೆಲವೇ ವ್ಯಕ್ತಿಗಳಲ್ಲಿ ಡಿ.ಸುಧಾಕರ್ ರವರು ಒಬ್ಬರು. ಸಹಕಾರ ಕ್ಷೇತ್ರದಲ್ಲಿ ಸುಮಾರು 25 ವರ್ಷಗಳಿಂದ ಅವಿರತ ಸೇವೆ ಸಲ್ಲಿಸುತ್ತಿದ್ದಾರೆ. 

ಇದನ್ನೂ ಓದಿ: POP ನಿಷೇಧ | ಪರಿಸರ ಸ್ನೇಹಿ ಗಣೇಶ ಉತ್ಸವ ಆಚರಣೆಗೆ ಡಿಸಿ ಕರೆ

ತಮ್ಮ ಜೀವನದಲ್ಲಿ ಸಮಾನತೆ, ಸಹಬಾಳ್ವೆ, ಸಹಕಾರ, ಸಮರಸವನ್ನು ಅಳವಡಿಸಿಕೊಂಡು ಸಹಕಾರ ರಂಗದಲ್ಲಿ ದುಡಿಯುತ್ತಿದ್ದಾರೆ. ಇವರ ಸಹಕಾರ ಕ್ಷೇತ್ರದ ಸೇವೆ ಚಿತ್ರದುರ್ಗ ಜಿಲ್ಲೆಗೆ ಸೀಮಿತವಾಗದೆ ರಾಜ್ಯ ಮಟ್ಟದಲ್ಲೂ ವ್ಯಾಪಿಸಿರುತ್ತದೆ. ಇವರು 2003ನೇ ಸಾಲಿನಲ್ಲಿ ಚಳ್ಳಕೆರೆಯ ಹೊಯ್ಸಳ ಕ್ರೆಡಿಟ್ ಸೌಹಾರ್ಧ ಸಹಕಾರಿ ಸಂಸ್ಥೆಯ ಸಂಸ್ಥಾಪಕರಾಗಿ ಸಂಘ ನೋಂದಾಯಿಸಿ ಈ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿ ಆಯ್ಕೆಯಾಗಿ ಇದುವರೆವಿಗೂ ಅಂದರೆ ಸುಮಾರು 22 ವರ್ಷಗಳಿಂದ ಈ ಸಂಸ್ಥೆಯ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದು, ಇವರ ಆಡಳಿತ ವೈಖರಿ ಅನುಕರಣೀಯವಾಗಿರುತ್ತದೆ. 

ಈ ಸಂಘವು ರೂ.102.63 ಕೋಟಿಯ ದುಡಿಯುವ ಬಂಡವಾಳ, ರೂ. 111.72 ಕೋಟಿಗಳ ವ್ಯವಹಾರ, ರೂ.5.63 ಕೋಟಿಗಳ ನಿವ್ವಳ ಲಾಭಗಳಿಸಿ ಶೇ.25 ಡಿವಿಡೆಂಡ್‍ನ್ನು ಸದಸ್ಯರಿಗೆ ನೀಡಿ ಸದಸ್ಯರ ಹಾಗೂ ಗ್ರಾಹಕರ ನಂಬಿಕೆ, ವಿಶ್ವಾಸಕ್ಕೆ ಪಾತ್ರವಾಗಿದ್ದು, ಈ ಸಂಸ್ಥೆಯು ಇವರ ನಾಯಕತ್ವ ಹಾಗೂ ಮುಂದಾಳತ್ವದಲ್ಲಿ ಪ್ರಗತಿಯ ಪಥದತ್ತ ಸಾಗುತ್ತಿದೆ.

ಚಳ್ಳಕೆರೆ ತಾಲ್ಲೂಕು ನಗರಂಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸುಮಾರು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. 2004 ರಿಂದ 2024 ರವರೆಗೆ 5 ವರ್ಷಗಳ ಅವಧಿಗಳಲ್ಲಿ ನಡೆದ ಚಿತ್ರದುರ್ಗ ಡಿಸಿಸಿ ಬ್ಯಾಂಕಿನ ಚುನಾವಣೆಗಳಲ್ಲಿ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆಯಾಗಿ ನಂತರ ಬ್ಯಾಂಕಿನ ಅಧ್ಯಕ್ಷರಾಗಿ 20 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸೆಪ್ಟೆಂಬರ್ 2024ರಲ್ಲಿ 2024 ರಿಂದ 2029ರ 5 ವರ್ಷಗಳ ಅವಧಿಗೆ ನಡೆದ ಡಿ.ಸಿ.ಸಿ ಬ್ಯಾಂಕಿನ ಚುನಾವಣೆಯಲ್ಲಿ ನಿರ್ದೇಶಕರಾಗಿ ಮರು ಆಯ್ಕೆಯಾಗಿ ಮತ್ತೊಮ್ಮೆ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿನಿ ಕೊಲೆ ಖಂಡಿಸಿ ಎಬಿವಿಪಿ ಪ್ರತಿಭಟನೆ | ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಇವರು ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಜಿಲ್ಲೆಯ ಸಣ್ಣ, ಅತಿಸಣ್ಣ ರೈತರಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ, ಅಲ್ಪಸಂಖ್ಯಾತ ಮತ್ತು ಮಹಿಳಾ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡಲಾಗಿದೆ ಮತ್ತು ಬ್ಯಾಂಕ್ ಲಾಭಗಳಿಸಲು ಸಾಧ್ಯವಾಗಿರುತ್ತದೆ. ಅಲ್ಲದೇ ಬ್ಯಾಂಕ್ ಇತಿಹಾಸದಲ್ಲಿ ಇವರ ಅಧ್ಯಕ್ಷತೆಯಲ್ಲಿ ಬ್ಯಾಂಕ್ 2018-2019ನೇ ಸಾಲಿನಿಂದ ಬ್ಯಾಂಕಿನ ಸದಸ್ಯರುಗಳಿಗೆ ಡಿವಿಡೆಂಡ್‍ನ್ನು ನೀಡಲಾಗುತ್ತಿದೆ. 

ಡಿ.ಸಿ.ಸಿ. ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಮುಖ ಆಧ್ಯತೆಯನ್ನು ನೀಡಿ ಬ್ಯಾಂಕ್ ಪ್ರಗತಿ ಪಥದತ್ತ ಸಾಗಲು ಶ್ರಮಿಸಿರುತ್ತಾರೆ. 2013-14ರಲ್ಲಿ ಬ್ಯಾಂಕಿನ ದುಡಿಯುವ ಬಂಡವಾಳ ರೂ.205.29ಕೋಟಿ ಇದ್ದು, 2024-25ನೇ ಸಾಲಿನ ಅಂತ್ಯಕ್ಕೆ ರೂ. 1338.40ಕೋಟಿ ಇರುತ್ತದೆ. ಬ್ಯಾಂಕಿನಿಂದ 71207 ರೈತರಿಗೆ ರೂ.703.00 ಕೋಟಿ ಕೃಷಿ ಸಾಲ ನೀಡಲಾಗಿದೆ. 280.00 ಕೋಟಿ ಕೃಷಿಯೇತರ ಸಾಲ ನೀಡಲಾಗಿದೆ. ಬ್ಯಾಂಕ್ ಪ್ರತಿ ವರ್ಷ ಲಾಭ ಗಳಿಸುತ್ತಿದ್ದು, 2024-25ನೇ ಸಾಲಿಗೆ ರೂ.8.03 ಕೋಟಿ ಲಾಭ ಗಳಿಸಿದೆ.

ಸಿಡಿಸಿಸಿ ಬ್ಯಾಂಕಿನ ಪ್ರತಿನಿಧಿಯಾಗಿ ಕರ್ನಾಟಕ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕಿನ ನಿರ್ದೇಶಕರಾಗಿ ಸುಮಾರು 15 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದು, ಜಿಲ್ಲೆಯ ಸಹಕಾರ ಸಂಘಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ.  

ಇದನ್ನೂ ಓದಿ: ಬಯಲು ಸೀಮೆಗೆ ಗೋಡಂಬಿ ಸೂಕ್ತ | ಕಡಿಮೆ ನೀರು, ನಿರ್ವಹಣೆ ವರದಾನ

ಬ್ಯಾಂಕಿನ ಅಧ್ಯಕ್ಷರ ಕ್ರಿಯಾಶೀಲ ನಾಯಕತ್ವದ ಶ್ರಮದಿಂದ 2017-18ನೇ ಸಾಲಿನಲ್ಲಿ ಬ್ಯಾಂಕ್ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಿದ್ದಕ್ಕಾಗಿ ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಕರ್ನಾಟಕ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕಿನಿಂದ ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗೀಕರಣ ಗಳಿಸಿರುವ ಬ್ಯಾಂಕ್‍ಗಳ ಪೈಕಿ ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಉತ್ತಮ ಸಾಧನೆ ಮಾಡಿರುವುದನ್ನು ಪರಿಗಣಿಸಿ ರಾಜ್ಯಕ್ಕೆ ಪ್ರಥಮ ಸ್ಥಾನದ ಪ್ರಶಸ್ತಿ ನೀಡಿರುತ್ತಾರೆ.

ಬ್ಯಾಂಕಿನ 65 ವರ್ಷಗಳ ಇತಿಹಾಸದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಿಂದ ಜಿಲ್ಲಾ ಬ್ಯಾಂಕುಗಳಿಗೆ ನೀಡುವ ಪ್ರಶಸ್ತಿಯಲ್ಲಿ 2017-18ನೇ ಸಾಲಿಗೆ ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಪ್ರಥಮ ಪ್ರಶಸ್ತಿ ಗಳಿಸಿರುವುದು ಬ್ಯಾಂಕಿನ ಪ್ರಗತಿಯ ಸಂಕೇತವಾಗಿವೆ. 

2019ರಲ್ಲಿ ಪುನಃ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಿಂದ ಜಿಲ್ಲಾ ಬ್ಯಾಂಕುಗಳಿಗೆ ನೀಡುವ ಪ್ರಶಸ್ತಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. 2021-22ನೇ ಸಾಲಿನಲ್ಲಿ ಓಂಈSಅಔಃ ಮುಂಬೈ ಇವರು ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಡಿ.ಸಿ.ಸಿ ಬ್ಯಾಂಕ್‍ಗಳಿಗೆ ನೀಡುವ ಪ್ರಶಸ್ತಿಯಲ್ಲಿ ಚಿತ್ರದುರ್ಗ ಡಿ.ಸಿ.ಸಿ ಬ್ಯಾಂಕಿಗೆ 2ನೇ ಅತ್ಯುತ್ತಮ ಪ್ರಶಸ್ತಿ ನೀಡಿರುತ್ತದೆ. ಈ ಪ್ರಶಸ್ತಿಗಳಿಂದ ಚಿತ್ರದುರ್ಗ ಜಿಲ್ಲೆಯ ಸಹಕಾರಿ ಕ್ಷೇತ್ರದ ಗೌರವ ಹೆಚ್ಚಿಸಿದಂತಾಗಿದೆ.

ಇದನ್ನೂ ಓದಿ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ | ಅರ್ಜಿ ಆಹ್ವಾನ

ಇತರೆ ಕ್ಷೇತ್ರಗಳಲ್ಲಿ ಮಾಡಿರುವ ಸೇವೆ: ಸುಮಾರು 20 ವರ್ಷಗಳ ಹಿಂದೆ ಚಳ್ಳಕೆರೆಯಲ್ಲಿ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಇದರ ಅಧ್ಯಕ್ಷರಾಗಿ ಈ ಸಂಸ್ಥೆಯ ಮೂಲಕ ಸಾವಿರಾರು ಬಡ ಮಕ್ಕಳ ಶಿಕ್ಷಣಕ್ಕೆ ಮತ್ತು ಅವರ ಮುಂದಿನ ಜೀವನಕ್ಕೆ ದಾರಿ ದೀಪವಾಗಿದ್ದಾರೆ.

ಚಳ್ಳಕೆರೆಯಲ್ಲಿ ಪಾಶ್ರ್ವನಾಥಜೈನ್ ಮಂದಿರದ ಟ್ರಸ್ಟ್‍ನ್ನು ಸ್ಥಾಪಿಸಿ ಎಲ್ಲಾ ವರ್ಗದ ಬಡ ಮಕ್ಕಳಿಗೆ ಶಿಕ್ಷಣ, ಹಿರಿಯರಿಗೆ, ಮಹಿಳೆಯರಿಗೆ ಆರ್ಥಿಕ ಧನ ಸಹಾಯ ನೀಡುತ್ತಿದ್ದಾರೆ, ಗೋಶಾಲೆ ಸ್ಥಾಪಿಸಿ ಹೊರರಾಜ್ಯದಿಂದ ಗೋವುಗಳಿಗೆ ಮೇವನ್ನು ತರಿಸಿ ಸಹಾಯ ಮಾಡಿರುತ್ತಾರೆ. ಈ ಎಲ್ಲಾ ಸಾಮಾಜಿಕ ಕಾರ್ಯಗಳಿಂದ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

2003ರಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿ ಜನರ ಸೇವೆಯನ್ನು ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಂತರ 2008 ರಲ್ಲಿ ಜರುಗಿದ ಸಾರ್ವರ್ತಿಕ ಚುನಾವಣೆಯಲ್ಲಿ ಹಿರಿಯೂರು ವಿಧಾನ ಸಭಾಕ್ಷೇತ್ರದ ಶಾಸಕರಾಗಿ ಚುನಾಯಿತರಾಗಿ ನಂತರರಾಜ್ಯ ಸರ್ಕಾರದ ಸಮಾಜಕಲ್ಯಾಣ ಸಚಿವರು ಹಾಗೂ ಮುಜರಾಯಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. 

ಇದನ್ನೂ ಓದಿ: ಆಗಸ್ಟ್ 25 ರಿಂದ ನೀರು ಮತ್ತು ನೈರ್ಮಲ್ಯದ ಕುರಿತು ಪ್ರಬಂಧ, ಚಿತ್ರಕಲಾ ಸ್ಪರ್ಧೆ

ಪುನಃ 2013ರಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಇವರ ಜನಪರ ಕಾಳಜಿ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಮಾಡಿರುವ ಕೆಲಸ ಕಾರ್ಯಗಳಿಂದ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿರುತ್ತಾರೆ. ನಂತರ 2023ರಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿ ಪ್ರಸ್ತುತ ರಾಜ್ಯ ಸರ್ಕಾರದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾಗಿ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಜನಪ್ರಿಯ ಶಾಸಕರಾಗಿ ಮತ್ತು ಶ್ರೇಷ್ಠ ಸಹಕಾರಿಯಾಗಿ, ರಾಜಕೀಯ ಕ್ಷೇತ್ರದಲ್ಲಿ ಮತ್ತು ಸಹಕಾರ ರಂಗದಲ್ಲಿ ಅಭಿವೃದ್ಧಿ ಪರ ಕೆಲಸವನ್ನು ಮಾಡುತ್ತಿದ್ದಾರೆ.

ಬಹುಮುಖ ವ್ಯಕ್ತಿತ್ವದ ಗರಿಷ್ಟ ಸೇವಾ ಮನೋಭಾವದ ಸಚಿವ ಡಿ.ಸುಧಾಕರ್ ಅವರು ಸಹಕಾರ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಸಾಮಾಜಿಕ ಕ್ಷೇತ್ರದಲ್ಲಿ, ರಾಜಕೀಯ ಕ್ಷೇತ್ರದಲ್ಲಿ ಪ್ರಶಂಸನೀಯ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಜನ ಸಾಮಾನ್ಯರ ಏಳಿಗೆಗೆ ಶ್ರಮಿಸಿದವರಾಗಿದ್ದು, ಎಲ್ಲಾ ವರ್ಗಗಳ ಜನರ ಪ್ರೀತಿ ಗೌರವಗಳಿಗೆ ಪಾತ್ರರಾಗಿದ್ದಾರೆ. ಅವರು ಸೇವೆಗೆ ಆಯ್ಕೆ ಮಾಡಿಕೊಂಡಿರುವ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಯ ದೂರ ದೃಷ್ಟಿಯನ್ನು ಇಟ್ಟುಕೊಂಡು ತಮ್ಮದೇ ಆದ ಅಭಿವೃದ್ಧಿ ಕಲ್ಪನೆಗಳನ್ನು ಹೊಂದಿರುತ್ತಾರೆ. ಅವುಗಳನ್ನು ಸಾಕಾರಗೊಳಿಸಲು ದಾಪುಗಾಲಿಡುತ್ತಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCooperative Ratna AwardCooperative SectorMinister D. SudhakarSignificant Serviceಗಣನೀಯ ಸೇವೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಚಿವ ಡಿ.ಸುಧಾಕರ್ಸಹಕಾರ ಕ್ಷೇತ್ರಸಹಕಾರ ರತ್ನ ಪ್ರಶಸ್ತಿ
Share This Article
Facebook Email Print
Previous Article ಹಿರಿಯೂರು ಮಾಜಿ ಶಾಸಕ ಆರ್.ರಾಮಯ್ಯ ನಿಧನ
Next Article ಯರಬಳ್ಳಿ ಪಿಎಂ ಶ್ರೀ ಸರ್ಕಾರಿ ಶಾಲೆಗೆ ಸಮಗ್ರ ಪ್ರಶಸ್ತಿ
Leave a Comment

Leave a Reply Cancel reply

Your email address will not be published. Required fields are marked *

ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ
ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ 
ಮುಖ್ಯ ಸುದ್ದಿ
ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
ಮುಖ್ಯ ಸುದ್ದಿ
ಶಾಸಕ ಟಿ.ರಘುಮೂರ್ತಿ ಜನ್ಮ ದಿನಾಚರಣೆಯಲ್ಲಿ ಮಠಾಧೀಶರು ಭಾಗೀ
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ದೊರೆಯಲಿ | ಮಠಾಧೀಶರ ಕೂಗು 
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up