ಚಿತ್ರದುರ್ಗ ನ್ಯೂಸ್.ಕಾಂ: ನಮ್ಮ ಸರ್ಕಾರದಲ್ಲಿ ಎಲ್ಲರೂ ಒಂದೆ, ಸಿಎಂ, ಡಿಸಿಎಂ ಎಂಬ ಪ್ರತ್ಯೇಕ ತಂಡಗಳಿಲ್ಲ, ನಮ್ಮದೆಲ್ಲಾ ಒಂದೇ ಕಾಂಗ್ರೆಸ್ ಟೀಮ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಾಸಕರ ನಡುವೆ ಯಾವುದೇ ಭಿನ್ನಮತ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯಲ್ಲಿ ಟಿಕೇಟಿಗಾಗಿ ಹಣ ಪಡೆದಿರುವ ಆರೋಪಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಬಿಜೆಪಿ ಪಕ್ಷದ ಆಂತರಿಕ ವಿಚಾರದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ಈಗಾಗಲೇ ಕೆಲವರು ಇಂಥದ್ದೆ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.

ನಮ್ಮದು ಅಲ್ಪಾವಧಿ ಸರ್ಕಾರ ಅಲ್ಲ. 5 ವರ್ಷ ಪೂರೈಸಿ ಮುಂದಿನ 5 ವರ್ಷಕ್ಕೂ ಆಡಳಿತಕ್ಕೆ ಬರುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ವಿದ್ಯುತ್ ಕೃತಕ ಅಭಾವ ಸೃಷ್ಟಿಸುವ ಪ್ರಮೇಯವೇ ಇಲ್ಲ. ರಾಜ್ಯದಲ್ಲಿ ಬರ ಇದೆ. ಡ್ಯಾಂ ಗಳಲ್ಲಿ ನೀರಿಲ್ಲ. ಕಲ್ಲಿದ್ದಲು ಅಭಾವ ಇದೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಮಾಡಿದ್ದನ್ನು ನಮ್ಮ ಮೇಲೆ ಹೊರಿಸುತ್ತಿದ್ದಾರೆ. ನಮಗೆ ಕಮಿಷನ್ ಪಡೆಯುವುದು, ಕಟ್ ರೂಟ್ ಆಡಳಿತ ನಡೆಸುವುದು ಗೊತ್ತಿಲ್ಲ ಎಂದು ಎಚ್.ಡಿ.ಕೆ ಹೇಳಿಕೆಗೆ ಟಾಂಗ್ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
