CHITRADURGA NEWS | 22 DECEMBER 2024
ಹೊಸದುರ್ಗ: ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನ ಮಠಕ್ಕೆ ಭಾನುವಾರ ಶಾಸಕ ಬಿ.ಜಿ.ಗೋವಿಂದಪ್ಪ ಭೇಟಿ ನೀಡಿ ಶ್ರೀ ಶಾಂತವೀರ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಇದನ್ನೂ ಓದಿ: ಮೆದೇಹಳ್ಳಿ ಅಂಡರ್ಪಾಸ್ ಇನ್ನುಮುಂದೆ ಜಯದೇವ ವೃತ್ತ(ಸರ್ಕಲ್)
ಇದೇ ವೇಳೆ ಶ್ರೀಗಳ ಆಶೀರ್ವಾದ ಪಡೆದು, ಗೌರವಿಸಿದರು. ಶಾಸಕರನ್ನು ಮಠದಿಂದ ಶ್ರೀಗಳು ಹಾಗೂ ಭಕ್ತರು ಗೌರವಿಸಿ ಸನ್ಮಾನಿಸಿದರು.
ಹೊಸದುರ್ಗದಲ್ಲಿ ವಧು-ವರರ ಸಮಾವೇಶ:
ಇದೇ ವೇಳೆ ನಡೆದ ಸಭೆಯಲ್ಲಿ, ಪ್ರತಿ ವರ್ಷ ನಡೆಯುವ ಸಂಗಮೇಶ್ವರ ಜಯಂತಿ ಕಾರ್ಯಕ್ರಮವನ್ನು ಈ ವರ್ಷ ಹೊಸದುರ್ಗದಲ್ಲೇ ವಧು-ವರರ ಸಮಾವೇಶವಾಗಿ ಆಚರಣೆ ಮಾಡಲು ತೀರ್ಮಾನಿಸಲಾಯಿತು.
ಇದನ್ನೂ ಓದಿ:ವಾಣಿವಿಲಾಸ ಸಾಗರದಲ್ಲಿ 29.74 ಟಿಎಂಸಿ ನೀರು ಜಮಾವಣೆ
2009 ರಿಂದ ಪ್ರತಿ ತಿಂಗಳು ನಡೆಯುತ್ತಿದ್ದ ಸುಜ್ಞಾನ ಸಂಗಮ ಕಾರ್ಯಕ್ರಮವನ್ನು ಪ್ರತಿ ತಿಂಗಳ 10ನೇ ತಾರೀಖಿನಂದು ಪ್ರತಿ ತಿಂಗಳು ಒಂದೊಂದು ಹಳ್ಳಿಯಲ್ಲಿ ಆಚರಣೆ ಮಾಡಲು ತೀರ್ಮಾನಿಸಲಾಯಿತು.
ಸಮಾಜದ ಮುಖಂಡರಾದ ಎಸ್.ಲಿಂಗಮೂರ್ತಿ, ಗುರುಸ್ವಾಮಿ, ಕಲ್ಕೆರೆ ಶೇಖರಪ್ಪ, ದ್ಯಾಮಣ್ಣ, ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿವಾಸ್, ತಂಡಗದ ಕಲ್ಲೇಶಣ್ಣ, ತಣಿಗೆಕಲ್ಲು ಲೋಕೇಶ್, ಕೋಡಿಹಳ್ಳಿ ಧರಣಪ್ಪ, ಮಂಜುನಾಥ್ ಇತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
