ಚಿತ್ರದುರ್ಗ ನ್ಯೂಸ್.ಕಾಂ: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಯುವಕರನ್ನು ಶಿವಮೊಗ್ಗದಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಕರೆತಲಾಗಿದೆ.
ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಬಂಧಿತರನ್ನು ಮಾತನಾಡಿಸಲು ಜಿಲ್ಲಾ ಕಾರಾಗೃಹಕ್ಕೆ ಬಂದಿದ್ದರು. ಆದರೆ, ಅವರು ಬರುವಷ್ಟರಲ್ಲಿ ಕಾರಾಗೃಹದ ಸಾರ್ವಜನಿಕರ ಭೇಟಿ ಸಮಯ ಮೀರಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಶಾಸಕರಿಗೆ ಬಂಧಿತರ ಭೇಟಿಗೆ ಅವಕಾಶ ನಿರಾಕರಿಸಿದರು. ಸಮಯ ಮೀರಿದ ಕಾರಣಕ್ಕೆ ಶಾಸಕರು ವಾಪಾಸು ತೆರಳಿದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಔರಂಗಜೇಬ್ ಪರಿಚಯ:

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಒಬ್ಬೊಬ್ಬರನ್ನು ಪರಿಚಯ ಮಾಡುತ್ತಿದೆ. ಕಳೆದ ಅವಧಿಯಲ್ಲಿ ಟಿಪ್ಪು ಪರಿಚಯ ಮಾಡಿಸಿತ್ತು.
ಈ ಬಾರಿ ಔರಂಗಜೇಬನನ್ನು ಪರಿಚಯಿಸಿದೆ. ಸಿದ್ಧರಾಮಯ್ಯ ಆಡಳಿತದಲ್ಲೇ ಔರಂಗಜೇಬ್ ಬಂದಿದ್ದಾರೆ. ಮುಖ್ಯಮಂತ್ರಿ ಹಾಗೂ ಸಚಿವರ ಮಾತುಗಳ ಕುಮ್ಮಕ್ಕಿನಿಂದ ಈ ಕೃತ್ಯ ನಡೆದಿದೆ ಎಂದು ಶಾಸಕ ಚನ್ನಬಸಪ್ಪ ಸುದ್ದಿಗಾರರಿಗೆ ತಿಳಿಸಿದರು.
ಗಲಭೆ ಮಾಡಿರುವುದು ಒಂದು ಕೋಮಿನ ಕಿಡಿಗೇಡಿಗಳು. ಆದರೆ, ಕೆಲ ವಿದ್ಯಾರ್ಥಿಗಳನ್ನು ಬಂಧಿಸಿ ಕರೆತರಲಾಗಿದೆ. ಈ ಮೂಲಕ ಸರ್ಕಾರ ಹಿಂದುತ್ವವನ್ನು ಹತ್ತಿಕ್ಕುವ ಕೆಲಸಕ್ಕೆ ಕೈ ಹಾಕುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಹರಿ, ಬ್ರಹ್ಮ ಬಂದರೂ ಹಿಂದುತ್ವವನು ಹತ್ತಿಕ್ಕುವುದು ಸಾಧ್ಯವಿಲ್ಲ ಎಂದರು.
ಸಚಿವ ರಾಮಲಿಂಗಾರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿ ಮುಖ ಮುಚ್ಚಿಕೊಂಡು ಹೋರಾಟ ನಡೆಸುವ ಸ್ಥಿತಿಯಲ್ಲಿಲ್ಲ. ಇಷ್ಟೂ ವರ್ಷಗಳಲ್ಲಿ ಇಂತಹ ಕೆಲಸ ಮಾಡಿಲ್ಲ. ಯಾವತ್ತೂ ಮಾಡುವುದೂ ಇಲ್ಲ.
ಇದನ್ನೂ ಓದಿ: ಹಿಂದೂ ಮಹಾಗಣಪತಿಗೆ ಕಾಂಗ್ರೆಸ್ ಪೂಜೆ
ಏನೇ ಮಾಡಿದರೂ ನೇರವಾಗಿ ಮಾಡುತ್ತೇವೆ. ಬಹಳ ದೊಡ್ಡವರು ಯಾಕೆ ಹೀಗೆ ಮಾತನಾಡುತ್ತಾರೋ ಗೊತ್ತಿಲ್ಲ. ಇಂತಹ ಉದ್ಧಟತನದ ಹೇಳಿಕೆಗಳನ್ನು ನಿಲ್ಲಿಸಬೇಕು ಎಂದರು.
ನಮ್ಮ ಅಧಿಕಾರಿಗಳ ಕೈ ಕಟ್ಟಿ ಹಾಕದೇ ಅವರ ಪಾಡಿಗೆ ಬಿಟ್ಟರೆ ಎಲ್ಲವನ್ನೂ ಸರಿ ಮಾಡುತ್ತಾರೆ. ಈ ಕೃತ್ಯಗಳ ಹಿಂದಿರುವವರನ್ನು ಬಯಲಿಗೆ ತರುತ್ತಾರೆ ಎಂದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ನಗರ ಅಧ್ಯಕ್ಷ ನವೀನ್ ಚಾಲುಕ್ಯ, ಮುಖಂಡರಾದ ಮಲ್ಲಿಕಾರ್ಜುನ್, ನಾಗರಾಜ್ ಬೇದ್ರೆ, ನರೇಂದ್ರ ಹೊನ್ನಾಳ್ ಮತ್ತಿತರರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
