CHITRADURGA NEWS | 23 JUNE 2025
ಚಿತ್ರದುರ್ಗ: ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಿತರಿಸಿದರು.
Also Read: ನಾಳೆ ವಿದ್ಯುತ್ ವ್ಯತ್ಯಯ | ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕರೆಂಟ್ ಕಟ್
ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಈಚೆಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14 ಮಂದಿ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಿಸಲಾಯಿತು.
2024-25ನೇ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಪಿಟ್ಮೆಂಟ್) ಯೋಜನೆಯಡಿ ದೈಹಿಕ ವಿಕಲಚೇತನರಿಗೆ 2 ಯಂತ್ರಚಾಲಿತ ದ್ವಿಚಕ್ರ ವಾಹನ, ಬ್ಯಾಟರಿಚಾಲಿತ ವೀಲ್ಚೇರ್ ಯೋಜನೆಯಡಿ 1 ಬ್ಯಾಟರಿ ಚಾಲಿತ ವೀಲ್ಚೇರ್, ಎಸ್ಎಸ್ಎಲ್ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆಯಡಿ 8 ಟಾಕಿಂಗ್ ಲ್ಯಾಪ್ಟಾಪ್ ಹಾಗೂ ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳ ಯೋಜನೆಯಡಿ 3 ಮಂದಿ ವಿಕಲಚೇತನರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.
Also Read: ಚಿತ್ರದುರ್ಗದ ಮುಖ್ಯ ರಸ್ತೆಗೆ ನರೇಂದ್ರ ಮೋದಿ ಹೆಸರು ನಾಮಕರಣ
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಎಂಆರ್ಡಬ್ಲ್ಯೂ ಮೈಲಾರಪ್ಪ ಸೇರಿದಂತೆ ವಿಕಲಚೇತನ ಫಲಾನುಭವಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number