
CHITRADURGA NEWS | 16 APRIL 2026
ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯತ್ ಸಮೀಪದಲ್ಲಿರುವಂತ ಡಾ.ಬಾಬು ಜಗಜೀವನ್ ರಾಮ್ ಸಮುದಾಯ ಭವನಕ್ಕೆ ಏಪ್ರಿಲ್ 15ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಭೇಟಿ ನೀಡಿ ಕುಂಠಿತವಾಗಿ ಬಿದ್ದಿದ್ದಂತ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ
ಭವನದ ಇತರೆ ಕಾಮಗಾರಿಗೆ ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲಾಗುವುದು, ಭವನದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಚಿತ್ರದುರ್ಗ ನಗರದಲ್ಲಿ ಎಲ್ಲಾ ಸಮುದಾಯದವರಿಗೂ ಪ್ರತ್ಯೇಕವಾದ ಭವನಗಳು ಇವೆ. ಅದರಂತೆ ದಲಿತ ಸಮುದಾಯದವರಿಗೆ ಅವಶ್ಯಕವಾಗಿ ಬೇಕಾಗಿರುವ ಡಾ. ಬಾಬು ಜಗಜೀವನ್ ರಾಮ್ ಭವನ ಕಾಮಗಾರಿ ಅರ್ಧದಲ್ಲೇ ಕುಂಠಿತವಾಗಿರುವುದು ಬೇಸರದ ವಿಚಾರ.
ಶೀಘ್ರವೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ, ಇನ್ನುಳಿದ ಭವನದ ಕಾಮಗಾರಿಗೆ ಶಾಸಕರ ಅನುದಾನದಿಂದ ಹಣವನ್ನು ಬಿಡುಗಡೆ ಮಾಡಿ, ಶೀಘ್ರವೇ ದಲಿತರ ಉದ್ದಾರಕ್ಕಾಗಿ ಭವನವನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಎಂಟು ವರ್ಷಗಳಿಂದ ಪಾಳು ಬಿದ್ದಿರುವಂತ ಡಾ.ಬಾಬು ಜಗಜೀವನ್ ರಾಮ್ ಭವನದ ಕಾಮಗಾರಿಯನ್ನು ಮುಗಿಸಿ ದಲಿತರಿಗೆ ಹಸ್ತಾಂತರ ಮಾಡಬೇಕೆಂದು ದಲಿತ ಮುಖಂಡರಿಂದ ಹಾಗೂ ಇತರೆ ಸಂಘ-ಸಂಸ್ಥೆಗಳಿಂದ ಅರ್ಜಿಗಳು ಸಹ ಬಂದಿದ್ದವು. ಅದರಂತೆ ಭವನವನ್ನ ಭೇಟಿ ಮಾಡಿದ್ದೇನೆ, ಭವನದ ಅರ್ಥದಷ್ಟು ಕೆಲಸಗಳು ಮುಗಿದಿವೆ, ಆದರೆ ಭವನದ ಇನ್ನಷ್ಟು ಮುಖ್ಯವಾದ ಕೆಲಸಗಳು ಆಗಬೇಕಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
ಅವುಗಳನ್ನು ತ್ವರಿತಗತಿಯಲ್ಲಿ ಕೆಲಸ ಮಾಡುವಂತಹ ಪ್ರಾಮಾಣಿಕವಾದ ಕೆಲಸವನ್ನ ಮಾಡುತ್ತೇನೆ. ದಲಿತ ಸಮುದಾಯಕ್ಕೆ ಅವಶ್ಯಕತೆ ಇರುವಂತ ಭವನವನ್ನ ಸಂಪೂರ್ಣವಾಗಿ ಕಾಮಗಾರಿಯನ್ನು ಮುಗಿಸಿ ಸಮುದಾಯದವರಿಗೆ ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದರು.
ಬಾಬು ಜಗಜೀವನ್ ರಾಮ್ ಸಮುದಾಯ ಭವನ 2018ರಲ್ಲಿ ಕಾಮಗಾರಿ ಪ್ರಾರಂಭವಾಗಿದ್ದು, 9 ಕೋಟಿ 90 ಲಕ್ಷ ವೆಚ್ಚದಲ್ಲಿ ಕಾಮಗಾರಿ ವೆಚ್ಚ ನಿರ್ಮಾಣವಾಗಬೇಕಾಗಿತ್ತು. ಆದರೆ ಭವನದ ಯೋಜನೆ ಬದಲಾವಣೆಯಾಗಿದ್ದರಿಂದ ಕಾಮಗಾರಿಯನ್ನು ಸಂಪೂರ್ಣವಾಗಿ ಮುಗಿಸುವುದಕ್ಕೆ ಸಾಧ್ಯವಾಗಿಲ್ಲ ಹಾಗಾಗಿ ಇನ್ನಷ್ಟು ಹಣವನ್ನು ಭವನಕ್ಕೆ ಮೀಸಲಿಟ್ಟರೆ ಭವನವು ಸಂಪೂರ್ಣವಾಗಿ ಕಾಮಗಾರಿ ಮುಗಿಯುತ್ತದೆ ಎಂದು ಅಧಿಕಾರಿಗಳು ಶಾಸಕರಿಗೆ ಮನವಿ ಮಾಡಿದರು.
ಸ್ಥಳದಲ್ಲೇ ಶಾಸಕರು ಭವನವನ್ನು ಸಂಪೂರ್ಣವಾಗಿ ವೀಕ್ಷಿಸಿ, ಭವನಕ್ಕೆ ಬೇಕಾಗುವ ಎಲ್ಲಾ ಖರ್ಚು ವೆಚ್ಚವನ್ನ ಬಿಡುಗಡೆ ಮಾಡಲಾಗುವುದು. ನಾಲ್ಕು ತಿಂಗಳೊಳಗೆ ಭವನದ ಎಲ್ಲಾ ಅಭಿವೃದ್ಧಿ ಕಾರ್ಯಗಳು ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಥಳದಲ್ಲಿ ಉತ್ತರಿಸಿದರು.
ಇದನ್ನೂ ಓದಿ: ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕ ಪರಮೇಶ್ವರಪ್ಪ, ಗ್ಯಾರಂಟಿ ಜಿಲ್ಲಾಧ್ಯಕ್ಷ ಶಿವಣ್ಣ, ಪಪ್ಪಿಸ್ ಸ್ಟೂಡೆಂಟ್ ವಿಂಗ್ ಅಧ್ಯಕ್ಷ ರವಿ ಚಿನ್ನು, ಕಾರ್ಯದರ್ಶಿ ಸಲೀಂ, ಪದಾಧಿಕಾಗಳಾದ ದರ್ಶನ್, ಹೇಮಂತ್ ಹಾಗೂ ದಲಿತ ಮುಖಂಡರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
