CHITRADURGA NEWS | 11 june 2025
ಚಿತ್ರದುರ್ಗ: ತಾಲೂಕಿನ ಜಾನುಕೊಂಡ ಗ್ರಾಮದಲ್ಲಿ ಬುಧವಾರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಮತ್ತು ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ, ಎಂ.ಜಿ.ಎನ್.ಆರ್. ಇ.ಜಿ.ಎ ಯೋಜನೆ, 15ನೇ ಹಣಕಾಸು ಯೋಚನೆ ಹಾಗೂ ಗ್ರಾಮ ಪಂಚಾಯಿತಿ ಇತರೆ ಯೋಜನೆಗಳ ಅನುದಾನದ ನೂತನ ಗ್ರಾಮ ಪಂಚಾಯಿತಿ ಕಟ್ಟಡದ ಭೂಮಿ ಪೂಜೆಯನ್ನು ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ನೆರವೇರಿಸಿದರು.
Also Read: ಜೀವನದಲ್ಲಿ ಅವಕಾಶಗಳು ಸಿಕ್ಕಾಗ ಸದ್ಬಳಕೆ ಮಾಡಿಕೊಳ್ಳಿ | ಶಾಂತವೀರ ಶ್ರೀ
ನಂತರ ಮಾತನಾಡಿದ ಶಾಸಕರು, ಗ್ರಾಮಗಳ ಅಭಿವೃದ್ಧಿ ವಿಚಾರಗಳಲ್ಲಿ ರಾಜಕಾರಣವನ್ನು ಮಾಡದೆ ಅಭಿವೃದ್ಧಿಯ ಕಡೆಗೆ ಆಲೋಚಿಸುವೆ ಎಂದು ತಿಳಿಸಿದರು.
ರಾಜಕಾರಣದಿಂದ ಹೆಸರು ಉಳಿಯುವುದಿಲ್ಲ, ಅಭಿವೃದ್ಧಿಯ ಕೊಡುಗೆ ನೀಡಿದಾಗ ಮಾತ್ರ ಹೆಸರು ಚಿರಾಯು ಆಗುವುದು ಹಾಗಾಗಿ ಗ್ರಾಮ ಪಂಚಾಯಿತಿ ಸದಸ್ಯರು ಒಮ್ಮತದಿಂದ ರಾಜಕಾರಣ ಮಾಡದೆ ಅಭಿವೃದ್ಧಿಯ ಕಡೆಗೆ ಕೈಜೋಡಿಸಬೇಕೆಂದು ಎಂದು ಹೇಳಿದರು.
ಜಾನುಕೊಂಡ ಗ್ರಾಮ ಪಂಚಾಯಿತಿಯ ನೂತನ ಕಟ್ಟಡಕ್ಕೆ 29.45ಲಕ್ಷ ಹಣವನ್ನ ಮೀಸಲಿಡಲಾಗಿದೆ, ಕಟ್ಟಡದ ಸೌಂದರ್ಯವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ವಿಶೇಷ ಅನುದಾನವನ್ನು ಸಹ ನೀಡಲಾಗುವುದು.
ಜಾನಕೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಹಳ್ಳಿಗಳಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಾಗಿವೆ, ಸಿಸಿ ರಸ್ತೆ, ಶುದ್ಧ ಕುಡಿಯುವ ನೀರಿನ ಘಟಕ, ಐ ಮಸ್ ಲೈಟ್, ಮುಜರಾಯಿ ಇಲಾಖೆಯ ದೇವಸ್ಥಾನಗಳ ಕಟ್ಟಡ, ಡಾಂಬರೀಕರಣ ಇತರೆ ವಿಶೇಷ ಯೋಜನೆಗಳ ಕಾಮಗಾರಿಗಳನ್ನ ಗ್ರಾಮಗಳಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ನಿರಂತರವಾಗಿ ನೀಡಬೇಕಿದಂತಹ ಕರೆಂಟೇನಲ್ಲಿ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ ಎಂದು ರೈತರು ಮನವಿ ಮಾಡಿದರು, ಮನವಿಗೆ ಸ್ಪಂದಿಸಿ ಸ್ಥಳದಲ್ಲೇ ಅಧಿಕಾರಗಳನ್ನು ಕರೆಸಿ ರೈತರಿಗೆ ಕರೆಂಟಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಿ ಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಹಸಿಲ್ದಾರ್ ಗೋವಿಂದರಾಜು ಮಾತನಾಡಿ, ಜಾನುಕೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಟಗರು ಹಟ್ಟಿ, ಕರಿಯಮ್ನಟ್ಟಿ, ಗಂಜಿಗಟ್ಟೆ, ಗ್ರಾಮಗಳನ್ನು ಈಗಾಗಲೇ ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿದ್ದು, ಸುಮಾರು 300 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡುವುದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳ ಪ್ಲಾನಿಂಗ್ ಕೂಡ ನಡೆಸಲಾಗಿದೆ ಎಂದು ತಿಳಿಸಿದರು.
ಜಾನುಕೊಂಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಸ್ವಾಮಿ ಮಾತನಾಡಿದರು.
Also Read: KRS ಮಾದರಿಯಲ್ಲಿ ವಿವಿ ಸಾಗರದ ಅಭಿವೃದ್ಧಿ | ಬೆಂಗಳೂರಿನಲ್ಲಿ ಮಹತ್ವದ ಸಭೆ | ಪ್ರವಾಸಿ ತಾಣವಾಗಿ ರೂಪಿಸಲು ಸೂಚನೆ
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಯರ್ರಿಸ್ವಾಮಿ, ರೂಪಕುಮಾರಿ, ಕೆಡಿಪಿ ಸದಸ್ಯರಾದ ನಾಗರಾಜ್, ಸಂತೋಷ್, ಜಾನುಕೊಂಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಕಾರ್ಯದರ್ಶಿ ನಾಗೇಶ್, ಜಾನುಕೊಂಡ ಗ್ರಾಮ ಪಂಚಾಯಿತಿ ಸದಸ್ಯರುಗಳು ಸೇರಿದಂತೆ ಇತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number