Connect with us

    ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

    ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

    ಮುಖ್ಯ ಸುದ್ದಿ

    ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 03 MAY 2024

    ಚಿತ್ರದುರ್ಗ: ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

    ಇದನ್ನೂ ಓದಿ : ಹೆಚ್ಚುತ್ತಿರುವ ಬಿಸಿಲು | ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯ ಇಲ್ಲಿದೆ ನೋಡಿ 

    ಶಾಸಕರಾಗಿ ಇದೇ ಪ್ರಥಮ ಬಾರಿಗೆ ಬಿ.ಎಲ್.ವೇಣು ಅವರ ನಿವಾಸಕ್ಕೆ ಆಗಮಿಸಿದ ವೀರೇಂದ್ರ ಪಪ್ಪಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

    ಕೋಟೆ ಅಭಿವೃದ್ಧಿ, ಕೋಟೆಯಲ್ಲಿ ಪ್ರವಾಸಿಗರಿಗೆ ಅನುಕೂಲಕರವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಬಗ್ಗೆ ಬಿ.ಎಲ್.ವೇಣು ಅವರು ಶಾಸಕರಿಗೆ ಸಲಹೆ ನೀಡಿದರು.

    ಭದ್ರ ಮೇಲ್ದಂಡೆ ಯೋಜನೆ ಕಾಮಗಾರಿಯ ಬಗ್ಗೆ ಕೂಲಂಕುಷವಾಗಿ ಶಾಸಕರೊಂದಿಗೆ ಚರ್ಚಿಸಿದ ವೇಣು ಅವರು, ಜನತೆಗೆ ಅತೀ ಶೀಘ್ರದಲ್ಲೇ ಈ ಯೋಜನೆ ತಲುಪಬೇಕೆಂದು ತಾಕೀತು ಮಾಡಿದರು.

    ಇದನ್ನೂ ಓದಿ : ಮಕ್ಕಳ ಕವಿಗೋಷ್ಠಿಗೆ ಕವನಗಳ ಅಹ್ವಾನ | ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಆಯೋಜನೆ 

    ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಯೋಜನೆ ತ್ವರಿತ ಜಾರಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಟ್ಟಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡಿದರು.

    ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಬಗ್ಗೆಯೂ ಪ್ರಸ್ಥಾಪಿಸಿದ ವೇಣು ಅವರು, ಈ ನಿಟ್ಟಿನಲ್ಲಿ ಕಾರ್ಯ ವಿಳಂಭ ಮಾಡದೇ, ತುರ್ತು ಕೆಲಸಗಳು ಮಾಡುವುದು ಅಗತ್ಯವಿದೆ ಎಂದು ವಿವರಿಸಿದರು.

    ಕ್ಷೇತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳು ಮಾಡುವುದರೊಂದಿಗೆ ಜನಮನ್ನಣೆ ಗಳಿಸಬೇಕೆಂದು ಬಿ.ಎಲ್.ವೇಣು ಅವರು ಶಾಸಕರಿಗೆ ಸೂಚನೆಗಳನ್ನು ನೀಡಿದರು.

    ಇದನ್ನೂ ಓದಿ : ಚಿತ್ರದುರ್ಗ ಜಿಲ್ಲೆಗೆ ಎಲ್ಲೋ ಅಲರ್ಟ್ | ತೀವ್ರ ಬಿಸಿಲು, ಬಿಸಿಗಾಳಿಯ ಎಚ್ಚರಿಕೆ | ಸುರಕ್ಷಿತವಾಗಿರಲು  ಇಲ್ಲಿವೆ ಸೂಕ್ತ ಸಲಹೆ 

    ಕ್ಷೇತ್ರದ ಅಭಿವೃದ್ಧಿ ದೃಷ್ಠಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ.  ಜನರ ನಿರೀಕ್ಷೆಗಳನ್ನು ಯಶಸ್ಸುಗೊಳಿಸುತ್ತೇನೆಂದು ಇದೇ ಸಂದರ್ಭದಲ್ಲಿ ಶಾಸಕರು ಭರವಸೆ ನೀಡಿದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top