CHITRADURGA NEWS | 03 FEBRUARY 2025
ಹೊಳಲ್ಕೆರೆ: ತಾಲೂಕಿನ ಲೋಕದೊಳಲು ಗ್ರಾಮದ ಬೆಟ್ಟದ ಮೇಲಿರುವ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇವಸ್ಥಾನಕ್ಕೆ ರೂ.1.50 ಕೋಟಿ ವೆಚ್ಚದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ದೊಡ್ಡಹೊಟ್ಟೆ ರಂಗನಾಥಸ್ವಾಮಿ ಹೆಸರಾಂತ ದೇವರಾಗಿರುವುದರಿಂದ ಭಕ್ತಿ ಭಾವದಿಂದ ಪೂಜಿಸಿದಾಗ ಎಲ್ಲರಿಗೂ ಆರ್ಶೀವಾದಸಿಗುತ್ತದೆ.
ಬರಿ ಇಂಜಿನಿಯರ್ ಕಂಟ್ರಾಕ್ಟರ್ಗಳ ಮೇಲೆ ಜವಾಬ್ದಾರಿ ಹಾಕದೆ ಊರಿನವರು ಕಾಲ ಕಾಲಕ್ಕೆ ಸರಿಯಾಗಿ ರಸ್ತೆಗೆ ನೀರಿನ ಕ್ಯೂರಿಂಗ್ ಮಾಡಿದಾಗ ಗಟ್ಟಿಮುಟ್ಟಾಗಿರುತ್ತದೆ. ನಿಗಧಿತ ಸಮಯದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ತಿಳಿಸಿದರು.
Also Read: ರೆಡ್ಡಿ ಜನಸಂಘದ ವ್ಯವಸ್ಥಾಪಕ ಜಿ.ಎನ್.ಹನುಮಂತರೆಡ್ಡಿ ಇನ್ನಿಲ್ಲ
ಮಳೆಗಾಲ ಆರಂಭವಾಗುವುದರೊಳಗೆ ರಸ್ತೆ ಕಾಮಗಾರಿಯನ್ನು ಮುಗಿಸುವಂತೆ ಸಂಬಂಧಪಟ್ಟ ಇಂಜಿನಿಯರ್ ಹಾಗೂ ಗುತ್ತಿಗೆದಾರನಿಗೆ ಸೂಚಿಸಿದರು.
ಈ ವೇಳೆ ಲೋಕದೊಳಲು ಗ್ರಾಮಸ್ಥರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
