
CHITRADURGA NEWS | 20 DECEMBER 2025
ಚಿತ್ರದುರ್ಗ: ಜಿಲ್ಲೆಯ ರಾಜಕಾರಣದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಎಂದೇ ಗುರುತಿಸಿಕೊಂಡಿರುವ ಹೊಳಲ್ಕೆರೆ ಶಾಸಕರಾದ ಡಾ.ಎಂ.ಚಂದ್ರಪ್ಪ ಹಾಗೂ ಮಾಜಿ ಸಚಿವ ಎಚ್.ಆಂಜನೇಯ ಅವರ ನಡುವೆ ಮತ್ತೆ ಜಟಾಪಟಿ ಏರ್ಪಟ್ಟಿದೆ.
ಶಾಸಕರಾದ ಎಂ.ಚಂದ್ರಪ್ಪ ಅವರು ಭೂ ಕಬಳಿಕೆ ಮಾಡಿದ್ದಾರೆ. ಅಕ್ರಮವಾಗಿ ಅದಿರು, ಮಣ್ಣು ಮಾರಾಟ ಮಾಡಿಕೊಂಡಿದ್ದಾರೆ. ದಲಿತರ ಭೂಮಿ ಮೇಲೆ ಕಣ್ಣು ಹಾಕಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಗಂಭೀರ ಆರೋಪ ಮಾಡಿದ್ದರು.
ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್ 20 | ಭೀಮಸಮುದ್ರ, ಚನ್ನಗಿರಿ, ದಾವಣಗೆರೆ ಅಡಿಕೆ ರೇಟ್
ಇದಕ್ಕೆ ಅಷ್ಟೇ ಖಡಕ್ ಆಗಿ ಶಾಸಕರಾದ ಡಾ.ಎಂ.ಚಂದ್ರಪ್ಪ ತಿರುಗೇಟು ಕೊಟ್ಟಿದ್ದಾರೆ. ನಾನು ಭೂಮಿ ಕಬಳಿಕೆ ಮಾಡಿರುವುದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಹಾಗಾದ್ರೆ, ಮಾಜಿ ಸಚಿವರಾದ ಎಚ್.ಆಂಜನೇಯ ಮಾಡಿದ್ದ ಆರೋಪಗಳೇನು, ಇದಕ್ಕೆ ಶಾಸಕರಾದ ಎಂ.ಚಂದ್ರಪ್ಪ ನೀಡಿರುವ ಪ್ರತಿಕ್ರಿಯೆ ಏನು ಇಲ್ಲಿವೆ ಪೂರ್ಣ ವಿವರ:
ಎಸ್ಸಿ ಸಮುದಾಯಕ್ಕೆ ಮಂಜೂರಾಗಿದ್ದ ಜಮೀನು ಖರೀಧಿಸುವುದು ಪರಿಶಿಷ್ಟ ಜಾತಿ-ಪಂಗಡಗಳ ಭೂಮಿ ವರ್ಗಾವಣೆ(PTCL) ಕಾಯ್ದೆಯ ಸ್ಪಷ್ಟ ಉಲ್ಲಂಘನೆ. ಆದರೆ, ಶಾಸಕ ಎಂ.ಚಂದ್ರಪ್ಪ ಬೇರೆಯವರ ಹೆಸರಿಗೆ ಜಮೀನು ನೊಂದಣಿ ಮಾಡಿಸಿ ನಂತರ ತಮ್ಮ ಪುತ್ರ ಎಂ.ಸಿ.ದೀಪ್ಚಂದನ್ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ಆಂಜನೇಯ ದೂರಿದರು.
ಇದನ್ನೂ ಓದಿ: ಸುತ್ತೂರು ಜಾತ್ರೆಯ ಪ್ರಚಾರ ರಥ ಚಿತ್ರದುರ್ಗಕ್ಕೆ ಆಗಮನ | ಮುರುಘಾ ಮಠದಲ್ಲಿ ಸ್ವಾಗತ
ಹೊಳಲ್ಕೆರೆ ತಾಲೂಕು ಬಿ.ದುರ್ಗ ಹೋಬಳಿ ಹಿರೇಕಂದವಾಡಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರಿಗೆ ಸೇರಿದ 12 ಎಕರೆ ಭೂಮಿಯನ್ನು ಚಂದ್ರಪ್ಪ ಕಬಳಿಸಿದ್ದಾರೆ ಎಂದು ಡಿ.19 ರಂದು ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದ್ದರು.
ಜಮೀನು ವಾಪಾಸು ಕೊಡಿಸುವಂತೆ ಜಮೀನಿನ ಮೂಲ ಮಂಜೂರಾತಿದಾರ ಕುಟುಂಬದ ಸದಸ್ಯರು ತಹಶೀಲ್ದಾರ್, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ವರ್ಷವಾದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 20 | ಹತ್ತಿ ರೇಟ್ ಎಷ್ಟಿದೆ?
ಜಮೀನಿಗೆ ಹೊಂದಿಕೊಂಡಂತೆ ಇರುವ ಗುಡ್ಡದಲ್ಲಿ ಅದಿರು ಅಕ್ರಮವಾಗಿ ಕಳ್ಳತನ ಮಾಡಲಾಗಿದೆ. ಇಲ್ಲಿ ಅಕ್ರಮ ಗಣಿಗಾರಿಕೆ ನಡೆದಿರುವ ಬಗ್ಗೆ ತಹಶೀಲ್ದಾರ್ ವರದಿ ಕೊಟ್ಟಿದ್ದಾರೆ. ಇಲ್ಲಿ ಉತ್ಕೃಷ್ಟ ಮಟ್ಟದ ಅದಿರು ಇದೆ. ಕಬ್ಬಿಣದ ಅದಿರು ತೆಗೆಯುವ ಉದ್ದೇಶದಿಂದಲೇ ಇಲ್ಲಿ ಭೂಮಿ ಖರೀಧಿಸಿದ್ದಾರೆ ಎಂದು ಆರೋಪ ಮಾಡಿದ್ದರು.
ಭೂ ಕಬಳಿಕೆ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ:
ಇದಕ್ಕೆ ಡಿಸೆಂಬರ್ 20 ರಂದು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಶಾಸಕರಾದ ಡಾ.ಎಂ.ಚಂದ್ರಪ್ಪ, ನನ್ನ 35 ವರ್ಷದ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಸಾರ್ವಜನಿಕ ಜೀವನದಲ್ಲಿದ್ದೇನೆ. ನನ್ನ ಜೀವನ ಬಿಳಿ ಹಾಳೆ ಇದ್ದಂತೆ ಎಂದು ತಿಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ, ಭೂಕಬಳಿಕೆ, ಒತ್ತುವರಿ ಯಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ ಇದರಲ್ಲಿ ಯಾವುದಾದರೊಂದು ಮಾಡಿರುವುದಾಗಿ ಯಾರಾದರೂ ಒಬ್ಬರು ಸಾಕ್ಷಿ ಹೇಳಿದರೂ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.
ಇದನ್ನೂ ಓದಿ: ಖಾಸಗಿ ಬಸ್ಸುಗಳಲ್ಲಿ ಕನ್ನಡ ನಾಮಫಲಕ ಹಾಕಿ | ಬಸ್ ನಿಲ್ದಾಣದಲ್ಲಿ ಪ್ರತಿಭಟನೆ
ಹಿರೇಕಂದವಾಡಿಯಲ್ಲಿ 8 ಎಕರೆ ಜಮೀನಿದೆ. ಆದರೆ, ಅದು ದಲಿತರಿಂದ ಖರೀದಿಸಿದ್ದಲ್ಲ. 1910 ರಲ್ಲೇ ಖರೀದಿ ಆಗಿರುವ ಜಮೀನು. ಈ ಭೂಮಿ ಈಗಾಗಲೇ ನಾಲ್ಕು ಜನರ ಕೈ ಬದಲಾಗಿದೆ ಎಂದು ಸ್ಪಷ್ಟಪಡಿಸಿದರು.
ರಾಜಕೀಯದಲ್ಲಿ ನನ್ನ ತೇಜೋವಧೆ ಮಾಡುವುದಕ್ಕಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ರಾಜಕಾರಣಕಕೆ ಬರುವ ಮೊದಲೇ ಜಮೀನು ಹೊಂದಿದ್ದೆ. 30 ಎಕರೆ ಅಡಿಕೆ ತೋಟವಿದೆ. 5 ಸಾವಿರ ತೆಂಗಿನ ಮರಗಳಿವೆ ಎಂದರು.
ಇದನ್ನೂ ಓದಿ: ಮೇಷ | ವಾರ್ಷಿಕ ರಾಶಿ ಭವಿಷ್ಯ- 2026
ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ಮಾಡಲು ಕೆಲಸ ಇಲ್ಲ. ಸುಳ್ಳು ಆರೋಪಗಳನ್ನು ಮಾಡಿ ಮಾಧ್ಯಮಗಳ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ.
ಆಂಜನೇಯ ಅವರು ಹೇಳಿದಂತೆ ದಲಿತರ ಭೂಮಿ ಕಬಳಿಸಿಲ್ಲ. ಇದಕ್ಕೆ ಬೆಕಾದ ದಾಖಲೆಗಳು ನನ್ನ ಬಳಿ ಇವೆ. ಯಾರು ಬೇಕಾದರೂ ಪರಿಶೀಲನೆ ಮಾಡಬಹುದು ಎಂದರು.
ಅಕ್ರಮ ಗಣಿಗಾರಿಕೆ ನಡೆಸಿಲ್ಲ:
ಹೀರೇಕಂದವಾಡಿ ಗ್ರಾಮದ ರಿ.ಸ.ನಂ 91/5ರಲ್ಲಿ 4.04 ಖರಾಬು 0.06 ಗುಂಟೆ ಒಟ್ಟು ವಿಸ್ತಿರ್ಣ 3-38 ಗಂಟೆಯನ್ನು ಲಿಂಗಾಯತ, ಈಡಿಗರು, ಭೋವಿ ಸಮುದಾಯದವರಿಂದ, ಇದೇ ಗ್ರಾಮದ ರಿ.ಸ.ನಂ.91/1ಬಿ2 ಒಟ್ಟು8-00 ಎಕರೆ ಖರಾಬು 0.12 ಗುಂಟೆ ಒಟ್ಟು ವಿಸ್ತೀರ್ಣ 7-28 ಗುಂಟೆ ಭೂಮಿಯನ್ನು ಲಿಂಗಾಯಿತ, ಈಡಿಗ ಸಮುದಾಯದಿಂದ ಸರ್ಕಾರದ ದಾಖಲಾತಿಯಂತೆ ಖರೀದಿ ಮಾಡಲಾಗಿದೆ ಇದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ ಎಲ್ಲವು ಸಹಾ ಪಾರದರ್ಶಕವಾಗಿದೆ ಎಂದು ದಾಖಲೆ ಪ್ರದರ್ಶಿಸಿದರು.
ಇದನ್ನೂ ಓದಿ: ಇದ್ದಕ್ಕಿದ್ದಂತೆ ಕಣ್ಣ ಮುಂದೆ ಕತ್ತಲು ಆವರಿಸುವುದು ಈ ಕಾಯಿಲೆಯ ಲಕ್ಷಣವಂತೆ
ನನ್ನ ಜಮೀನಿನ ಪಕ್ಕದಲ್ಲಿ ಗುಡ್ಡ ಇದೆ. ಅಲ್ಲಿ ಅದಿರು ಇದೆ. ಆದರೆ, ನಾನು ಗಣಿಗಾರಿಕೆ ನಡೆಸಿಲ್ಲ. ನಡೆಸಿದ್ದರೆ ಸಾಬೀತು ಮಾಡಲಿ ಎಂದು ಸವಾಲೆಸೆದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
