CHITRADURGA NEWS | 07 JUNE 2025
ಹೊಳಲ್ಕೆರೆ: ತಾಲೂಕಿನಲ್ಲಿ ಶನಿವಾರ ಶಾಸಕ ಎಂ.ಚಂದ್ರಪ್ಪ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಸಲ್ಲಿಸಿದರು.
Also Read: ಭರಮಸಾಗರ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ | ಪಿಡಿಓ ಅಮಾನತಿಗೆ ಆಗ್ರಹ

ನವಣೆಕೆರೆ ಗ್ರಾಮದಲ್ಲಿ ಕೋಟಿ ರೂ.ವೆಚ್ಚದಲ್ಲಿ ನೂತನ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿ, ಭರಮಸಾಗರ ಹೋಬಳಿ ಹುಲ್ಲೇಹಾಳ್ ಗ್ರಾಮದಲ್ಲಿ 1.50 ಕೋಟಿ ರೂ.ವೆಚ್ಚದಲ್ಲಿ ನೂತನ ಕೆರೆ ನಿರ್ಮಾಣ ಕಾಮಗಾರಿ ಮತ್ತು ಇಪ್ಪತ್ತು ಲಕ್ಷ ರೂ.ವೆಚ್ಚದಲ್ಲಿ ಕುಡಿಯುವ ನೀರಿನ ಓವರ್ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿ, ಬಿ.ದುರ್ಗ ಗ್ರಾಮದ ಸಮೀಪ ಹಳ್ಳಕ್ಕೆ ಎರಡು ಕೋಟಿ ರೂ.ವೆಚ್ಚದಲ್ಲಿ ನೂತನ ಚೆಕ್ಡ್ಯಾಂ ಮತ್ತು ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮತ್ತು ಒಂದು ಕೋಟಿ ರೂ.ವೆಚ್ಚದಲ್ಲಿ ಕೆರೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹೊಳಲ್ಕೆರೆ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಎಂ.ಬಿ.ಸಿದ್ದೇಶ್, ಕುಮಾರಣ್ಣ, ಜಗದೀಶ್, ಮಹಲಿಂಗಣ್ಣ, ಚಂದ್ರಣ್ಣ, ನುಲೇನೂರು ಶೇಖರ್, ಮರುಳಸಿದ್ದಪ್ಪ, ಗುತ್ತಿಗೆದಾರ ರಾಜಶೇಖರ್, ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಶೈಲೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ನಾಗರಾಜ್, ಉಪಾಧ್ಯಕ್ಷೆ ನಿರ್ಮಲ ತಿಪ್ಪೇಸ್ವಾಮಿ, ಸದಸ್ಯರುಗಳಾದ ರೂಪ, ರೇವಣ್ಣ, ರುದ್ರೇಶ್, ಬಸವರಾಜ್, ಕವಿತಾ, ರೈತ ಮುಖಂಡ ನಾರಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರುಗಳಾದ ಕಲ್ಲೇಶ್, ಮೋಹನ್, ರಾಜಣ್ಣ, ಸತೀಶ್, ತಿಪ್ಪಣ್ಣ, ರುದ್ರಗೌಡ್ರು, ಡಿ.ಸಿ.ಮೋಹನ್, ಸ್ವಾಮಿ, ಮಹಾಂತೇಶ್, ಷಣ್ಮುಖಪ್ಪ, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ಗಳಾದ ಆನಂದಪ್ಪ, ನವೀನ್ ಸೇರಿದಂತೆ ಗ್ರಾಮಸ್ಥರು ಇದ್ದರು.
Also Read: ಜಿಲ್ಲಾಮಟ್ಟದ ಚರ್ಚಾಸ್ಪರ್ಧೆ | SRS ಕಾಲೇಜಿನ ಹರ್ಷಿತ ಹೂಗಾರ್ ಗೆ ತೃತೀಯ ಸ್ಥಾನ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
