By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: DCC ಬ್ಯಾಂಕ್ ಚುನಾವಣೆ | ಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ | 200 ಸೊಸೈಟಿ ಅನರ್ಹ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » DCC ಬ್ಯಾಂಕ್ ಚುನಾವಣೆ | ಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ | 200 ಸೊಸೈಟಿ ಅನರ್ಹ

ಮುಖ್ಯ ಸುದ್ದಿ

DCC ಬ್ಯಾಂಕ್ ಚುನಾವಣೆ | ಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ | 200 ಸೊಸೈಟಿ ಅನರ್ಹ

chitradurganews.com
Last updated: 4 September 2024 12:20
chitradurganews.com
10 months ago
Share
DCC BANK
ಡಿಸಿಸಿ ಬ್ಯಾಂಕ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 SEPTEMBER 2024

ಚಿತ್ರದುರ್ಗ: ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಸಹಕಾ ಕೇಂದ್ರ ಬ್ಯಾಂಕ್(DCC) ಚುನಾವಣೆ ಸೆಪ್ಟಂಬರ್ 12ಕ್ಕೆ ನಿಗಧಿಯಾಗಿದ್ದು, ಬ್ಯಾಂಕಿನ ಹಾಲಿ ನಿರ್ದೇಶಕರಾಗಿರುವ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಹಾಗೂ ಮತದಾನ ಮಾಡಲು ಅವಕಾಶ ಇಲ್ಲದಂತಾಗಿರುವುದು ಕುತೂಹಲ ಮೂಡಿಸಿದೆ.

ಡಿಸಿಸಿ ಬ್ಯಾಂಕಿನ 12 ನಿರ್ದೇಶಕರ ಸ್ಥಾನಗಳಿಗೆ ಸೆ.12 ರಂದು ಚುನಾವಣೆ ನಿಗಧಿಯಾಗಿದ್ದು, ನಾಮಪತ್ರ ಸಲ್ಲಿಸಲು ಇಂದು(ಸೆ.4) ಸಂಜೆ 4 ಗಂಟೆವರೆಗೆ ಅವಕಾಶವಿದೆ.

ಇದನ್ನೂ ಓದಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ | 24 ಶಿಕ್ಷಕರಿಗೆ ಸಂದ ಗೌರವ

ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಬೈಲಾ ಪ್ರಕಾರ ಮತದಾನ ಹಾಗೂ ಸ್ಪರ್ಧೆಗೆ ಅರ್ಹತೆ ಪಡೆದುಕೊಳ್ಳಬೇಕು. ಆದರೆ, ಬೇರೆ ಬೇರೆ ಕಾರಣಗಳನ್ನು ಮುಂದಿಟ್ಟು 200 ಸೊಸೈಟಿಗಳನ್ನು ಅನರ್ಹಗೊಳಿಸಲಾಗಿದೆ. ಇದರಲ್ಲಿ ಶಾಸಕ ಟಿ.ರಘುಮೂರ್ತಿ ಪ್ರತಿನಿಧಿಸುವ ಕಡಬನಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವೂ ಸೇರಿದೆ.

D SUDHAKAR - T RAGHUMURTHY
ಸಚಿವ ಡಿ.ಸುಧಾಕರ್ – ಶಾಸಕ ರಘುಮೂರ್ತಿ

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕಿನಲ್ಲಿ ಇದೇ ಮೊದಲ ಬಾರಿಗೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನಿರ್ದೇಶಕರಾಗಿದ್ದರು. ಆದರೆ, ಎರಡನೇ ಅವಧಿಗೆ ಅವರು ಸ್ಪರ್ಧೆ ಮಾಡಲು ಅವಕಾಶ ಇಲ್ಲದಂತಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಕೃಷಿ ವಿಜ್ಞಾನ ಕೇಂದ್ರ ಬಬ್ಬೂರು ಫಾರಂ ನಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಈ ಹಿನ್ನೆಲೆಯಲ್ಲಿ ಶಾಸಕ ಟಿ.ರಘುಮೂರ್ತಿ ಸೇರಿದಂತೆ ಸುಮಾರು 15 ಸೊಸೈಟಿಗಳ ಪ್ರತಿನಿಧಿಗಳು ಕೋರ್ಟ್ ಮೆಟ್ಟಿಲೇರಿದ್ದು, ಇಂದು ಸಂಜೆ ವೇಳೆಗೆ ತೀರ್ಪು ಪ್ರಕಟವಾಗುವ ನಿರೀಕ್ಷೆಯಿದೆ. ಒಂದು ವೇಳೆ ತೀರ್ಪು ಪೂರಕವಾಗಿ ಬಂದರೆ ಚುನಾವಣೆಗೆ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ಸಿಗಲಿದೆ.

ಜಿಲ್ಲೆಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘ, ಹಾಲು ಒಕ್ಕೂಟ, ಅರ್ಬನ್ ಬ್ಯಾಂಕುಗಳು ಸೇರಿದಂತೆ ಒಟ್ಟು 419 ಸೊಸೈಟಿಗಳು ಡಿಸಿಸಿ ಬ್ಯಾಂಕ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಬರೋಬ್ಬರಿ 200 ಸೊಸೈಟಿಗಳು ಡಿಸಿಸಿ ಬ್ಯಾಂಕಿನ ಬೈಲಾ, ಕಾಯ್ದೆಗಳ ಕಾರಣಕ್ಕೆ ಮತದಾನದಿಂದ ವಂಚಿತವಾಗಿವೆ. 150 ಸೊಸೈಟಿಗಳು ಮಾತ್ರ ಮತದಾನಕ್ಕೆ ಅರ್ಹವಾಗಿವೆ.

ಬೈಲಾ ಪ್ರಕಾರ ಇರಬೇಕಾದ ಅರ್ಹತೆಗಳೇನು ?

ಕಳೆದ 5 ವರ್ಷದಲ್ಲಿ ಕನಿಷ್ಟ 2 ಸಾಮಾನ್ಯ ಸಭೆಗಳಿಗೆ ಹಾಜರಾಗಿರಬೇಕು. ಕನಿಷ್ಟ 2 ವರ್ಷ ಡಿಸಿಸಿ ಬ್ಯಾಂಕಿನಲ್ಲಿ ಸೊಸೈಟಿಗಳು ವಹಿವಾಟು ನಡೆಸಿರಬೇಕು. ಸುಸ್ತಿದಾರರಾಗಿರಬಾರದು ಎನ್ನುವ ನಿಯಮಗಳಿವೆ.

ಇದನ್ನೂ ಓದಿ: ವಾಣಿವಿಲಾಸ ಸಾಗರ ಜಲಾಶಯದಲ್ಲಿ ಜಲ ವೈಭೋಗ | ಸನಿಹವಾಗಿದೆ ಮೂರನೇ ಬಾರಿಗೆ ಕೋಡಿ ಬೀಳುವ ಕ್ಷಣ

ಇದೆಲ್ಲದರ ಜೊತೆಗೆ ಆಡಳಿತ ಮಂಡಳಿ ಇಲ್ಲದೆ ಕೇವಲ ಆಡಳಿತಾಧಿಕಾರಿ ನಡೆಸಿಕೊಂಡು ಹೋಗುತ್ತಿರುವ ಸೊಸೈಟಿಗಳು ಮತದಾನಕ್ಕೆ ಅರ್ಹವಲ್ಲ.
ಶಾಸಕ ಟಿ.ರಘುಮೂರ್ತಿ ಪ್ರತಿನಿಧಿಸುವ ಕಡಬನಕಟ್ಟಿ ಕೃಷಿ ಪತ್ತಿನ ಸಹಕಾರ ಸಂಘ ಬೈಲಾ ಪ್ರಕಾರ ಬ್ಯಾಂಕಿನೊಡನೆ ವ್ಯವಹಾರ ನಡೆಸಿಲ್ಲ ಎಂದು ಕಾರಣ ನಮೂದು ಮಾಡಲಾಗಿದೆ.

6 ವರ್ಗಗಳಿಂದ 12 ನಿರ್ದೇಶಕ ಸ್ಥಾನ:

ಒಟ್ಟು 12 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇಲ್ಲಿ ಆಯ್ಕೆಯಾದ ನಿರ್ದೇಶಕರು ಆನಂತರ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಇದನ್ನೂ ಓದಿ: ಗರುಡ ವಾಹನದಲ್ಲಿ ಕೋಟೆನಾಡು ಪ್ರವೇಶಿಸಲಿದೆ ಹಿಂದೂ ಮಹಾಗಣಪತಿ

ಈಗ ‘ಎ’ ಯಿಂದ ‘ಎಫ್’ ವರೆಗೆ ಒಟ್ಟು 6 ವರ್ಗಗಳಲ್ಲಿ ನಿರ್ದೇಶಕರನ್ನು ಆಯ್ಕೆ ಮಾಡಲಾಗುತ್ತದೆ. ‘ಎ’ ವರ್ಗದಲ್ಲಿ 6 ತಾಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ‘ಬಿ’ ವರ್ಗದಲ್ಲಿ ಟಿಎಪಿಸಿಎಂಎಸ್, ‘ಸಿ’ ವರ್ಗದಲ್ಲಿ ಪಟ್ಟಣ ವ್ಯಾಪ್ತಿಯ ಅರ್ಬನ್ ಬ್ಯಾಂಕುಗಳು, ‘ಡಿ’ ವರ್ಗದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳು, ‘ಇ’ ವರ್ಗದಲ್ಲಿ ನೇಕಾರ ಮತ್ತಿತರೆ ಸೊಸೈಟಿಗಳು ಹಾಗೂ ‘ಎಫ್’ ವರ್ಗದಲ್ಲಿ ಮೇಲಿನ ಐದು ಹೊರತುಪಡಿಸಿದ ಕೈಗಾರಿಕೆ ಮತ್ತಿತರೆ ಸಹಕಾರಿ ವಲಯಗಳಿಂದ ಪ್ರತಿನಿಧಿಗಳು ಈ ಚುನಾವಣೆಗೆ ಸ್ಪರ್ಧೆ ಮತ್ತು ಮತದಾನ ಮಾಡಬಹುದು.

ಡಿಸಿಸಿ ಬ್ಯಾಂಕಿನಿಂದ ಕೇವಿಯಟ್:

ಚುನಾವಣೆ ಸಂಬಂಧ ಡಿಸಿಸಿ ಬ್ಯಾಂಕಿನಿಂದ ನ್ಯಾಯಾಲಯದಲ್ಲಿ ಕೇವಿಯಟ್ ಸಲ್ಲಿಸಲಾಗಿದೆ. ಇದಕ್ಕೆ ಶಾಸಕ ಟಿ.ರಘುಮೂರ್ತಿ ಅಚ್ಚರಿ ವ್ಯಕ್ತಪಡಿಸಿದ್ದು, ಕೋವಿಡ್, ಬರಗಾಲದ ಕಾರಣಕ್ಕೆ ರೈತರು ಸೊಸೈಟಿಗಳಲ್ಲಿ ಸಾಲ ಕಟ್ಟದೆ ಬ್ಯಾಂಕಿನ ಜೊತೆಗೆ ವ್ಯವಹಾರ ಮಾಡಿರುವುದಿಲ್ಲ. ಈ ಕಾರಣಕ್ಕೆ ಮತದಾನ ಹಾಗೂ ಚುನಾವಣೆಗೆ ಸ್ಪರ್ಧೆ ಮಾಡದಂತೆ ಅನರ್ಹಗೊಳಿಸಿರುವುದು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Challakere MLAChitradurgaChitradurga newsD. SudhakarDCCDCC BankDirector PositionDistrict Central Cooperative BankElectionKannada Latest UpdatesT. Raghumurthyಕನ್ನಡ ಲೇಟೆಸ್ಟ್ ಅಪ್ಡೇಟ್ಸ್ಚಳ್ಳಕೆರೆ ಶಾಸಕಚಿತ್ರದುರ್ಗಚಿತ್ರದುರ್ಗ ನ್ಯೂಸ್ಚುನಾವಣೆಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ಟಿ.ರಘುಮೂರ್ತಿಡಿ.ಸುಧಾಕರ್ಡಿಸಿಸಿ ಬ್ಯಾಂಕ್‌ನಿರ್ದೇಶಕ ಸ್ಥಾನ
Share This Article
Facebook Email Print
Previous Article ddpi office EXCLUSIVE: ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ | 24 ಶಿಕ್ಷಕರಿಗೆ ಸಂದ ಗೌರವ
Next Article Upper Bhadra Project Upper Bhadra Project: ಭದ್ರಾ ಮೇಲ್ದಂಡೆ ಯೋಜನೆಗೆ ಪುನಃ ವಿಘ್ನ | ಕಾಲುವೆ ನಿರ್ಮಾಣಕ್ಕೆ ಎದುರಾಯಿತು ತೊಡಕು
Leave a Comment

Leave a Reply Cancel reply

Your email address will not be published. Required fields are marked *

ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up