CHITRADURGA NEWS | 09 SEPTEMBER 2024
ಚಿತ್ರದುರ್ಗ: ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಸಹಕಾರ ಕೇಂದ್ರ (DCC) ಬ್ಯಾಂಕ್ ಚುನಾವಣೆಗೆ ಇನ್ನು ಮೂರು ದಿನ ಮಾತ್ರ ಬಾಕಿ ಇದೆ.
ಆದರೆ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಸೇರಿದಂತೆ ಇನ್ನಿತರರ ನಾಮಪತ್ರ ತಿರಸ್ಕøತಗೊಂಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ಹೊಸಪೇಟೆಯಲ್ಲಿ ಚಿತ್ರದುರ್ಗದ ಸ್ವಾಮೀಜಿ ಬಂಧನ | ಬರೋಬ್ಬರಿ 35 ಲಕ್ಷ ರೂ. ವಶ
ಹೈಕೋರ್ಟ್ ತೀರ್ಪಿನ ಷರತ್ತಿಗೆ ಒಳಪಟ್ಟು ಚಳ್ಳಕೆರೆ ಶಾಸಕರ ನಾಮಪತ್ರ ತಿರಸ್ಕರಿಸಲಾಗಿದೆ. ಸೆ.5 ರಂದು ನ್ಯಾಯಾಲಯ ನಾಮಪತ್ರ ಅಂಗೀಕರಿಸಲು ಸೂಚಿಸಿ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿತ್ತು.
ಈ ಬಗ್ಗೆ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಾರ್ತಿಕ್ ಕೂಲಂಕುಷವಾಗಿ ಪರಿಶೀಲಿಸಿ, ಬ್ಯಾಂಕಿನ ಬೈಲಾ ಆಧಾರವಾಗಿಟ್ಟುಕೊಂಡು ನಾಮಪತ್ರ ತಿರಸ್ಕರಿಸಿದ್ದಾರೆ. ಆದರೆ, ಒಂದು ವೇಳೆ, ಸೆ.9 ಅಂದರೆ ಇಂದು ಹೈಕೋರ್ಟ್ ಚುನಾವಣೆ ಸ್ಪರ್ಧೆಗೆ ಅನುವು ಮಾಡಿಕೊಡಲು ಆದೇಶಿಸಿದರೆ ಮತ್ತೆ ನಾಮಪತ್ರ ಅಂಗೀಕರಿಸಬೇಕಾಗುತ್ತದೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ ಫಿಕ್ಸ್ | ಘಟಾನುಘಟಿಗಳ ನಡುವೆ ಪೈಪೋಟಿ
ಚುನಾವಣೆಗಿಂತ ಮೊದಲೇ ನ್ಯಾಯಾಲಯದ ತೀರ್ಪು ಬರುವ ಅಂದಾಜಿನಲ್ಲಿ ಹೈಕೋರ್ಟಿನ ಷರತ್ತಿಗೆ ಒಳಪಟ್ಟು ನಾಮಪತ್ರವನ್ನು ತಿರಸ್ಕರಿಸಲಾಗಿದೆ.
ಇಂದು ಶಾಸಕ ರಘುಮೂರ್ತಿ ಪರವಾಗಿ ತೀರ್ಪು ಬಂದರೆ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ನೀಡುವ ತೀರ್ಪಿನತ್ತ ಎಲ್ಲರ ಗಮನ ಕೇಂದ್ರಿಕೃತವಾಗಿದೆ.
ನಾಲ್ಕು ಜನರ ನಾಮಪತ್ರ ತಿರಸ್ಕøತ:
ಶಾಸಕ ಟಿ.ರಘುಮೂರ್ತಿ, ಚಿತ್ರದುರ್ಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೆ.ಪಿ.ಮಂಜುನಾಥ್, ಅರುಣ್ಕುಮಾರ್ ಹಾಗೂ ಹಾಲು ಸಹಕಾರ ಸಂಘಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಿ.ಎಸ್.ಶಶಿಧರ್ ಅವರ ನಾಮಪತ್ರಗಳು ತಿರಸ್ಕøತವಾಗಿವೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ ಸಚಿವ ಡಿ.ಸುಧಾಕರ್ ಸೇರಿ 6 ಮಂದಿ ಅವಿರೋಧ ಆಯ್ಕೆ
ಇತರೆ ಸಹಕಾರ ಸಂಘಗಳ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ರಾಮರೆಡ್ಡಿ ಅವರ ನಾಮಪತ್ರ ತಿರಸ್ಕøತವಾಗಿದೆ. ರಾಮರೆಡ್ಡಿ ಅವರು ಅನರ್ಹತೆ ಪ್ರಶ್ನಿಸಿ ನ್ಯಾಯಾಲಯಕ್ಕೆ ಹೋಗಿಲ್ಲದ ಕಾರಣ ಅವರಿಗೆ ಷರತ್ತು ಅನ್ವಯ ಆಗುವುದಿಲ್ಲ.
ಸಚಿವ ಡಿ.ಸುಧಾಕರ್ ಅವಿರೋಧ ಆಯ್ಕೆ:
ಈ ನಡುವೆ ಚುನಾವಣೆಗೆ ಮೊದಲೇ ಹಾಲಿ ಬ್ಯಾಂಕಿನ ಅಧ್ಯಕ್ಷ, ಸಚಿವ ಡಿ.ಸುಧಾಕರ್, ಹೊಳಲ್ಕೆರೆಯಿಂದ ಎಸ್.ಆರ್.ಗಿರೀಶ್, ಹಿರಿಯೂರಿನಿಂದ ಮಂಜುನಾಥ್, ಟಿಎಪಿ ಸಿಎಂಎಸ್ನಿಂದ ಎಚ್.ಬಿ.ಮಂಜುನಾಥ್, ನೇಕಾರಿಕೆ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಜಗಣ್ಣ, ಪಟ್ಟಣ ಸಹಕಾರ ಬ್ಯಾಂಕ್ ಕ್ಷೇತ್ರದಿಂದ ರಘುರಾಮರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

