CHITRADURGA NEWS | 26 JANUARY 2024
ಚಿತ್ರದುರ್ಗ: ರಾಜ್ಯ ಸರ್ಕಾರ ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ಈ ಪಟ್ಟಿಯಲ್ಲಿ ಅವಕಾಶ ಸಿಕ್ಕಿದೆ.
ಜಿಲ್ಲೆಯ ಹಿರಿಯ ಶಾಸಕ ಹೊಸದುರ್ಗ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುವ ಬಿ.ಜಿ.ಗೋವಿಂದಪ್ಪ ಹಾಗೂ ಚಳ್ಳಕೆರೆಯ ಹ್ಯಾಟ್ರಿಕ್ ಶಾಸಕ ಟಿ.ರಘುಮೂರ್ತಿಗೆ ನಿಗಮ ಮಂಡಳಿಗಳ ಅಧ್ಯಕ್ಷರಾಗುವ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ದಿವ್ಯಪ್ರಭು ಜಿ.ಆರ್.ಜೆ
ಶಾಸಕ ಬಿ.ಜಿ.ಗೋವಿಂದಪ್ಪ ಅವರಿಗೆ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಜವಾಬ್ದಾರಿ ನೀಡಲಾಗಿದೆ.
ಇನ್ನೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮಂಡಳಿಗಳ ನಿಗಮದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಇಬ್ಬರೂ ಶಾಸಕರಿಗೆ ಇನ್ನು ಮುಂದೆ ಸಂಪುಟ ದರ್ಜೆಯ ಸ್ಥಾನಮಾನ ದೊರೆಯಲಿದೆ. ಸಂಪುಟ ಸಚಿವರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: 9 ತಿಂಗಳಲ್ಲಿ ಜಿಲ್ಲೆಗೆ ಭದ್ರಾ ನೀರು | ಸಚಿವ ಡಿ.ಸುಧಾಕರ್
ನಿಗಮ ಮಂಡಳಿಯ ಅಧಿಕಾರಾವಧಿ ಆದೇಶ ಹೊರಟಿರುವ ಇಂದಿನಿಂದ ಮುಂದಿನ ಎರಡು ವರ್ಷಗಳಿಗೆ ನಿಗಧಿ ಮಾಡಲಾಗಿದೆ.
ಕಾರ್ಯಕರ್ತರಿಗೆ ಕೊಡಿ ಎಂದಿದ್ದ ಗೋವಿಂದಪ್ಪ:
ಹೊಸದುರ್ಗ ಶಾಸಕ ಬಿ.ಜ.ಗೋವಿಂದಪ್ಪ ಕೂಡಾ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನಿಗಮ ಮಂಡಳಿ ವಿಚಾರವಾಗಿ ಪತ್ರ ಬರೆದಿದ್ದರು.
ನನಗೆ ಪಕ್ಷ ನಾಲ್ಕು ಬಾರಿ ಟಿಕೇಟ್ ನೀಡಿದೆ, ಶಾಸಕನಾಗುವ ಅವಕಾಶ ಕಲ್ಪಿಸಿದೆ. ಹಾಗಾಗಿ ನಿಗಮ ಮಂಡಳಿ ಅಧಿಕಾರವನ್ನು ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಕೊಡಲು ಮನವಿ ಮಾಡಿದ್ದರು.
ಜಿಲ್ಲೆಯ ಇಬ್ಬರೂ ಶಾಸಕರು ನಿಗಮ ಮಂಡಳಿ ಸ್ಥಾನಮಾನ ನಿರಾಕರಿಸಿದ್ದರೂ ಕೂಡಾ ಪಕ್ಷದ ಲೆಕ್ಕಾಚಾರ ಬೇರೆಯೇ ಆಗಿರುವ ಕಾರಣಕ್ಕೆ ಜವಾಬ್ದಾರಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಟಿ.ರಘುಮೂರ್ತಿ ನಿರಾಕರಿಸಿದ್ದರು:
ಇತ್ತೀಚೆಗೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ತಮಗೆ ಯಾವುದೇ ನಿಗಮ ಮಂಡಳಿಗಳಲ್ಲಿ ಅಧಿಕಾರ ಬೇಡ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಯಾವುದೇ ಚ್ಯುತಿ ಬಾರದಂತೆ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಇದನ್ನೂ ಓದಿ: ಪ್ರಪ್ರಥಮ ಅಂತರ್ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಣೇಹಳ್ಳಿ ಶ್ರೀ
ಆದರೆ, ರಘುಮೂರ್ತಿ ಅವರ ಮನವಿಯ ಹೊರತಾಗಿಯೂ ಅವರಿಗೆ ಕೈಗಾರಿಕಾ ಮಂಡಳಿಯ ಅಧ್ಯಕ್ಷ ಸ್ಥಾನ ವಹಿಸಲಾಗಿದೆ. ಈ ಅಧಿಕಾರವನ್ನು ರಘುಮೂರ್ತಿ ಸ್ವೀಕರಿಸುತ್ತಾರೋ ಇಲ್ಲವೋ ಎನ್ನುವುದನ್ನು ಕಾದು ನೋಡಬೇಕಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
