By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Bhadra water nakikere
    ಅರ್ಧ ಹಾದಿ ಕ್ರಮಿಸಿದ ಭದ್ರಾ ನೀರು | ನಾಳೆಯೊಳಗೆ ಗೋನೂರು ತಲುಪುವ ನಿರೀಕ್ಷೆ | ಈಗ ಎಲ್ಲಿವರೆಗೆ ಹರಿದಿದೆ ಗೊತ್ತಾ ?
    7 hours ago
    ನೈಸರ್ಗಿಕ ಕೃಷಿ ಕಾರ್ಯಾಗಾರ
    ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
    20 hours ago
    DC ramya
    ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
    21 hours ago
    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
    22 hours ago
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    6 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    50 minutes ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    8 hours ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    9 hours ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    1 day ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    1 day ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    2 days ago
Reading: Organic Farming; ಶರಣ ಸಂಸ್ಕೃತಿ ಉತ್ಸವ | ಕೃಷಿ ಮೇಳದಲ್ಲಿ ಸಾವಯವ ಕೃಷಿಗೆ ಹೆಚ್ಚು ಒತ್ತು | ಸಭೆಯಲ್ಲಿ ತೀರ್ಮಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Organic Farming; ಶರಣ ಸಂಸ್ಕೃತಿ ಉತ್ಸವ | ಕೃಷಿ ಮೇಳದಲ್ಲಿ ಸಾವಯವ ಕೃಷಿಗೆ ಹೆಚ್ಚು ಒತ್ತು | ಸಭೆಯಲ್ಲಿ ತೀರ್ಮಾನ 

News Desk Chitradurga News
Last updated: 18 September 2024 18:35
News Desk Chitradurga News
2 years ago
Share
ಮುರುಘಾಮಠದಲ್ಲಿ ಪೂರ್ವ ಸಮಾಲೋಚನಾ ಸಭೆ
ಮುರುಘಾಮಠದಲ್ಲಿ ಪೂರ್ವ ಸಮಾಲೋಚನಾ ಸಭೆ
SHARE

CHITRADURGA NEWS | 18 SEPTEMBER 2024

ಚಿತ್ರದುರ್ಗ: ಇತ್ತೀಚೆಗೆ ಬೆಳೆಗಳಿಗೆ ರಾಸಾಯನಿಕ ಬಳಸುವುದರಿಂದ ನಾವು ತಿನ್ನುವ ಆಹಾರ ಸಂಪೂರ್ಣ ವಿಷಮಯವಾಗಿದೆ. ಸಾಧ್ಯವಾದಷ್ಟು ಇದರಿಂದ ಹೊರ ಬಂದು ಸಾವಯವ ಕೃಷಿ(Organic Farming)ಗೆ ಒತ್ತು ನೀಡಬೇಕಾದ ಅನಿವಾರ್ಯತೆ ಇದೆ ಎಂದು ಸ್ವಾಮಿಗಳು, ರೈತರು, ಕೃಷಿ ಚಿಂತಕರು ತೀರ್ಮಾನಿಸಿದರು.

ಕ್ಲಿಕ್ ಮಾಡಿ ಓದಿ: BESCOM: ಶೋಭಾಯಾತ್ರೆ ನೋಡಲು ಕಟ್ಟಡಗಳ ಮೇಲೆರದಂತೆ ಸೂಚನೆ

ಶ್ರೀ ಮುರುಘಾಮಠದ ಅಲ್ಲಮಪ್ರಭು ಸಂಶೋಧನ ಕೇಂದ್ರದಲ್ಲಿ ಅಕ್ಟೋಬರ್ 5ರಿಂದ 13ರವರೆಗೆ ಶರಣ ಸಂಸ್ಕೃತಿ ಉತ್ಸವ ಹಾಗೂ ಬೃಹನ್ಮಠದ 24 ನೇ ಪೀಠಾಧಿಪತಿಗಳಾಗಿದ್ದ ಜಯದೇವ ಜಗದ್ಗುರುಗಳವರ 150ನೇ ಜಯಂತ್ಯುತ್ಸವದ ನಡೆಯಲಿದ್ದು ಅದರ ಪೂರ್ವ ಸಮಾಲೋಚನಾ ಸಭೆಯಲ್ಲಿ ಚರ್ಚಿಸಲಾಯಿತು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಬರುವ ಅಕ್ಟೋಬರ್ 5ರಿಂದ 13ರವರೆಗೆ ಶರಣ ಸಂಸ್ಕೃತಿ ಉತ್ಸವ ಹಾಗೂ ಬೃಹನ್ಮಠದ 24 ನೇ ಪೀಠಾಧಿಪತಿಗಳಾಗಿದ್ದ ಜಯದೇವ ಜಗದ್ಗುರುಗಳವರ 150ನೇ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಸಭೆಯಲ್ಲಿ ಸೇರಿದ್ದ ಸ್ವಾಮಿಗಳು, ರೈತರು, ಕೃಷಿ ಚಿಂತಕರು ಸಲಹೆ ಸೂಚನೆ ನೀಡಿದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಸಭೆಯಲ್ಲಿ ಮಾತನಾಡಿ, ಶ್ರೀ ಮುರುಘಾಮಠ ಹಿಂದಿನಿಂದಲೂ ಜನಪರವಾಗಿಯೇ ಬಹುತೇಕ ಕೆಲಸಗಳನ್ನು ಮಾಡುತ್ತಾ ಬಂದಿದೆ. ಅದು ಜಯದೇವಸ್ವಾಮಿಗಳ ಕಾಲಕ್ಕೆ ಇನ್ನಷ್ಟು ಮತ್ತಷ್ಟು ಪ್ರಖರವಾಗಿ ನಡೆಯಿತು.

ಕ್ಲಿಕ್ ಮಾಡಿ ಓದಿ: State Award; ರಾಜ್ಯ ಪ್ರಶಸ್ತಿ | ಅರ್ಜಿ ಆಹ್ವಾನ

ಅದನ್ನ ಬಳಿವಿಡಿದುಕೊಂಡು ಬಂದು ಈಗಲೂ ಆ ಕಾರ್ಯ ನಡೆದಿದೆ. ಶರಣ ಸಂಸ್ಕೃತಿ ಉತ್ಸವದ ಒಂದು ಪ್ರಮುಖ ಆಕರ್ಷಕಣೆ ಅಂದರೆ ಕೃಷಿಮೇಳ. ಅದು ಈ ಬಾರಿ ಜಯದೇವ ಜಗದ್ಗುರುಗಳ ಜಯಂತ್ಯುತ್ಸವದ ಅಂಗವಾಗಿ ವಿಶೇಷವಾಗಿ ನಡೆಯಬೇಕೆಂಬುದು ಶ್ರೀ ಮಠದ ಆಶಯವಾಗಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ, ಆಹಾರಕ್ಕೂ ಆರೋಗ್ಯಕ್ಕೂ ನೇರ ಸಂಬಂಧವಿದೆ. ಆದರೆ ಈಗ ಆ ಸಂಬಂಧದ ಕೊಂಡಿ ಕಳಚುತ್ತಿದೆ. ಅದು ಹೇಗೆಂದರೆ ತಿನ್ನುವ ಆಹಾರ ಸಂಪೂರ್ಣವಾಗಿ ವಿಷಕಾರಿಯಾಗಿದೆ.

ಅದನ್ನ ಗಮನದಲ್ಲಿಟ್ಟುಕೊಂಡು ನಾವು ಸಾವಯವ ಕೃಷಿ ಪದ್ಧತಿಯ ಮೂಲಕ ಹೋಗದೆ ಹೋದರೆ ಭವಿಷ್ಯದಲ್ಲಿ ನಮಗೆ ಉಳಿಗಾಲವಿಲ್ಲ. ಗರ್ಭದರಲ್ಲಿರುವ ಶಿಶುವಿನಿಂದ ಹಿಡಿದು ಈಗೀಗ ಕಾಯಿಲೆಗಳು ಬರುತ್ತಿವೆ.

5-10 ವರ್ಷದ ಮ್ಕಕಳಿಗೆ ಮಧುಮೇಹದಂತಹ ಕಾಯಿಲೆಗಳು ಬೆನ್ನತ್ತಿವೆ. ಸತ್ವಯುತ, ಸಾಂಪ್ರದಾಯಿಕ ಜೀವನ ಶೈಲಿ ಮಾಯವಾಗಿ, ಆಧುನಿಕ ಜೀವನಶೈಲಿಗೆ ಒಗ್ಗಿಕೊಂಡಿರುವ ನಾವು, ಕೂಡು ಕುಟುಂಬ ಮಾಯವಾಗಿ ಸ್ವಾರ್ಥಪರ ಜೀವನ ಕ್ರಮದಿಂದ ಮಾನವೀಯತೆ, ಮನುಷ್ಯತ್ವ ಕಡಿಮೆಯಾಗುತ್ತಾ ದುರಾಸೆ ಹೆಚ್ಚಾಗಿದೆ.

ಕ್ಲಿಕ್ ಮಾಡಿ ಓದಿ: ಸ್ವಚ್ಛತಾ ಹೀ ಸೇವಾ ಆಂದೋಲನ | ಜಿ.ಪಂ ಸಿಇಒ ಸೋಮಶೇಖರ್ ಚಾಲನೆ

ಎಂಎನ್‌ಸಿಗಳಿಂದ ಹಸಿರು ಕ್ರಾಂತಿ ನಲುಗಿದೆ. ಇಂತಹ ಸಂಕಷ್ಟದ ದಿನಗಳಲ್ಲಿ ನಾವು ಕೃಷಿ ಮೇಳಗಳನ್ನು ಅರ್ಥಪೂರ್ಣವಾಗಿ ನಡೆಸುವ ಮೂಲಕ ಜನರಲ್ಲಿ ಜಾಗೃತಿಯನ್ನು ಉಂಟುಮಾಡಬೇಕಿದೆ ಸಲಹೆ ನೀಡಿದರು.

ಕೆಲವರ ಹಾದಿ ತಪ್ಪಿದ ವಿಜ್ಞಾನದ ನಡೆ, ಪ್ರಕೃತಿಗೆ ವಿರುದ್ಧವಾದ ಸಂಶೋಧನೆಯಿಂದ ಭೂಮಿ ಕಲುಷಿತಕಗೊಂಡಿದೆ. ಕೃಷಿ ಮೇಳದಲ್ಲಿ ಸಿರಿ ಧಾನ್ಯದ ಅಡುಗೆ, ದೇಸಿ ತಳಿಯ ಹಸುಗಳಿಗೆ ಪ್ರಾಧಾನ್ಯತೆ ನೀಡಬೇಕು. ಪ್ರತಿ ಹಂತದಲ್ಲಿ ಸಿರಿಧಾನ್ಯಗಳನ್ನು ಬಳಸುವುದರಿಂದ ಹಿಂದಿನ ಗತವೈಭವವನ್ನು ಮತ್ತೆ ಮರುಕಳಿಸಬಹುದು ಎಂಬ ಆಶಯ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯಂತೂ ನಮಗೆ ಕನ್ನಡಿಯೊಳಗಿನ ಗಂಟಾಗಿದೆ. ಇದನ್ನು ಹೋರಾಟ ಮಾಡಿ ಕಾರ್ಯಗತಗೊಳಿಸಿ, ಮತ್ತೆ ಇದರೊಂದಿಗೆ ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗೆ ಕಾಯಕಲ್ಪ ನೀಡಬೇಕಾಗಿದೆ ಎಂದು ಸಲಹೆ ನೀಡುವುದರ ಮೂಲಕ ಗಮನ ಸೆಳೆದರು.

ಪಶುಪಾಲನಾ ಇಲಾಖೆಯ ಡಾ. ಮುರುಗೇಶï ಅವರು ಮಾತನಾಡಿ ಜೋಡೆತ್ತುಗಳ ಹಾಗೂ ವಿಶೇಷ ಸಾಕುಪ್ರಾಣ ಗಳ ಪ್ರದರ್ಶನವನ್ನು ಸಹ ಈ ಬಾರಿ ವಿಶೇಷವಾಗಿ ಮಾಡಲಾಗುವುದೆಂದರು.

ಚಿತ್ರದುರ್ಗ ನಗರಸಭೆಯ ಮಾಜಿ ಅಧ್ಯಕ್ಷ . ದೇವಿಕುಮಾರಿ ವಿಶ್ವನಾಥ್ ಅವರು ಮಾತನಾಡಿ, ಜೆ. ಹೆಚ್. ಪಾಟೀಲ್ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಚಿತ್ರದುರ್ಗ ನಗರಕ್ಕೆ ಹೋರಾಟ ಮಾಡಿ ಶಾಂತಿ ಸಾಗರದಿಂದ ನೀರನ್ನು ತರಲಾಯಿತು. ಹಾಗೆ ಉಳಿದ ಕೆಲಸಗಳು ಸಹ ಹೋರಾಟದಿಂದಲೇ ಆಗಬೇಕೆಂದು ಸಲಹೆ ನೀಡಿದರು.

ಕ್ಲಿಕ್ ಮಾಡಿ ಓದಿ: Artist; ಚಿತ್ರದುರ್ಗದ ಕಲಾವಿದ ಕಣ್ಮೇಶ್ ಅವರಿಗೆ ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪುರಸ್ಕಾರ | ಸಿಎಂ‌ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ

ಹೊಸದುರ್ಗದ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಜಿ. ಬಸವರಾಜ್ ಅವರು ಮಾತನಾಡಿ, ರಾಸಾಯನಿಕ ಮುಕ್ತ ವ್ಯವಸಾಯ ಮಾಡುವ ಅನೇಕ ರೈತರಿದ್ದಾರೆ.

ಅಂತಹ ರೈತರ ಪರಿಚಯ ಮಾಡಿಕೊಡಬೇಕು. ಹಾಗೆಯೇ ಜಿಲ್ಲೆಯ ಪರ ಜಿಲ್ಲೆಯ ಹಾಗೂ ಹೊರ ರಾಜ್ಯಗಳಲ್ಲಿಯೂ ಸಾವಯವ ಕೃಷಿ ಮಾಡುವಂತಹ ಅನೇಕ ಮಹನೀಯರಿದ್ದಾರೆ. ಅಂತವರ ಕಾರ್ಯಕ್ಷೇತ್ರ ದರ್ಶನವನ್ನು ಆಗಾಗ ಮಠಗಳು ಮಾಡಿಸಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದ ಅವರು ನಾಟಿ ಹಸುವಿನ ಉತ್ಪನ್ನ ಆರೋಗ್ಯಕ್ಕೆ ಬಹುಮುಖ್ಯವಾಗಿ ಉಪಯೋಗವಿದೆ. ಅಂತಹ ಉತ್ಪನ್ನಗಳನ್ನು ಈ ಸಂದರ್ಭದಲ್ಲಿ ಪ್ರದರ್ಶನ್ಕಕೆ ಇಟ್ಟು ಸಾರ್ವಜನಿಕರಿಗೆ ಅದರ ಉಪಯೋಗ ಮಾಡಿಕೊಡಬೇಕು ಎಂದರು.

ಹಿರಿಯ ಪರ್ತಕರ್ತರಾದ ಜಿ.ಎಸ್. ಉಜ್ಜನಪ್ಪ ಮಾತಾಡಿ, ನಾವು ಬಹಳಷ್ಟು ಮಾತನಾಡಿ ಕಡಿಮೆ ಕೆಲಸ ಮಾಡುತ್ತೇವೆ. ಆದರೆ ಜಾಸ್ತಿ ಕೆಲಸ ಮಾಡಿ ಕಡಿಮೆ ಮಾತನಾಡುವ ಮೂಲಕ ಸಮಗ್ರ ಕೃಷಿ ಬದುಕನ್ನು ಮಾದರಿ ಎನ್ನುವಂತೆ ಜಿಲ್ಲೆಯಲ್ಲಿ ಮಾಡಿ ತೋರಿಸುವ ಬಗ್ಗೆ ಸಲಹೆ ನೀಡಿದರು.

ಹಸಿರು ಅದು ಶಾಂತಿ ನೆಮ್ಮದಿ ಮತ್ತು ಸುಭಿಕ್ಷದ ಸಂದೇಶ ಸಾರುವ ಸಂಕೇತ. ಅದಕ್ಕೇ ಅನಾರೋಗ್ಯಕ್ಕೆ ಕಾಡಿದರೆ ಇಡೀ ಬದುಕೇ ಕಲ್ಮಶವಾಗುತ್ತದೆ. ಅದು ಆಗಲು ಬಿಡಬಾರದೆಂಬ ಹಿನ್ನೆಲೆಯಲ್ಲಿ ಚಿತ್ರದುರ್ಗದ ಶ್ರೀಮಠ ಕಾಲಕಾಲಕ್ಕೆ ಜನಪರ ಯೋಜನೆಗಳನ್ನು ಜನಮುಖಿಯಾಗಿಯೇ ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ದಾವಣಗೆರೆ ವಿರಕ್ತ ಮಠದ ಡಾ. ಬಸವ ಪ್ರಭುಸ್ವಾಮಿಗಳವರು ನುಡಿದರು.

ಕ್ಲಿಕ್ ಮಾಡಿ ಓದಿ: Gaurasandra Maramma; ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವಿಯ ಅಲಂಕಾರಕ್ಕೆ ಮನಸೋತ ಭಕ್ತರು

ಈ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಸಿ. ಸಿದ್ದರಾಮಣ್ಣ, ಪಿ. ಸಿ. ನಾಗರಾಜಪ್ಪ, ಕವಿತಾ ಎ.ಎನ್.ಮಲ್ಲಿಕಾರ್ಜುನ, ಹೆಚ್.ಪ್ರಸನ್ನ, ಬಿ.ಎಸ್. ರಂಗಸ್ವಾಮಿ, ಸಿ. ನಾಗರಾಜ, ಎಂ. ಬಿ. ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Agricultural fairChitradurgaChitradurga newsChitradurga Updatesconsultation meetingEmphasisKannada Latest NewsMuruga MathOrganic farmingSharan Culture Festivalಒತ್ತುಕನ್ನಡ ಲೇಟೆಸ್ಟ್ ನ್ಯೂಸ್ಕೃಷಿ ಮೇಳಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಮುರುಘಾಮಠಶರಣ ಸಂಸ್ಕೃತಿ ಉತ್ಸವಸಮಾಲೋಚನಾ ಸಭೆ
Share This Article
Facebook Email Print
Previous Article Hindu Maha Ganapati BESCOM: ಶೋಭಾಯಾತ್ರೆ ನೋಡಲು ಕಟ್ಟಡಗಳ ಮೇಲೆರದಂತೆ ಸೂಚನೆ
Next Article arecanut price list Arecanut: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಹೊಸ ರಾಶಿ ಬೆಲೆಯಲ್ಲಿ ಹೆಚ್ಚಳ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
ಮಾರುಕಟ್ಟೆ ಧಾರಣೆ
Bhadra water nakikere
ಅರ್ಧ ಹಾದಿ ಕ್ರಮಿಸಿದ ಭದ್ರಾ ನೀರು | ನಾಳೆಯೊಳಗೆ ಗೋನೂರು ತಲುಪುವ ನಿರೀಕ್ಷೆ | ಈಗ ಎಲ್ಲಿವರೆಗೆ ಹರಿದಿದೆ ಗೊತ್ತಾ ?
ಮುಖ್ಯ ಸುದ್ದಿ
eyebrows
ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
Life Style
Neck crease
ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up