CHITRADURGA NEWS | 17 APRIL 2024
ಚಿತ್ರದುರ್ಗ: ನಗರದ ತುರುವನೂರು ರಸ್ತೆಯಲ್ಲಿರುವ ಶ್ರೀ ತಿಪ್ಪೇರುದ್ರಸ್ವಾಮಿ ಆಶ್ರಮದಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ.
ಕೆಳಗೋಟೆಗೆ ಹೊಂದಿಕೊಂಡಿರುವ, ತುರುವನೂರು ರಸ್ತೆಯಲ್ಲಿರುವ ಶ್ರೀ ತಿಪ್ಪೇರುದ್ರಸ್ವಾಮಿ ಆಶ್ರಮದಲ್ಲಿರುವ ನೀರಿನ ಸಂಪಿನಲ್ಲಿ ಮಗಳ ಮೃತದೇಹ ಪತ್ತೆಯಾದರೆ, 200 ಲೀಟರ್ ನೀಡಿನ ಡ್ರಮ್ಮಿನಲ್ಲಿ ತಾಯಿಯ ಮೃತ ದೇಹ ಪತ್ತೆಯಾಗಿದೆ.

ಇದನ್ನೂ ಓದಿ: ರೈತರಿಗೆ ಶುಭ ಸುದ್ದಿ | ವಾಡಿಕೆಗಿಂತ ಅಧಿಕ ಸುರಿಯಲಿದೆ ಮುಂಗಾರು | ಭಾರತೀಯ ಹವಾಮಾನ ಇಲಾಖೆ ಮಾಹಿತಿ
ಶಿವಮೊಗ್ಗ ಜಿಲ್ಲೆ, ಭದ್ರಾವತಿ ಮೂಲದ ಸುರೇಶ್ ಎಂಬುವವರ ಪತ್ನಿ ಗೀತಾ(40) ಹಾಗೂ ಪುತ್ರಿ ಪ್ರಿಯಾಂಕ(22) ಶವವಾಗಿ ಪತ್ತೆಯಾಗಿದ್ದಾರೆ.
ಮಂಗಳವಾರ ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ತಡರಾತ್ರಿ 1 ಗಂಟೆವರೆಗೆ ಮಹಜರ್ ನಡೆಸಿ ಮೃತದೇಹಗಳನ್ನು ಶವಾಗಾರಕ್ಕೆ ಸ್ಥಳಾಂತರ ಮಾಡಿಸಿದ್ದಾರೆ.
ಇದನ್ನೂ ಓದಿ: ಹಂಪಿ ಉತ್ಸವದ ಮಾದರಿಯಲ್ಲಿ ಮದಕರಿ ನಾಯಕ ಉತ್ಸವ | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕಳೆದ ಮೂರ್ನಾಲ್ಕು ವರ್ಷದಿಂದ ತಿಪ್ಪೇರುದ್ರಸ್ವಾಮಿ ಆಶ್ರಮದಲ್ಲಿ ನೆಲೆಸಿದ್ದ ಸುರೇಶ್ ಹಾಗೂ ಗೀತಾ ಕುಟುಂಬ ದೇವಸ್ಥಾನದಲ್ಲಿ ಪೂಜೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ಮಂಗಳವಾರ ಸಂಜೆ ಗೋತಾ ಅವರ ಪತಿ ಸುರೇಶ್ ಹಾಗೂ ಪುತ್ರ ಮೋಹನ್ ಆಶ್ರಮದಿಂದ ಹೊರಗೆ ತೆರಳಿದ್ದರು. ರಾತ್ರಿ ವಾಪಾಸು ಬಂದಾಗ ಇಬ್ಬರು ಮೃತಪಟ್ಟಿರುವುದು ಗೊತ್ತಾಗಿದೆ.
ಇದನ್ನೂ ಓದಿ: ಶಿವಮೊಗ್ಗ ಮಾರುಕಟ್ಟೆಯಲ್ಲೂ ರಾಶಿ ಅಡಿಕೆ ಬೆಲೆಯಲ್ಲಿ ಹೆಚ್ಚಳ
ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಚಿತ್ರದುರ್ಗ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
