CHITRADURGA NEWS | 15 OCTOBER 2024
ಹೊಳಲ್ಕೆರೆ: ಭದ್ರಾ(Bhadra)ದಿಂದ ನೀರು ತರಲು ಮಲಸಿಂಗನಹಳ್ಳಿ ಗುಡ್ಡದಲ್ಲಿ 105 ಕೋಟಿ ರೂ.ವೆಚ್ಚದಲ್ಲಿ ಮೂರು ಮೋಟಾರ್(Motor) ಕೂರಿಸಿ ಟಿ.ಎಮ್ಮಿಗನೂರು, ಶಿವಗಂಗಾ, ತಾಳ್ಯ, ಹೆಚ್.ಡಿ.ಪುರ, ಕೆರೆಯಾಗಳಹಳ್ಳಿ ಕೆರೆಗಳಿಗೆ ನೀರು ತುಂಬಿಸಲಾಗುವುದೆಂದು ಶಾಸಕ ಡಾ.ಎಂ.ಚoದ್ರಪ್ಪ ಹೇಳಿದರು.
ಕ್ಲಿಕ್ ಮಾಡಿ ಓದಿ: APMC; ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಅಕ್ಟೋಬರ್ 15 | ಇಂದಿನ ಹತ್ತಿ ರೇಟ್

ಹಳೆಹಳ್ಳಿ ಲಂಬಾಣಿಹಟ್ಟಿಯಿಂದ ಗಿಲಕೇನಹಳ್ಳಿ, ಗರಗ, ಮೇಕೆನಹಟ್ಟಿ ಮುಖಾಂತರ ಅಪ್ಪರಸನಹಳ್ಳಿವರೆಗೆ ಕೆ.ಎಂ.ಇ.ಆರ್.ಸಿ.ಯೋಜನೆಯಡಿ 15.48 ಕೋಟಿ ರೂ.ವೆಚ್ಚದಲ್ಲಿ ನೂತನ ಸಿ.ಸಿ.ರಸ್ತೆ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.
ಹೊಳಲ್ಕೆರೆ ಕ್ಷೇತ್ರಕ್ಕೆ 493 ಹಳ್ಳಿಗಳು ಸೇರಿದ್ದು, ಚನ್ನಗಿರಿ, ತರಿಕೆರೆಯ ಗಡಿವರೆಗೂ ನನ್ನ ವ್ಯಾಪ್ತಿಯಿದೆ. ದೇಶಕ್ಕೆ ಸ್ವಾತಂತ್ರ ಸಿಕ್ಕು 78 ವರ್ಷಗಳಾಗಿದ್ದರೂ ಈ ಹಳ್ಳಿಗಳಿಗೆ ರಸ್ತೆಯಿರಲಿಲ್ಲ ಎನ್ನುವುದನ್ನು ಗಮನಿಸಿ ತಾಲ್ಲೂಕಿನಾದ್ಯಂತ ಎಲ್ಲಾ ಹಳ್ಳಿಗಳಲ್ಲಿ ಗುಣಮಟ್ಟದ ರಸ್ತೆ ಮಾಡಿಸಿದ್ದೇನೆ. ರಸ್ತೆಗಳು ಎಲ್ಲಿ ಅಭಿವೃದ್ದಿಯಾಗಿರುತ್ತವೋ ಅಂತಹ ದೇಶ ಅಭಿವೃದ್ದಿಯತ್ತ ಸಾಗುತ್ತಿದೆ ಎಂದರ್ಥ.
ಅದಕ್ಕಾಗಿ ಪ್ರಧಾನಿ ನರೇಂದ್ರಮೋದಿ ಹಾಗೂ ನಿತಿನ್ಗಡ್ಕರಿ ಇವರುಗಳು ರಸ್ತೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಇಲ್ಲಿ ಪುಷ್ಕರಣಿಗೆ ಒಂದು ಹನಿ ನೀರು ಬರುತ್ತಿರಲಿಲ್ಲ. ಪೈಪ್ಲೈನ್ ಹಾಕಿಸಿ ನೀರು ತುಂಬಿಸಿದ್ದೇನೆ. ಸರ್ಕಾರ ಯಾವುದಾದರೂ ಇರಲಿ. ಅನುದಾನ ತರುವುದು ನನಗೆ ಗೊತ್ತಿದೆ ಎಂದು ತಿಳಿಸಿದರು.
ಕ್ಲಿಕ್ ಮಾಡಿ ಓದಿ: Teacher: ಹೊಳಲ್ಕೆರೆ ಶಿಕ್ಷಕ ಟಿ.ಪಿ.ಉಮೇಶ್ಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ
ಹಿರಿಯೂರಿನ ವಾಣಿವಿಲಾಸ ಸಾಗರದಿಂದ ಶುದ್ದ ಕುಡಿಯುವ ನೀರು ತಂದು ಪ್ರತಿ ಮನೆಗೂ ಪೂರೈಸುವುದಕ್ಕಾಗಿ ಪೈಪ್ಲೈನ್ ಅಳವಡಿಸಲು 367 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ವಿ.ವಿ.ಸಾಗರದ ಮಧ್ಯೆ ನೀರಿನಲ್ಲಿ 50 ರಿಂದ 60 ಅಡಿ ಆಳದಲ್ಲಿ ಪೈಪ್ಲೈನ್ ಹಾಕಿ ಮೋಟಾರ್ ಕೂರಿಸಿ ಫಿಲ್ಟರ್ ಅಳವಡಿಕೆಗೆ 60 ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ. ಇನ್ನು 3 or 4 ತಿಂಗಳಲ್ಲಿ ನೀರು ಸರಬರಾಜು ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಾಣಿಗಿರೀಶ್, ಉಪಾಧ್ಯಕ್ಷರಾದ ವಿಶಾಲಮ್ಮ, ಗಂಗಾಧರಚಾರಿ, ಸದಸ್ಯರುಗಳಾದ ರಾಮಪ್ಪ, ಹನುಮಂತಪ್ಪ, ಈಶ್ವರಪ್ಪ, ಗೋವಿಂದಪ್ಪ, ರಂಗಸ್ವಾಮಿ, ರಾಜಪ್ಪ, ಶಿವಣ್ಣ, ರಂಗಪ್ಪ, ಕೃಷ್ಣಮೂರ್ತಿ, ರಾಜಪ್ಪ, ಪ್ರಶಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಗುತ್ತಿಗೆದಾರ ಜೈರಾಮ್ ಇದ್ದರು.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
