By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಲೋಕಸಭೆ ಚುನಾವಣೆಗೆ ದಿನಗಣನೆ | ಚಿತ್ರದುರ್ಗದಲ್ಲಿ ಶುರುವಾಯ್ತು ಟಿಕೇಟ್ ಅಂದರ್-ಬಾಹರ್ ಆಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಲೋಕಸಭೆ ಚುನಾವಣೆಗೆ ದಿನಗಣನೆ | ಚಿತ್ರದುರ್ಗದಲ್ಲಿ ಶುರುವಾಯ್ತು ಟಿಕೇಟ್ ಅಂದರ್-ಬಾಹರ್ ಆಟ

ಮುಖ್ಯ ಸುದ್ದಿ

ಲೋಕಸಭೆ ಚುನಾವಣೆಗೆ ದಿನಗಣನೆ | ಚಿತ್ರದುರ್ಗದಲ್ಲಿ ಶುರುವಾಯ್ತು ಟಿಕೇಟ್ ಅಂದರ್-ಬಾಹರ್ ಆಟ

chitradurganews.com
Last updated: 22 February 2024 10:48
chitradurganews.com
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 FEBRUARY 2024

ಚಿತ್ರದುರ್ಗ: ಇನ್ನೇನು ವಾರ-ಒಪ್ಪತ್ತಿನಲ್ಲಿ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿ ನೀತಿ ಸಂಹಿತೆ ಜಾರಿ ಮಾಡಲಿದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನೀತಿ ಸಂಹಿತೆ ಜಾರಿ ಆಗುವುದರೊಳಗೆ ಆಗಬೇಕಾದ ತುರ್ತು ಕೆಲಸಗಳನ್ನು ಸರ್ಕಾರಗಳ ಮಟ್ಟದಲ್ಲಿ ತರಾತುರಿಯಲ್ಲಿ ಮುಗಿಸುವ ಪ್ರಯತ್ನದಲ್ಲಿವೆ.

ಈ ನಡುವೆ ಎಲ್ಲೆಡೆ ಟಿಕೇಟ್ ಆಕಾಂಕ್ಷಿಗಳ ಲಾಭಿ, ಒತ್ತಡ, ಬೇರೆ ಬೇರೆ ವಿಷಯಗಳನ್ನಿಟ್ಟು ಪಕ್ಷದ ವರಿಷ್ಠರನ್ನು ಇಕ್ಕಟ್ಟಿಗೆ ಸಿಲುಕಿಸುವ ಎಲ್ಲಾ ರೀತಿಯ ಕಾರ್ಯತಂತ್ರಗಳು ಜೋರಾಗಿ ನಡೆಯುತ್ತಿವೆ.

ಇದನ್ನೂ ಓದಿ: ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

ಆದರೆ, ಕೋಟೆನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಈ ಆಟ ಕೊಂಚ ಬೇರೆ ಆಯಾಮ ಪಡೆದುಕೊಂಡಿದೆ. ಹೊರಗಿನವರು, ಒಳಗಿನವರು ಎನ್ನುವ ಅಂಶ ಇಲ್ಲಿ ಬಿರುಸಿನ ಚರ್ಚೆಯಾಗಿದೆ.

ಕಳೆದ ಆರು ತಿಂಗಳಿಂದಲೇ ಹೊರಗಿನವರಿಗೆ ಯಾವ ಕಾರಣಕ್ಕೂ ಟಿಕೇಟ್ ಕೊಡಬಾರದು ಎನ್ನುವ ಕೂಗು ಜಿಲ್ಲೆಯಲ್ಲಿ ಬಲವಾಗಿ ಕೇಳಿ ಬರುತ್ತಿದೆ.

ಕಾಂಗ್ರೆಸ್‍ನ ಪ್ರಬಲ ಆಕಾಂಕ್ಷಿ, 2009ರ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಜೆ.ಜೆ.ಹಟ್ಟಿಯ ಡಾ.ಬಿ.ತಿಪ್ಪೇಸ್ವಾಮಿ ಇಂಥದ್ದೊಂದು ಚರ್ಚೆಗೆ ತುಸು ವ್ಯಾಪಕತೆ ಕೊಟ್ಟಿದ್ದಾರೆ.

ಇದನ್ನೂ ಓದಿ: ವಾಣಿವಿಲಾಸ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಸಮೀಕ್ಷೆ

ಕಾಂಗ್ರೆಸ್ಸಿನಲ್ಲಿ ಶುರುವಾದ ಈ ಕಿಚ್ಚು ಕ್ರಮೇಣ ಬಿಜೆಪಿಯನ್ನೂ ಆಕ್ರಮಿಸಿಕೊಂಡಿದೆ. ಖುದ್ದು ಲೋಕಸಭಾ ಸದಸ್ಯ, ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ ಕೂಡಾ ಇದಕ್ಕೆ ಪ್ರತಿಕ್ರಿಯೆ ನೀಡಿ, ಸ್ಥಳೀಯರು ಟಿಕೇಟ್ ಕೇಳುವುದನ್ನು ಗೌರವಿಸುತ್ತೇವೆ. ಪಕ್ಷ ಸ್ಥಳೀಯರಿಗೆ ಟಿಕೇಟ್ ಕೊಟ್ಟರೆ ಓಡಾಡಿ ಗೆಲ್ಲಿಸುತ್ತೇವೆ ಎಂದಿದ್ದಾರೆ.

ಇದು ಕಾಂಗ್ರೆಸ್ ಹಾಗೂ ಬಿಜೆಪಿ ಟಿಕೇಟ್‍ಗೆ ಕ್ಷೇತ್ರದ ಹೊರಗಿನ ಆಕಾಂಕ್ಷಿಗಳಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಒಂದು ಹಂತದಲ್ಲಿ ಪಕ್ಷಗಳ ಹೈಕಮಾಂಡ್‍ಗಳಿಗೂ ಈ ಅಂದರ್-ಬಾಹರ್ ಆಟವನ್ನು ನಿಯಂತ್ರಣ ಮಾಡುವ ಸವಾಲು ಎದುರಾಗಿದೆ.

ಈ ಕಾರಣಕ್ಕೆ ಇಂದಿರಾ ಗಾಂಧಿ ಚಿಕ್ಕಮಗಳೂರಿನಲ್ಲಿ ಸ್ಪರ್ಧೆ ಮಾಡಿರಲಿಲ್ಲವೇ, ಸೋನಿಯಾ ಗಾಂಧಿ ಬಳ್ಳಾರಿಯಲ್ಲಿ ಸ್ಪರ್ಧಿಸಿರಲಿಲ್ಲವೇ, ಸುಷ್ಮಾ ಸ್ವರಾಜ್ ಸ್ಪರ್ಧೆ ಮಾಡಿಲ್ಲವೇ, ರಾಹುಲ್ ಗಾಂಧಿ ಕೇರಳಾದಲ್ಲಿ ನಿಂತು ಗೆದ್ದಿಲ್ಲವೇ, ನಿರ್ಮಲಾ ಸೀತಾರಾಮನ್ ಯಾವ ರಾಜ್ಯದವರು ಎಂಬಿತ್ಯಾದಿ ಕಾರಣಗಳ ಸರಮಾಲೆಯೇ ಹರಿದು ಬರುತ್ತಿದೆ.

ಇದನ್ನೂ ಓದಿ: ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಒಂದು ತಿಂಗಳು ನೀರು

ಕಳೆದ ಚುನಾವಣೆಯಲ್ಲೂ ಸ್ಥಳೀಯರಿಗೆ ಟಿಕೇಟ್ ಕೊಡಬೇಕು ಎಂಬ ಬಲವಾದ ವಾದವಿದ್ದರೂ, ಪಕ್ಷಗಳ ಹೈಕಮಾಂಡ್ ಅಷ್ಟಾಗಿ ಗಮನಹರಿಸದೇ ಧಿಟ್ಟ ನಿರ್ಧಾರ ತೆಗೆದುಕೊಂಡು ಹೊರಗಿನವರಿಗೆ ಮಣೆ ಹಾಕಿತು. ಆದರೆ, ಈ ಬಾರಿ ಈ ಕೂಗು ಮತ್ತಷ್ಟು ವ್ಯಾಪಕತೆ ಪಡೆದುಕೊಂಡಿದೆ.

ಸ್ಥಳೀಯರು-ಹೊರಗಿನವರು ಎನ್ನುವ ವಾದವೇ ಒಂದಿಷ್ಟು ಮತಗಳನ್ನು ಚದುರಿಸುವ ತಂತ್ರವಾಗಿ ಹೋಗಿದೆ. ಇದರಿಂದ ಯಾವ ಪಕ್ಷ ಬೇಕಾದರೂ ಮುಗ್ಗರಿಸಬಹುದು ಎನ್ನುವ ಲೆಕ್ಕಾಚಾರಗಳು ನಡೆಯುತ್ತಿವೆ.

ಸದ್ಯ ಕಾಂಗ್ರೆಸ್‍ನಲ್ಲಿ ಎರಡು ಡಜನ್ ಆಕಾಂಕ್ಷಿಗಳಿದ್ದಾರೆ, ಬಿಜೆಪಿಯಲ್ಲಿ ಅರ್ಧ ಡಜನ್ ಆಕಾಂಕ್ಷಿಗಳಿದ್ದಾರೆ. ಇದರಲ್ಲಿ ಸ್ಥಳೀಯರು, ಹೊರಗಿನವರು ಎರಡೂ ಇದ್ದಾರೆ. ಮುಂದೆ ಈ ವಾದ ಯಾವ ಹಂತ ತಲುಪಲಿದೆ ಎನ್ನುವುದನ್ನೂ ಕಾದು ನೋಡಬೇಕಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 1 ಲಕ್ಷ ಉದ್ಯೋಗಗಳಿಗೆ ಬೃಹತ್ ಉದ್ಯೋಗ ಮೇಳ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:A. NarayanaswamyAndar-BaharChitradurgaLok Sabha Electionsಅಂದರ್-ಬಾಹರ್ಎ.ನಾರಾಯಣಸ್ವಾಮಿಚಿತ್ರದುರ್ಗಲೋಕಸಭೆ ಚುನಾವಣೆ
Share This Article
Facebook Email Print
Previous Article ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ | ಮೂರು ದಿನ ಸರಳ ಆಚರಣೆ
Next Article ಅಣಬೆ ಬೇಸಾಯ ತೋಟಗಾರಿಕೆ ವಿದ್ಯಾರ್ಥಿಗಳಿಂದ ಗ್ರಾಮೀಣ ಕೃಷಿ ಕಾರ್ಯಾನುಭವ| ಅಣಬೆ ಬೇಸಾಯ, ಮಾರುಕಟ್ಟೆ ಮಾಗೋಪಾಯಗಳ ತರಬೇತಿ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up