By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಚಿತ್ರದುರ್ಗ ನಗರಸಭೆ ಬಜೆಟ್ | ಯಾವ ಕೆಲಸಕ್ಕೆ ಎಷ್ಟು ಅನುದಾನ ಮೀಸಲು | ಇಲ್ಲಿದೆ ಪೂರ್ಣ ವಿವರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಚಿತ್ರದುರ್ಗ ನಗರಸಭೆ ಬಜೆಟ್ | ಯಾವ ಕೆಲಸಕ್ಕೆ ಎಷ್ಟು ಅನುದಾನ ಮೀಸಲು | ಇಲ್ಲಿದೆ ಪೂರ್ಣ ವಿವರ

ಮುಖ್ಯ ಸುದ್ದಿ

ಚಿತ್ರದುರ್ಗ ನಗರಸಭೆ ಬಜೆಟ್ | ಯಾವ ಕೆಲಸಕ್ಕೆ ಎಷ್ಟು ಅನುದಾನ ಮೀಸಲು | ಇಲ್ಲಿದೆ ಪೂರ್ಣ ವಿವರ

chitradurganews.com
Last updated: 18 February 2025 18:38
chitradurganews.com
4 months ago
Share
Chitradurga muncipolity budjet
ಚಿತ್ರದುರ್ಗ ನಗರಸಭೆ ಬಜೆಟ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 18 FEBRUARY 2025

ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ 2025-26ನೇ ಸಾಲಿಗೆ 1.2 ಕೋಟಿ ರೂ ಉಳಿತಾಯ ಬಜೆಟ್ ಮಂಡನೆ ಮಾಡಿದರು.

ನಗರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆ ಹಾಗೂ ಆಯವ್ಯಯ ಮಂಡನೆ ಸಭೆಯಲ್ಲಿ 146.80 ಕೋಟಿ ರೂ. ಬಜೆಟ್ ಮಂಡನೆ ಮಾಡಿದರು.

ಇದನ್ನೂ ಓದಿ: ಐಮಂಗಲ ಪೊಲೀಸರಿಂದ ಅಂತಾರಾಜ್ಯ ಕಳ್ಳನ ಬಂಧನ | 351 ಗ್ರಾಂ ಚಿನ್ನಾಭರಣ ವಶಕ್ಕೆ

66.17 ಕೋಟಿ ರೂ. ಆದಾಯ, 64.58 ಕೋಟಿ ರೂ.ಖರ್ಚು ಸೇರಿದಂತೆ ವಿವಿಧ ಮೂಲಗಳಿಂದ ಆದಾಯದ ನಿರೀಕ್ಷೆ ಮಾಡಲಾಗಿದೆ ಎಂದು ವಿವರಿಸಿದರು.

  • ನಗರಸಭೆ ಆದಾಯ ಮತ್ತು ಸರ್ಕಾರದ ಅನುದಾನದಿಂದ ನಗರದ ವಿವಿಧ ವಾರ್ಡ್‍ಗಳಲ್ಲಿ ನೀರಿನ ಅವಶ್ಯಕತೆ ಇರುವ ಕಡೆ ಬೋರ್‍ವೆಲ್, ಶುದ್ಧ ನೀರಿನ ಘಟಕ, ಪೈಪ್‍ಲೈನ್ ಅಳವಡಿಕೆ, ನಿರ್ವಹಣೆ ಇತ್ಯಾದಿ ಕಾರ್ಯಗಳಿಗೆ 11.25 ಕೋಟಿ ರೂ. ಮೀಸಲಿಡಲಾಗಿದೆ.
  • ನಗರದಲ್ಲಿನ ಒಳಚರಂಡಿಗಳ ಸಮರ್ಪಕ ನಿರ್ವಹಣೆ, ಅಭಿವೃದ್ಧಿಗಾಗಿ 3 ಕೋಟಿ ರೂ.
  • ಪೂರ್ಣಗೊಳ್ಳುವ ಹಂತದಲ್ಲಿರುವ ತ್ಯಾಗರಾಜ ಮಾರುಕಟ್ಟೆ, ಮಾಂಸ ಮಾರುಕಟ್ಟೆ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ 2.5 ಕೋಟಿ ಮೀಸಲಿಡಲಾಗಿದೆ.

ಇದನ್ನೂ ಓದಿ: ಬೆಳೆ ವಿಮೆ ತಿರಸ್ಕೃತ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಮಾರ್ಚ್ 4 ಕೊನೆ ದಿನ

  • ನಗರಸಭೆ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣ, ನಿರ್ವಹಣೆ, ಘನತ್ಯಾಜ್ಯ ವಿಲೇವಾರಿ, ಕಸ ವಿಂಗಡಣೆ, ಯಂತ್ರಗಳ ಅಳವಡಿಕೆ, ಸ್ಮಶಾನಗಳ ಅಭಿವೃದ್ಧಿ, ಮುಕ್ತಿ ವಾಹನ ಖರೀದಿ, ಆಧುನಿಕ ವಧಾಗಾರ ಸೇರಿದಂತೆ ನೈರ್ಮಲೀಕರಣಕ್ಕಾಗಿ ಒಟ್ಟು 20 ಕೋಟಿ ರೂ.ಗಳನ್ನು ತೆಗೆದಿಡಲಾಗಿದೆ.
  • ಹಾಲಿ ಇರುವ ವಿದ್ಯುತ್ ದೀಪಗಳ ಬದಲು ಎಲ್‍ಇಡಿ ದೀಪ ಅಳವಡಿಕೆ, ವಾರ್ಡ್‍ಗಳಲ್ಲಿ ಹೊಸದಾಗಿ ವಿದ್ಯುತ್ ಕಂಬ ಅಳವಡಿಸಲು 4 ಕೋಟಿ ನಿಗಧಿ ಮಾಡಲಾಗಿದೆ.
  • 2025-26ನೇ ಸಾಲಿನ 15ನೇ ಹಣಕಾಸು ಯೋಜನೆ, ಎಸ್‍ಎಫ್‍ಸಿ ಅನುದಾನ ಸೇರಿದಂತೆ ಇತರೆ ಮೂಲಗಳಿಂದ ನಗರದಲ್ಲಿನ ಹಾಳಾಗಿರುವ ರಸ್ತೆಗಳ ಅಭಿವೃದ್ಧಿ, ಚರಂಡಿ ನಿರ್ಮಾಣ, ಪಾದಾಚಾರಿ ರಸ್ತೆ ನಿರ್ಮಾಣಕಕೆ 10 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

ಇದನ್ನೂ ಓದಿ: 34 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳ ಬಂಧನ | ಸೈಬರ್ ಪೊಲೀಸ್ ಕಾರ್ಯಚರಣೆ

  • ನಗರದಲ್ಲಿನ ಟ್ರಾಫಿಕ್ ನಿಯಂತ್ರಣ, ಆಟೋ ನಿಲ್ದಾಣ, ಪಾರ್ಕಿಂಗ್ ಸ್ಥಳಗಳ ಅಭಿವೃದ್ಧಿಗೆ 50 ಲಕ್ಷ ರೂ,
  • ನಗರದ ವಾರ್ಡ್‍ಗಳಿಗೆ ಆಧುನಿಕ ನಾಮಫಲಕ ಅಳವಡಿಕೆಗೆ 2 ಕೋಟಿ ರೂ,
  • ಮುಖ್ಯ ವೃತ್ತಗಳ ಅಭಿವೃದ್ಧಿಗೆ 1 ಕೋಟಿ ರೂ. ಮೀಸಲಿಡಲಾಗಿದೆ.
  • ನಗರದಲ್ಲಿ ಹಸಿರೀಕರಣ, ವಿವಿಧ ಬಡಾವಣೆಗಳ ಉದ್ಯಾನವನ ಅಭಿವೃದ್ಧಿಗೆ 3 ಕೋಟಿ ಮೀಸಲಿಡಲಾಗಿದೆ.
  • ಪರಿಶಿಷ್ಟ ವರ್ಗದವರ ಕಲ್ಯಾಣ ಅಭಿವೃದ್ಧಿಗಾಗಿ 80 ಲಕ್ಷ ರೂ,
  • ಇತರೆ ಬಡ ವರ್ಗದವರ ಅಭಿವೃದ್ಧಿಗೆ 25 ಲಕ್ಷ ರೂ,
  • ವಿಕಲಚೇತನರ ಕಲ್ಯಾಣಕ್ಕೆ 15 ಲಕ್ಷ ರೂ,
  • ಕ್ರೀಡಾ ಚಟುವಟಿಕೆಗಳ ಪ್ರೋತ್ಸಾಹಕ್ಕೆ 2 ಲಕ್ಷ, ನಲ್ಮ್ ಯೋಜನೆಯಡಿ ತರಬೇತಿ, ಸಹಾಯಧನ ಪಾವತಿಗೆ 50 ಲಕ್ಷಗಳನ್ನು ಸರ್ಕಾರದ ವಿವಿಧ ಅನುದಾನಗಳಲ್ಲಿ ಒದಗಿಸಲಾಗಿದೆ.

ಇದನ್ನೂ ಓದಿ: ಓವರ್ ಲೋಡಿಂಗ್ | 1 ಗಂಟೆ ವಿದ್ಯುತ್ ಕಡಿತ

  • ಸ್ವಯಂ ಉದ್ಯೋಗಕ್ಕೆ ಬ್ಯಾಂಕ್ ಸಾಲ ಪಡೆದಿರುವ ಫಲಾನುಭವಿಗಳಿಗೆ ಸಹಾಯಧನ ನೀಡಲು 10 ಲಕ್ಷ ರೂ,
  • ವೃತ್ತಿಪರ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಖರೀದಿಗೆ 10 ಲಕ್ಷ,
  • ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಸಹಾಯಧನ, ಆರೋಗ್ಯ ತಪಾಸಣೆಗೆ 10 ಲಕ್ಷ ರೂ ಮೀಸಲಿಡಲಾಗಿದೆ.

ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸರುಲ್ಲಾ, ಪೌರಾಯುಕ್ತೆ ರೇಣುಕಾ ಸೇರಿದಂತೆ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Budget PresentationChairperson SumitaChitradurga City CouncilChitradurga LatestChitradurga newsCity Council BudgetfeaturedKannada Newsಅಧ್ಯಕ್ಷೆ ಸುಮಿತಾಕನ್ನಡ ಸುದ್ದಿಚಿತ್ರದುರ್ಗ ನಗರಸಭೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ನಗರಸಭೆ ಬಜೆಟ್ಬಜೆಟ್ ಮಂಡನೆ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article ಮುರುಘಾ ಮಠದಲ್ಲಿ ಹರ್ಡೇಕರ್ ಮಂಜಪ್ಪ ಜಯಂತಿ ಆಚರಣೆ 
Leave a Comment

Leave a Reply Cancel reply

Your email address will not be published. Required fields are marked *

ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up