
CHITRADURGA NEWS | 29 APRIL 2024
ಚಿತ್ರದುರ್ಗ: ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಸೋಮವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಶರಣಾದರು.
ಪೋಕ್ಸೋ ಪ್ರಕರಣದಡಿ ಕಳೆದ ವರ್ಷ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಆನಂತರ ಹೈಕೋರ್ಟಿನಿಂದ ಜಾಮೀನು ಪಡೆದು ಬಿಡುಗಡೆಯಾಗಿ ದಾವಣಗೆರೆಯಲ್ಲಿದ್ದರು.

ಸದರಿ ಜಾಮೀನು ಪ್ರಶ್ನಿಸಿ ಸಂತ್ರಸ್ಥ ಬಾಲಕಿ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಶ್ರೀಗಳ ವಿರುದ್ಧ ಸಲ್ಲಿಕೆ ಆಗಿದ್ದ ಅರ್ಜಿಯನ್ನು ಏಪ್ರಿಲ್ 22 ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಒಂದು ವಾರದೊಳಗೆ ಚಿತ್ರದುರ್ಗದ ವಿಚಾರಣಾ ನ್ಯಾಯಾಲಯದ ಎದುರು ಹಾಜರಾಗಲು ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಏ.29 ಸೋಮವಾರ ಮಧ್ಯಾಹ್ನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರಾದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
