CHITRADURGA NEWS | 12 NOVEMBER 2024
ಚಿತ್ರದುರ್ಗ: ಮಹಾತ್ಮಾಗಾಂಧಿ ನರೇಗಾ(Narega) ಯೋಜನೆಯಡಿ ಹಿರಿಯೂರು ತಾಲ್ಲೂಕು ಧರ್ಮಪುರ ಹೋಬಳಿಯ ಧರ್ಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಾಂತ್ರಿಕ ಸಹಾಯಕ(Technical Assistant) ವಿಜಯೇಂದ್ರ ಅವರನ್ನು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಅವರು ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ನ.13ರಂದು ತಾ.ಪಂ ತ್ರೈಮಾಸಿಕ ಕೆಡಿಪಿ ಸಭೆ

ತಾಂತ್ರಿಕ ಸಹಾಯಕ ವಿಜಯೇಂದ್ರ ಅವರು, ನರೇಗಾ ಯೋಜನೆಯ ಕಾಮಗಾರಿಗಳ ಸಾಮಗ್ರಿ ಬಿಲ್ಲುಗಳ ಎಂಐಎಸ್ ಮಾಡಿ ಎಫ್ಟಿಒಗಳನ್ನು ಸೃಜಿಸಿದ್ದು, ಈ 33 ಕಾಮಗಾರಿಗಳ ಎಂ.ಬಿಯನ್ನು ದಾಖಲಿಸದೆ ಕರ್ತವ್ಯ ಲೋಪವೆಸಗಿದ್ದಾರೆ ಎಂದು ಹಿರಿಯೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ವರದಿ ನೀಡಿರುತ್ತಾರೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮೊಬೈಲ್ ರೆಕಾರ್ಡ್ ಕ್ಲಿಪ್ನಲ್ಲಿ ಸಾರ್ವಜನಿಕರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೂ.3 ಲಕ್ಷದ ಕಾಮಗಾರಿ ಅನುಷ್ಠಾನಗೊಳಿಸುವಲ್ಲಿ ಶೇ.4 ನಂತೆ ರೂ.12,000/-ಗಳಿಗೆ ಹಣದ ಬೇಡಿಕೆ ಇಟ್ಟಿರುತ್ತಾರೆ.
ಹೀಗೆ ಹಣದ ಬೇಡಿಕೆಯನ್ನು ಇಟ್ಟು ನರೇಗಾ ಯೋಜನೆಯ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುತ್ತಾರೆ.
ಕ್ಲಿಕ್ ಮಾಡಿ ಓದಿ: ZP: ಕರ್ತವ್ಯ ನಿರ್ಲಕ್ಷ್ಯ ಜವನಗೊಂಡನಹಳ್ಳಿ ಪಿಡಿಓ ಅಮಾನತು
ಆದ್ದರಿಂದ ಇವರ ಸೇವೆಯು ಇಲಾಖೆಗೆ ಅವಶ್ಯಕತೆ ಇಲ್ಲದೇ ಇರುವುದರಿಂದ ವಿಜಯೇಂದ್ರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
