CHITRADURGA NEWS | 28 MAY 2026
ಚಿತ್ರದುರ್ಗ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವತಿಯಿಂದ 2026-27ನೇ ಸಾಲಿನ ‘ವಿಕಲಚೇತನರ ರಾಷ್ಟ್ರ ಪ್ರಶಸ್ತಿ’ಗಾಗಿ ಅರ್ಹ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 20 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್.ವೇಣು ಜನ್ಮ ದಿನಾಚರಣೆ
ಪ್ರತಿ ವರ್ಷ ಡಿಸೆಂಬರ್ 3 ರಂದು ಆಚರಿಸಲಾಗುವ ‘ವಿಶ್ವ ವಿಕಲಚೇತನರ ದಿನಾಚರಣೆ’ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದ್ದು, ವಿಕಲಚೇತನರ ಸಬಲೀಕರಣ, ಪುನರ್ವಸತಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ತಡೆರಹಿತ ವಾತಾವರಣ ನಿರ್ಮಾಣ, ಸಂಶೋಧನೆ, ನಾವೀನ್ಯತೆ, ಕ್ರೀಡೆ, ಕಲೆ ಮತ್ತು ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಅರ್ಹ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಜಾಲತಾಣ www.depwd.gov.in ಮತ್ತು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in ಮೂಲಕ 2026ರ ಜುಲೈ 20 ರೊಳಗಾಗಿ ಇಂಗ್ಲಿಷ್ ಭಾಷೆಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅದಕ್ಕೆ ಸಂಬಂಧಿಸಿದ ಎಲ್ಲಾ ಪೂರಕ ದಾಖಲಾತಿಗಳ ಎರಡು ಭೌತಿಕ ಪ್ರತಿಗಳನ್ನು ‘ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲಭವನ ಆವರಣ, ಒನಕೆ ಓಬವ್ವ ಸ್ಟೇಡಿಯಂ ರಸ್ತೆ, ಚಿತ್ರದುರ್ಗ’ ಇಲ್ಲಿಗೆ ತಲುಪಿಸಬೇಕು.
ಇದನ್ನೂ ಓದಿ: ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235284 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
