By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರಾಷ್ಟ್ರೀಯ ಹೆದ್ದಾರಿ ಯೋಜನೆ | ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ | ಸಂಸದ ಗೋವಿಂದ ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರಾಷ್ಟ್ರೀಯ ಹೆದ್ದಾರಿ ಯೋಜನೆ | ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ | ಸಂಸದ ಗೋವಿಂದ ಕಾರಜೋಳ

ಮುಖ್ಯ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಯೋಜನೆ | ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ | ಸಂಸದ ಗೋವಿಂದ ಕಾರಜೋಳ

News Desk Chitradurga News
Last updated: 3 April 2025 17:22
News Desk Chitradurga News
3 months ago
Share
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 03 APRIL 2025

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ಮತ್ತು ನಿಧಾನಗತಿಯಲ್ಲಿ ಸಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಸಮಗ್ರ ಮಾಹಿತಿ ಕುರಿತು ಲೋಕಸಭೆಯಲ್ಲಿ ಸಂಸದ ಗೋವಿಂದ ಎಂ.ಕಾರಜೋಳರವರು ಹೆದ್ದಾರಿ ಸಚಿವರಿಗೆ ಪ್ರಶ್ನೆ ಕೇಳಿದ್ದರು,

Also Read: ಚಿತ್ರದುರ್ಗಕ್ಕೆ ವರ್ಷದ‌ ಮೊದಲ ಮಳೆ | ಇಳೆ ತಂಪಾಗುವಂತೆ ಸುರಿದ ಮಳೆ

ಈ ವಿಚಾರವಾಗಿ ಲೋಕಸಭೆಯಲ್ಲಿ ಉತ್ತರ ನೀಡಿರುವ ಹೆದ್ದಾರಿ ಸಚಿವರು ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 7 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಉತ್ತರಿಸಿದ್ದಾರೆ.

ಅವುಗಳಲ್ಲಿ ರೂ.1167.52 ಕೋಟಿ ಮೊತ್ತದ ಚಳ್ಳಕೆರೆ-ಹಿರಿಯೂರು ಮಧ್ಯದ ರಾಷ್ಟ್ರೀಯ ಹೆದ್ದಾರಿಯನ್ನು ನಾಲ್ಕು ಪಥಧ ಹೆದ್ದಾರಿಯನ್ನಾಗಿ ಮಾಡುವ ಕೆಲಸ ಶೇ.95 ರಷ್ಟು ಪೂರ್ಣಗೊಂಡಿದೆ.

ರಾಷ್ಟ್ರೀಯ ಹೆದ್ದಾರಿ 173 ನ್ನು ಹೊಸದುರ್ಗ-ಹೊಳಲ್ಕೆರೆ ಭಾಗದಲ್ಲಿ ದ್ವಿಪಥ ಹೆದ್ದಾರಿಯನ್ನಾಗಿ ಮಾಡುವ ರೂ. 109 ಕೋಟಿ ಮೊತ್ತದ ಕೆಲಸ ಶೇಕಡ 92 ರಷ್ಟು ಪೂರ್ಣಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 150-ಎ ಅನ್ನು ಹಿರಿಯೂರು-ಹುಳಿಯಾರು ಭಾಗದಲ್ಲಿ ದ್ವಿಪಥ ಹೆದ್ದಾರಿಯನ್ನಾಗಿ ಮಾಡುವ ರೂ.107 ಕೋಟಿ ಮೊತ್ತದ ಕೆಲಸ ಶೇ.97 ರಷ್ಟು ಪೂರ್ಣಗೊಂಡಿದೆ.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 

ರಾಷ್ಟ್ರೀಯ ಹೆದ್ದಾರಿ-173 ರನ್ನು ಕಡೂರು-ಹೊಸದುರ್ಗ ಭಾಗದಲ್ಲಿ ದ್ವಿಪಥ ಹೆದ್ದಾರಿಯನ್ನಾಗಿ ಮಾಡುವ ರೂ.184 ಕೋಟಿ ಮೊತ್ತದ ಕೆಲಸ ಶೇಕಡ 13 ರಷ್ಟು ಪೂರ್ಣಗೊಂಡು ಪ್ರಗತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಚಿತ್ರದುರ್ಗದಿಂದ ಶಿವಮೊಗ್ಗ ನಡುವೆ ದ್ವಿಪಥ ಹೆದ್ದಾರಿಯನ್ನಾಗಿ ಮಾಡಲು ಬಾಕಿ ಉಳಿದ ರೂ.516 ಕೋಟಿ ಮೊತ್ತದ ಕೆಲಸದಲ್ಲಿ ಶೇಕಡ 75 ರಷ್ಟು ಪೂರ್ಣಗೊಂಡಿದೆ.

ರಾಷ್ಟ್ರೀಯ ಹೆದ್ದಾರಿ -69 ನ್ನು ಸಿರಾ ಪಟ್ಟಣದ ಹತ್ತಿರ ಬೈಪಾಸ್ ರಸ್ತೆ ನಿರ್ಮಾಣ ಮಾಡಲು ರೂ.584 ಕೋಟಿ ಅನುದಾನ ನೀಡಲಾಗಿತ್ತು ಇದು ಟೆಂಡರ್ ಹಂತದಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಉಳಿದಂತೆ ನಿಧಾನಗತಿಯಲ್ಲಿರುವ ಯೋಜನೆಗಳನ್ನು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಲು ಮತ್ತು ಯೋಜನೆಗೆ ವೇಗ ನೀಡಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಳಿದ ಸಂಸದರ ಪ್ರಶ್ನೆಗೆ ಉತ್ತರಿಸಿರುವ ಸಚಿವರು,

Also Read: ಜಿಲ್ಲಾ ಆಸ್ಪತ್ರೆಗೆ ಲೋಕಾಯುಕ್ತರ ದಾಳಿ | ನಾಲ್ಕು ತಂಡಗಳಲ್ಲಿ ಇಡೀ ಆಸ್ಪತ್ರೆ ತಲಾಶ್ | ದಾಖಲಾತಿ ಪರಿಶೀಲನೆ

ಈ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಹಾಗೂ ಭೂಸ್ವಾಧೀನ ಮತ್ತು ತೆರವುಗಳನ್ನು ಸುವ್ಯವಸ್ಥಿತಗೊಳಿಸುವುದು ಸೇರಿದಂತೆ ಎಲ್ಲಾ ಮಧ್ಯಸ್ಥಗಾರರೊಂದಿಗೆ ನಿಕಟ ಸಮನ್ವಯತೆವ, ವಿವಾದ ಪರಿಹಾರ ಕಾರ್ಯವಿಧಾನವನ್ನು ನವೀಕರಿಸುವುದು, ಯೋಜನಾ ಅಭಿವರ್ಧಕರು, ರಾಜ್ಯ ಸರ್ಕಾರಗಳು ಮತ್ತು ವಿವಿಧ ಹಂತಗಳಲ್ಲಿ ಗುತ್ತಿಗೆದಾರರೊಂದಿಗೆ ಆಗಾಗ್ಗೆ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಸಚಿವರು ಉತ್ತರಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesKannada Latest NewsKannada NewsLok SabhaMinister for HighwaysMP Govinda KarajolNational Highways Projectಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ರಾಷ್ಟ್ರೀಯ ಹೆದ್ದಾರಿ ಯೋಜನೆಲೋಕಸಭೆಸಂಸದ ಗೋವಿಂದ ಕಾರಜೋಳಹೆದ್ದಾರಿ ಸಚಿವರು
Share This Article
Facebook Email Print
Previous Article ಚಿತ್ರದುರ್ಗಕ್ಕೆ ವರ್ಷದ‌ ಮೊದಲ ಮಳೆ | ಇಳೆ ತಂಪಾಗುವಂತೆ ಸುರಿದ ಮಳೆ
Next Article ವಿದ್ಯುತ್ ಶಾಕ್ | ತಾಯಿ, ಮಗು ಸಾವು
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ಜೂನ್‌ 30 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಕಡಲೆಕಾಳು, ಶೇಂಗಾ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up