CHITRADURGA NEWS | 22 OCTOBER 2024
ಚಿತ್ರದುರ್ಗ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ನಾಯಕನಹಟ್ಟಿ ಪೊಲೀಸ್ ಠಾಣೆಗೆ ಮತ್ತೊಮ್ಮೆ ನೀರು ನುಗ್ಗಿದೆ.
ಮೂರು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ನೀರು ತುಂಬಿದ್ದ ಠಾಣೆಯನ್ನು ಪೊಲೀಸರು ಸ್ವಚ್ಛಗೊಳಿಸಿ ದಿನ ಕಳೆಯುವುದರ ಒಳಗಾಗಿ ಮತ್ತೆ ನೀರು ತುಂಬಿದೆ.

ಇದನ್ನೂ ಓದಿ: ಪ್ರಾಣ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುವ ಪೊಲೀಸರ ತ್ಯಾಗ ಸ್ಮರಣೀಯ | ಡಿಸಿ ವೆಂಕಟೇಶ್
ಬರೋಬ್ಬರಿ ಮೊಳಕಾಲುದ್ದದವರೆಗೆ ನೀರು ತುಂಬಿದ್ದರಿಂದ ಪೊಲೀಸರು ಕಡತಗಳನ್ನು ನೀರಿನಿಂದ ರಕ್ಷಿಸಲು ರಾತ್ರಿ ಹರಸಾಹಸ ಮಾಡುವಂತಾಯಿತು.
ಕಬೋರ್ಡ್, ಬೀರುಗಳಲ್ಲಿದ್ದ ಕಡತದ ಗಂಟುಗಳನ್ನು ಎತ್ತಿ ಟೇಬಲ್ಗಳ ಮೇಲಿಡುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಜಿಲ್ಲೆಯಲ್ಲಿ 48 ಮನೆ ಹಾನಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆ
ಈಗಾಗಲೇ ನಾಯಕನಹಟ್ಟಿ ಸಣ್ಣ ಕೆರೆ ತುಂಬಿ ಕೋಡಿ ಬಿದ್ದಿದ್ದು, ಅಪಾರ ಪ್ರಮಾಣದ ಮಳೆಯಾಗುತ್ತಿರುವುದು ಒಂದು ಲೆಕ್ಕದಲ್ಲಿ ಆತಂಕ ಮೂಡಿಸುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
