By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಹುಂಡಿ ಎಣಿಕೆ | ಪರೀಕ್ಷೆ ಪಾಸು ಮಾಡಿಸು, ಕೊಟ್ಟ ಸಾಲು ವಾಪಾಸು ಕೊಡಿಸು | ಚೀಟಿ ಬರೆದು ಹಾಕಿದ ಭಕ್ತರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಹುಂಡಿ ಎಣಿಕೆ | ಪರೀಕ್ಷೆ ಪಾಸು ಮಾಡಿಸು, ಕೊಟ್ಟ ಸಾಲು ವಾಪಾಸು ಕೊಡಿಸು | ಚೀಟಿ ಬರೆದು ಹಾಕಿದ ಭಕ್ತರು

ಮುಖ್ಯ ಸುದ್ದಿ

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಹುಂಡಿ ಎಣಿಕೆ | ಪರೀಕ್ಷೆ ಪಾಸು ಮಾಡಿಸು, ಕೊಟ್ಟ ಸಾಲು ವಾಪಾಸು ಕೊಡಿಸು | ಚೀಟಿ ಬರೆದು ಹಾಕಿದ ಭಕ್ತರು

chitradurganews.com
Last updated: 24 April 2025 10:03
chitradurganews.com
2 months ago
Share
Nayakanahatty sri Thipperudraswamy
ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 APRIL 2025

ಚಿತ್ರದುರ್ಗ: ಮಧ್ಯ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿರುವ ಜಿಲ್ಲೆಯ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರೆ ಬಳಿಕ ಬುಧವಾರ ಹೊರಮಠ ಹಾಗೂ ಒಳಮಠದ ಹುಂಡಿ ಎಣಿಕೆ ಕಾರ್ಯ ನಡೆಯಿತು.

ಜಾತ್ರೆ ನಂತರ ನಡೆದ ಎಣಿಕೆ ಕಾರ್ಯದಲ್ಲಿ ಬರೋಬ್ಬರಿ 66,29,155 ರೂ. ಸಂಗ್ರಹವಾಗಿತ್ತು.

ಇದನ್ನೂ ಓದಿ: 61 ಸಾವಿರದತ್ತ ಅಡಿಕೆ ರೇಟ್‌

ಇದರಲ್ಲಿ ಒಳಮಠದ ಹುಂಡಿಯಲ್ಲಿ 47,29,060 ರೂ. ಸಂಗ್ರಹವಾಗಿದ್ದರೆ, ಹೊರಮಠದ ಹುಂಡಿಗಳಲ್ಲಿ 35,05,500 ರೂ. ಸಂಗ್ರಹವಾಗಿತ್ತು.

ಈ ಬಾರಿ ಜಾತ್ರೆಯಲ್ಲಿ 100 ರೂ. ಟಿಕೆಟ್‌ ನಿಗಧಿ ಮಾಡಿ ನೇರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ನೇರ ದರ್ಶನದಿಂದ 6,75,000 ರೂ. ಸಂಗ್ರಹವಾಗಿದೆ.

ಇದನ್ನೂ ಓದಿ: ಮೆಡಿಕಲ್ ಕಾಲೇಜು ನೇಮಕಾತಿ ಅಕ್ರಮ | ಸಚಿವರಿಗೆ ಪತ್ರ | ಕೆ.ಎಸ್.ನವೀನ್

ಈ ಬಾರಿ ಇ-ಹುಂಡಿ ಸ್ಥಾಪಿಸಿ ಅಲ್ಲಲ್ಲಿ ಸ್ಕ್ಯಾನರ್‌ ಅಂಟಿಸಿದ್ದ ಪರಿಣಾಮ ಸಾಕಷ್ಟು ಭಕ್ತರು ನೇರವಾಗಿ ಮೊಬೈಲ್‌ ಮೂಲಕ ಇ-ಹುಂಡಿಗೆ ಹಣ ಹಾಕಿದ್ದಾರೆ. ಇದರ ಮೊತ್ತ 4,13,435 ರೂ.ಗಳಾಗಿದೆ.

ಹುಂಡಿ ಎಣಿಕೆ ವೇಳೆ 2.26 ಲಕ್ಷ ರೂ.ಗಳಷ್ಟು ಚಿಲ್ಲರೆ ಹಣ ಸಿಕ್ಕಿದ್ದು, ವ್ಯಾಪಾರಿಗಳು ಬ್ಯಾಂಕುಗಳಿಂದ ಪಡೆದುಕೊಳ್ಳುತ್ತಿದ್ದರು. ಕೆನರಾ ಬ್ಯಾಂಕಿನಲ್ಲೂ ಈ ಚಿಲ್ಲರೆ ಸಿಗಲಿದೆ.

ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ
ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ

ಇದನ್ನೂ ಓದಿ: ಸಿರಿಗೆರೆಯಲ್ಲಿ ಏ.25 ರಂದು ಕನ್ನಡ ಕರಡು ತಿದ್ದುವ ಕಾರ್ಯಾಗಾರ

ಇದರೊಟ್ಟಿಗೆ ಹುಂಡಿಗಳಲ್ಲಿ ತೊಟ್ಟಿಲು, ಮೀಸೆ, ಕಣ್ಣು, ಕರಡಿಗೆ, ಬೆಳ್ಳಿ ನಾಣ್ಯಗಳು, ಸೊಂಟದ ಚೈನ್‌ ಸೇರಿದಂತೆ ನಾನಾ ರೀತಿಯ ವಸ್ತುಗಳನ್ನು ಹಾಕಿದ್ದರು.

ವರ್ಷದಲ್ಲಿ ಮೂರು ಬಾರಿ ನಾಯಕನಹಟ್ಟಿಯಲ್ಲಿ ಹುಂಡಿ ಎಣಿಕೆ ಮಾಡುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಜಾತ್ರೆಗೆ ಮೊದಲು, ಜಾತ್ರೆಯ ನಂತರ ಹಾಗೂ ಶ್ರಾವಣ ಮಾಸ ಮುಗಿದ ಮೇಲೆ ಹುಂಡಿ ಎಣಿಕೆ ಮಾಡುತ್ತಿದ್ದು, ಇದರಿಂದ ಕೋಟ್ಯಾಂತರ ರೂ. ಹಣ ಸಂಗ್ರಹವಾಗುತ್ತಿದೆ.

ಕೊಟ್ಟ ಸಾಲ ವಾಪಾಸು ಕೊಡಿಸಪ್ಪ:

ಚಿತ್ರದುರ್ಗದ ವ್ಯಕ್ತಿಯೊಬ್ಬನಿಗೆ ೪೦ ಸಾವಿರ ಸಾಲ ಕೊಟ್ಟಿದ್ದೇನೆ. ವಾಪಾಸು ಕೊಡುತ್ತಿಲ್ಲ. ಅದನ್ನು ವಾಪಾಸು ಕೊಡುವಂತ ಬುದ್ದಿ ಕೊಡಪ್ಪ ಎಂದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಗೆ ಚೀಟಿ ಬರೆದು ಹಾಕಿದ್ದು, ಅದು ಹುಂಡಿ ಎಣಿಕೆಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ರಾಹುಲ್‌ ಎನ್ನುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ತನ್ನ ಹಾಲ್‌ಟಿಕೇಟ್‌ ಸಂಖ್ಯೆ ಬರೆದು, ನನ್ನನ್ನು ಪರೀಕ್ಷೆಯಲ್ಲಿ ಪಾಸು ಮಾಡು ಎಂದು ದೇವರಲ್ಲಿ ಬೇಡಿಕೊಂಡಿದ್ದಾನೆ.

ಮತ್ತೋರ್ವ ಭಕ್ತ, ದಾವಣಗೆರೆಯಲ್ಲಿ ಎರಡು ಸೈಟು, 4 ಎಕರೆ ತೋಟ ಕೊಡಿಸು, ಮಗಳ ಮದುವೆ ಮಾಡಿಸು ಎಂದು ಹಟ್ಟಿ ತಿಪ್ಪೇಶನ ಮೇಲೆ ಭಾರ ಹಾಕಿ ಚೀಟಿ ಬರೆದಿದ್ದು ಗಮನ ಸೆಳೆಯಿತು.

ಇದನ್ನೂ ಓದಿ: ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿ | ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ | ಇಲ್ಲಿದೆ ವಿವರ

ಮಹಿಳೆಯೊಬ್ಬರು ನನಗೆ ಮುತ್ತೈದೆಯಾಗಿ ಸಾಯುವ ಭಾಗ್ಯ ಕೊಡಪ್ಪ ಎಂದರೆ, ಮತ್ತೋರ್ವ ಭಕ್ತ ಮಕ್ಕಳಿಗೆ ಒಳ್ಳೆಯ ಬುದ್ದಿ, ಶಿಕ್ಷಣ ಕೊಡುವಂತೆ ಪ್ರಾರ್ಥಿಸಿ ಚೀಟಿ ಬರೆದು ಹುಂಡಿಗೆ ಹಾಕಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga LatestChitradurga newsGive alms as much as you canHundi CountingJatreKannada NewsNayakanahattiNayakanahatti Tipperudraswamyಕನ್ನಡ ಸುದ್ದಿಚಿತ್ರದರುಗ ನ್ಯೂಸ್‌ಚಿತ್ರದುರ್ಗಚಿತ್ರದುರ್ಗ ಲೇಟೆಸ್ಟ್ಜಾತ್ರೆನಾಯಕನಹಟ್ಟಿನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಮಾಡಿದಷ್ಟು ನೀಡು ಭಿಕ್ಷೆಹುಂಡಿ ಎಣಿಕೆ
Share This Article
Facebook Email Print
Previous Article ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಮೇ.2 ರಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆ
Next Article ಚಿತ್ರದುರ್ಗ RTO ಕಚೇರಿಯಲ್ಲಿ ಸಾರಿಗೆ ಅದಾಲತ್ | ಅಹವಾಲುಗಳು ಇದ್ದರೆ ಸಲ್ಲಿಸಿ..
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up