
CHITRADURGA NEWS | 25 MARCH 2024
ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಮಾರ್ಚ್ 26 ರಂದು ಮಂಗಳವಾರ ನಡೆಯಲಿದೆ. ಜಾತ್ರೆಯ ಅಂತಿಮ ಹಂತದ ಸಿದ್ಧತೆಗಳ ಕುರಿತು ಉಪವಿಭಾಗಧಿಕಾರಿ ಎಂ.ಕಾರ್ತಿಕ್ ಸೋಮವಾರ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ

ಐತಿಹಾಸಿಕ ನಾಯಕನಹಟ್ಟಿ ಜಾತ್ರೆಗೆ ನಾಡಿನ ಹಲವು ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತಾಧಿಕಾರಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ, ಕುಡಿಯುವ ನೀರಿಗೆ ವಿಶೇಷವಾದ ವ್ಯವಸ್ಥೆ ರೂಪಿಸಲಾಗಿದೆ. ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠ ಮತ್ತು ಹೊರಮಠದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಎರಡೂ ದೇವಾಲಯದ ಆವರಣ ಸ್ವಚ್ಛಗೊಳಿಸಲಾಗಿದೆ.
ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ | 178 ಪ್ರಕರಣ ದಾಖಲು
ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡೂ ದೇವಾಲಯಗಳ ಆವರಣದಲ್ಲಿ ಬೃಹತ್ ಚಪ್ಪರದ ವ್ಯವಸ್ಥೆ ಮಾಡಲಾಗಿದೆ. ನೆರೆಯ ಆಂದ್ರ ಪ್ರದೇಶ, ತೆಲಂಗಾಣ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳು ಹಾಗೂ ರಾಜ್ಯದ ಮೂಲೆ ಮೂಲೆಯಿಂದ ಭಕ್ತಾಧಿಗಳು ಆಗಮಿಸುತ್ತಾರೆ.
ಇದನ್ನೂ ಓದಿ: ಬಿ.ವೈ.ರಾಘವೇಂದ್ರ ವಿರುದ್ಧ ಚಿತ್ರದುರ್ಗದಲ್ಲಿ ದೂರು ದಾಖಲು
ಈ ಹಿನ್ನಲೆಯಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆಯಲಾಗಿದೆ. ಈ ಎಲ್ಲಾ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಎಂ.ಕಾರ್ತಿಕ್ ಸೋಮವಾರ ಪರಿಶೀಲಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
