By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬ್ಯಾಂಕ್ ಗಳಲ್ಲಿ ಕನ್ನಡ ನಿರ್ಲಕ್ಷ್ಯ | ಕಡ್ಡಾಯ ಬಳಕೆಗೆ ಕರುನಾಡ ವಿಜಯಸೇನೆ ಒತ್ತಾಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬ್ಯಾಂಕ್ ಗಳಲ್ಲಿ ಕನ್ನಡ ನಿರ್ಲಕ್ಷ್ಯ | ಕಡ್ಡಾಯ ಬಳಕೆಗೆ ಕರುನಾಡ ವಿಜಯಸೇನೆ ಒತ್ತಾಯ

ಮುಖ್ಯ ಸುದ್ದಿ

ಬ್ಯಾಂಕ್ ಗಳಲ್ಲಿ ಕನ್ನಡ ನಿರ್ಲಕ್ಷ್ಯ | ಕಡ್ಡಾಯ ಬಳಕೆಗೆ ಕರುನಾಡ ವಿಜಯಸೇನೆ ಒತ್ತಾಯ

News Desk Chitradurga News
Last updated: 30 January 2025 19:00
News Desk Chitradurga News
5 months ago
Share
ಕರುನಾಡ ವಿಜಯಸೇನೆ ಪ್ರತಿಭಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 JANUARY 2025

ಚಿತ್ರದುರ್ಗ: ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮತ್ತು ಅಂಚೆ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಗ್ರಾಹಕರ ಹತ್ತಿರ ಹಿಂದಿ-ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುವುದರಿಂದ ಗ್ರಾಹಕರಿಗೆ ವ್ಯವಹಾರ ಮಾಡಲು ತೊಂದರೆಯಾಗಿದ್ದು, ಕೂಡಲೇ ಕಡ್ಡಾಯವಾಗಿ ಕನ್ನಡ ಬರೆಯಲು ಮತ್ತು ಮಾತನಾಡಲು ಬರುವ ಸಿಬ್ಬಂದಿಗಳನ್ನು ನೇಮಕ ಮಾಡಬೇಕು ಎಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಒತ್ತಾಯಿಸಿದರು.

Also Read: ಮೈಕ್ರೋ ಫೈನಾನ್ಸ್ ಗಳಿಗೆ ಐಜಿಪಿ ರವಿಕಾಂತೇಗೌಡ ಎಚ್ಚರಿಕೆ | ಸಾಲ ವಸೂಲಿಗೆ ಬಲವಂತ ಮಾಡಿದ್ರೆ ಕ್ರಮ

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕರ್ನಾಟಕದಾದ್ಯಂತ ಈಗಾಗಲೇ ಹಲವಾರು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಕನ್ನಡ ಭಾಷೆ ಬರದೇ ಇರುವ ಸಿಬ್ಬಂದಿಗಳನ್ನು ಅಂದರೆ ಹೊರ ರಾಜ್ಯದವರನ್ನು ನೇಮಕ ಮಾಡಿಕೊಂಡಿರುವುದು ಮತ್ತು ಕರ್ನಾಟಕದಲ್ಲಿರುವ ಬ್ಯಾಂಕುಗಳಲ್ಲಿ ಕೆಲಸ ಮಾಡುತ್ತಿರುವುದು ಕನ್ನಡಿಗರಿಗೆ ಮತ್ತು ಕನ್ನಡಭಾಷೆಗೆ ಅವಮಾನಿಸಿದಂತಾಗಿದೆ.

ಈಗಾಗಲೇ ಹಲವಾರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಮತ್ತು ಅಂಚೆ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕನ್ನಡ ಭಾಷೆ ಮಾತನಾಡಲು, ಬರೆಯಲು ಬರುವುದಿಲ್ಲ. ಗ್ರಾಹಕರಿಗೆ ಸಿಬ್ಬಂದಿಗಳು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುವುದರಿಂದ ಬಹಳಷ್ಟು ಗ್ರಾಹಕರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವ್ಯವಹಾರವೇ ಮಾಡಲು ತೊಂದರೆಯಾಗಿರುತ್ತದೆ.

 ಕೆಲವು ಗ್ರಾಹಕರು ಎಷ್ಟೋ ಮಂದಿ ಬ್ಯಾಂಕಿಗೆ ಬರದೇ ಖಾಸಗಿ ಬ್ಯಾಂಕುಗಳಲ್ಲಿ ವ್ಯವಹಾರ ಮಾಡುತ್ತಿರುತ್ತಾರೆ.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ರಾಜ್ಯ, ಕೇಂದ್ರ ಸರ್ಕಾರಗಳು ಹಾಗೂ ಜಿಲ್ಲಾಡಳಿತ ಕನ್ನಡಗರಿಗೆ ಮತ್ತು ಕರ್ನಾಟಕದಿಂದ ನೇಮಕ ಗೊಂಡಿರುವ ಕನ್ನಡ ಭಾಷೆ ಬರುವ ಸಿಬ್ಬಂದಿಗಳನ್ನು ನಮ್ಮ ಕರ್ನಾಟಕದಲ್ಲಿರುವ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಮತ್ತು ಅಂಚೆ ಕಛೇರಿಗಳಲ್ಲಿ ನೇಮಕ ಮಾಡಬೇಕು.

ಈಗ ಹಾಲಿ ಇರುವ ಬೇರೆ ಬೇರೆ ರಾಜ್ಯಗಳ ಸಿಬ್ಬಂದಿಗಳು ಹಾಲಿ ಕರ್ನಾಟಕದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಎರಡು ಬಾರಿ ಕನ್ನಡ ಪುಸ್ತಕಗಳನ್ನು ಸಂಘಟನೆಯಿಂದ ನೀಡಿ ಕನ್ನಡದಲ್ಲಿಯೇ ಮಾತನಾಡುವಂತೆ ಮತ್ತು ಕನ್ನಡವನ್ನು ಕಲಿಯುವಂತೆ ಸಿಹಿ ತಿನಿಸಿ ಮನವಿ ಮಾಡಿಕೊಳ್ಳಲಾಗಿದೆ.

ಬ್ಯಾಂಕ್ ಚಲನಗಳನ್ನು ಸಹ ಹಿಂದಿ ಇಂಗ್ಲೀಷ್‌ನಲ್ಲಿರುವುದನ್ನು ಕನ್ನಡದಲ್ಲಿ ಮುದ್ರಣ ಮಾಡಿಸುವಂತೆ ಕೇಳಿಕೊಂಡಿರುತ್ತೇವೆ. ಆದರೆ ಸಿಬ್ಬಂದಿಗಳು ಇದುವರೆಗೂ ಕನ್ನಡದಲ್ಲಿ ಗ್ರಾಹಕರಿಗೆ ಉತ್ತರಿಸದೇ, ವ್ಯವಹರಿಸದೇ ಇರುವುದರಿಂದ ಗ್ರಾಹಕರಿಗೆ ತೊಂದರೆಯಾಗಿರುತ್ತದೆ.

Also Read: ಕುಂಭಮೇಳದಲ್ಲಿ ಕೋಟೆನಾಡಿನ ಮಠಧೀಶರು | ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನ

ರಾಷ್ಟ್ರೀಕೃತ ಬ್ಯಾಂಕುಗಳು ನಾಮಫಲಕಗಳಾಗಲೀ, ಸಿಬ್ಬಂದಿಗಳು ಕನ್ನಡದಲ್ಲಿ ಮಾತನಾಡುವುದು, ವ್ಯವಹರಿಸುವುದು ಮಾಡುತ್ತಿಲ್ಲ. ರಾಜ್ಯ ಸರ್ಕಾರ ಕಳೆದ ವರ್ಷ ಎಲ್ಲಾ ಅಂಗಡಿ ಮುಂಗಟ್ಟುಗಳು, ಕಛೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕಗಳು 60% ರಷ್ಟು ಕನ್ನಡದಲ್ಲಿರಬೇಕೆಂದು ಆದೇಶಿಸಿರುತ್ತದೆ. ಆದರೂ ಸಹ ಇದುವರೆಗೂ ಕನ್ನಡವನ್ನು ಬಳಸದೇ ಇರುವುದು ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗೆ ಮಾಡಿದ ದ್ರೋಹವಾಗಿರುತ್ತದೆ ಎಂದು ಪ್ರತಿಭಟನೆಯಲ್ಲಿ ತಿಳಿಸಿದರು.

ಕೂಡಲೇ ರಾಜ್ಯದ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕನ್ನಡ ಭಾಷೆಯನ್ನು ಮಾತನಾಡಲು, ಬರೆಯಲು ಬರುವ ಸಿಬ್ಬಂದಿಗಳನ್ನು ಮಾತ್ರ ನೇಮಕ ಮಾಡುವಂತೆ ಮತ್ತು ಈಗ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಕನ್ನಡವನ್ನು ಕೂಡಲೇ ಕಲಿಯುವಂತೆ ಅಥವಾ ಕನ್ನಡ ಬರದೇ ಇರುವ ಸಿಬ್ಬಂದಿಗಳನ್ನು ನಮ್ಮ ರಾಜ್ಯ ಬಿಟ್ಟು ಬೇರೆ ಕಡೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಸಂಘಟನೆಯಿಂದ ರಾಷ್ಟ್ರೀಕೃತ ಬ್ಯಾಂಕುಗಳ ಮುಂದೆ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

Also Read: ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ 

ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ. ಶಿವುಕುಮಾರ್, ಪ್ರದಾನ ಕಾರ್ಯದರ್ಶಿ ಗೋಪಿನಾಥ್, ತಾಲೂಕು ಅಧ್ಯಕ್ಷ ಸಂತೋಷ್, ಜಿಲ್ಲಾ ಸಂಚಾಲಕ ನಾಗೇಶ್, ನಗರ ಅಧ್ಯಕ್ಷ ಅವಿನಾಶ್ ಸೇರಿದಂತೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BankChitradurgaChitradurga newsChitradurga UpdatesEnglishHindiKannadaKannada Latest NewsKannada NewsKarunada VijayasenaPost Officeಅಂಚೆ ಕಚೇರಿಇಂಗ್ಲಿಷ್ಕನ್ನಡಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕರುನಾಡ ವಿಜಯಸೇನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಟನೆಬ್ಯಾಂಕ್ಹಿಂದಿ
Share This Article
Facebook Email Print
Previous Article IGP RavikantheGowda ಮೈಕ್ರೋ ಫೈನಾನ್ಸ್ ಗಳಿಗೆ ಐಜಿಪಿ ರವಿಕಾಂತೇಗೌಡ ಎಚ್ಚರಿಕೆ | ಸಾಲ ವಸೂಲಿಗೆ ಬಲವಂತ ಮಾಡಿದ್ರೆ ಕ್ರಮ
Next Article ಜಿಪಂ‌‌ ಸಿಇಓ‌‌ ಸೋಮಶೇಖರ್ ಗ್ರಾಮ ಪಂಚಾಯತಿ ಭೇಟಿ | ಕಡತ ಪರಿಶೀಲನೆ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up