
CHITRADURGA NEWS | 21 DECEMBER 2025
ಚಿತ್ರದುರ್ಗ: ಹೆಣ್ಣು ಮಕ್ಕಳು ಸಹ ಕ್ರೀಡೆಗಳಲ್ಲಿ ಹೆಚ್ಚಿನ ಮಟ್ಟದ ಆಸಕ್ತಿ ತೋರಿಸಿ ತಮ್ಮಲ್ಲಿರುವ ಪ್ರತಿಭೆಯನ್ನ ಹೊರ ತರಲು ಪ್ರಯತ್ನಿಸಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮುಂದಿನ ಜೀವನವನ್ನ ನಿರೂಪಿಸಿಕೊಳ್ಳಲು ಅನುಕೂಲಕರವಾಗುವುದು ಎಂದು ಸರ್ಕಾರಿ ವಿಜ್ಞಾನ ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ.ಕೆ.ರಾಘವೇಂದ್ರ ಹೇಳಿದರು.
ಇದನ್ನೂ ಓದಿ: ಮೇಷ | ವಾರ್ಷಿಕ ರಾಶಿ ಭವಿಷ್ಯ- 2026

ನಗರದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಆಯೋಜಿಸಿದ್ದ ಮಹಿಳೆಯರ ನೆಟ್ ಬಾಲ್ ಕ್ರೀಡೆಯಲ್ಲಿ ರನ್ನರ್-ಅಪ್ ಟ್ರೋಫಿ ವಿಜೇತರಾದ ವಿದ್ಯಾರ್ಥಿನಿಯರನ್ನು ಅಭಿನಂದಿಸಿ ಮಾತನಾಡಿ,
ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಉತ್ತಮ ಉದ್ಯೋಗ, ಪ್ರಶಸ್ತಿಗಳು ಲಭಿಸಿ, ಸಮಾಜದಲ್ಲಿ ಅತ್ಯುತ್ತಮ ಗೌರವೂ ಸಹ ಲಭಿಸುತ್ತದೆ.
ದಾವಣಗೆರೆ ವಿಶ್ವವಿದ್ಯಾಲಯದ ನೆಟ್ ಬಾಲ್ ಪಂದ್ಯಾವಳಿ ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದು, ಸರ್ಕಾರಿ ವಿಜ್ಞಾನ ಕಾಲೇಜು ಮಹಿಳೆಯರ ವಿಭಾಗದಲ್ಲಿ ಸತತ ಎರಡನೇ ಬಾರಿಗೆ ವಿಶ್ವವಿದ್ಯಾಲಯದ ಮಟ್ಟದಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಕಾಲೇಜಿಗೆ ಮತ್ತು ಜಿಲ್ಲೆಗೆ ಹೆಸರು ತಂದು ಕೊಟ್ಟಿರುವಂತಹ ಕ್ರೀಡಾಪಟುಗಳನ್ನು ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರುಗಳು ಅಭಿನಂದಿಸುತ್ತಾರೆ ಎಂದರು.
ಇದನ್ನೂ ಓದಿ: ಖಾಸಗಿ ಬಸ್ಸುಗಳಲ್ಲಿ ಕನ್ನಡ ನಾಮಫಲಕ ಹಾಕಿ | ಬಸ್ ನಿಲ್ದಾಣದಲ್ಲಿ ಪ್ರತಿಭಟನೆ
ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದ ಪಲ್ಲವಿ, ಹರ್ಷಿತ ಎಂ.ವಿ. ರೇಣು ಆರ್, ಅಕ್ಷಯ, ಲಕ್ಷ್ಮಿ, ಅನು, ಸುಚಿತ್ರ, ಅನುಷಾ, ವಿದ್ಯಾ ಶ್ರೀ, ಅವರನ್ನು ಅಭಿನಂದಿಸಲಾಗಿತ್ತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
