
CHITRADURGA NEWS | 14 NOVEMBER 2024
ಚಿತ್ರದುರ್ಗ: ನಗರದ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಗ್ಯಾರಂಟಿ(Guarantee) ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಚಿತ್ರದುರ್ಗ ತಾಲ್ಲೂಕು ನೂತನ ಕಚೇರಿಯನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟಿಸಿದರು.
ಕ್ಲಿಕ್ ಮಾಡಿ ಓದಿ: ಸಿರಿಧಾನ್ಯಗಳಿಗೆ ಸೂಕ್ತ ವೇದಿಕೆಗೆ ಪ್ರಯತ್ನ | ಜಿ.ಪಂ ಸಿಇಓ ಸೋಮಶೇಖರ್ ಭರವಸೆ
ನಂತರ ಮಾತನಾಡಿದ ಶಾಸಕರು, ಬಡ ಜನರ ಏಳಿಗೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ಅರ್ಹ ಫಲಾನುಭವಿಗಳಿಗೆ ದೊರಕಬೇಕು. ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಈ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ದೊರಕುವಂತಾಗಬೇಕು ಎಂದರು.
ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಲಾಭ ತಲುಪಿಸಲು ಪ್ರಯತ್ನಿಸುವಂತೆ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿಯ ಪದಾಧಿಕಾರಿಗಳಿಗೆ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಸೂಚನೆ ನೀಡಿದರು.
ಸರ್ಕಾರ ಈ ಐದು ಯೋಜನೆಯಿಂದ ಯಾವ ಅರ್ಹ ಫಲಾನುಭವಿಗಳು ಸಹಾ ಹೊರಗೆ ಉಳಿಯದಂತೆ ನೋಡಿಕೊಳ್ಳಬೇಕಿದೆ. ಸರ್ಕಾರ ಜನತೆ ಆರ್ಥಿಕವಾಗಿ ಸಬಲರಾಗಲಿ ಎಂದು ಈ ರೀತಿಯ ಯೋಜನೆಗಳನ್ನು ಜಾರಿ ಮಾಡಿದೆ.
ಕ್ಲಿಕ್ ಮಾಡಿ ಓದಿ: ಅಡಿಕೆ ವ್ಯಾಪಾರಿ ಆತ್ಮಹತ್ಯೆ | ಡೆತ್ ನೋಟ್ ಪತ್ತೆ
ಗ್ಯಾರಂಟಿ ಯೋಜನೆಗಳ ಬಗ್ಗೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಆವಕಾಶ ವಂಚಿತರನ್ನು ಗುರುತಿಸಿ ಅವರಿಗೆ ಈ ಸೌಲಭ್ಯ ಸಿಗುವಂತೆ ಮಾಡಿ, ಸಮಿತಿಗೆ ನನ್ನಿಂದ ಎಲ್ಲಾ ರೀತಿಯ ಸಹಕಾರ ಸಿಗಲಿದೆ ಎಂದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಮಾತನಾಡಿ, ತಾಲ್ಲೂಕು ಮಟ್ಟದ ಪದಾಧಿಕಾರಿಗಳು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸಂಚಾರ ಮಾಡುವುದರ ಮೂಲಕ ಈ ಯೋಜನೆಯಿಂದ ಹೂರಗೆ ಉಳಿದವರನ್ನು ಗುರುತಿಸಿ ಅವರಿಗೆ ಈ ಯೋಜನೆ ಸಿಗುವಂತೆ ಮಾಡಬೇಕಿದೆ.
ಇದ್ದಲ್ಲದೆ ನಗರದಲ್ಲಿ ಎರಡು ವಾರ್ಡ ಗ್ರಾಮಾಂತರ ಪ್ರದೇಶಗಳಲ್ಲಿ ಮೂರು ಪಂಚಾಯಿತಿಗಳಲ್ಲಿ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸುವುದರ ಮೂಲಕ ಈ ಯೋಜನೆಯ ಫಲವನ್ನು ಪಡೆಯುತ್ತಿರುವವರಿಂದ ಅನಿಸಿಕೆ, ಹಾಗೂ ಯಾರಿಗೆ ಸಿಕ್ಕಿಲ್ಲ, ಯಾಕೆ ಸಿಕ್ಕಿಲ್ಲ ಎಂಬ ಮಾಹಿತಿಯನ್ನು ಪಡೆಯಬೇಕು ಇದ್ದಲ್ಲದೆ ಅಧಿಕಾರಿಗಳು ಹಾಗೂ ಫಲಾನುಭವಿಗಳ ಮಧ್ಯೆ ಸಂವಾದವನ್ನು ನಡೆಸುವಂತೆ ಕರೆ ನೀಡಿದರು.
ಕ್ಲಿಕ್ ಮಾಡಿ ಓದಿ: ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ
ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಚಿತ್ರದುರ್ಗ ತಾಲ್ಲೂಕು ಘಟಕದ ವತಿಯಿಂದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಎಂ.ಕೆ. ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಮುದಸಿರ್ ನವಾಜ್, ಕುಮಾರಸ್ವಾಮಿ, ರಮೇಶ್, ಆಸೋಕ್ ನಾಯ್ಡ್, ಸಾಧಿಕ್, ದಿನೇಶ್, ಮಂಜುನಾಥ್, ಹನೀಫ್, ಪ್ರಕಾಶ್ ನಾಯ್ಕ್, ವಿನಯಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
