CHITRADURGA NEWS | 25 JULY 2025
ಚಿತ್ರದುರ್ಗ: ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಎನ್.ದೊಡ್ಡಯ್ಯ ಅಧಿಕಾರ ವಹಿಸಿಕೊಂಡರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಶರಣ್ಕುಮಾರ್ ಆಯ್ಕೆ
ನಂತರ ಮಾತನಾಡಿದ ಅವರು, ನನ್ನ ಅಧಿಕಾರ ಅವಧಿಯಲ್ಲಿ ಎಲ್ಲಾ ಉಪನ್ಯಾಸಕರ ಸಹಕಾರ ಮತ್ತು ವಿಶ್ವಾಸ ಪಡೆದುಕೊಂಡು ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ, ಕಾಲೇಜಿನ ಫಲಿತಾಂಶ ಹೆಚ್ಚಿಸಿ ಕಾಲೇಜು, ಜಿಲ್ಲೆಗೆ ಕೀರ್ತಿ ತರುವುದಕ್ಕೆ ಶ್ರಮಿಸುತ್ತೇನೆ ಎಂದರು.
ಈ ವೇಳೆ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್.ಲಕ್ಷ್ಮಣ ನೂತನ ಪ್ರಾಚಾರ್ಯರನ್ನು ಸನ್ಮಾನಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಡಾ.ಬಿ.ಎಂ.ಗುರುನಾಥ್ ಉಪನ್ಯಾಸಕರುಗಳಾದ ಕೆ.ತಿಪ್ಪೇಸ್ವಾಮಿ, ಡಾ.ಮೋಹನ್ ಸಾಹಿತಿ ಕೆರೆಯಾಗಳಳ್ಳಿ ತಿಪ್ಪೇಸ್ವಾಮಿ, ಶಖೀಲ್ , ಎಚ್.ಆರ್ ಜಬಿವುಲ್ಲ, ವಿ.ಚನ್ನಬಸಪ್ಪ, ಶಶಿಧರ್, ರೇಣುಕಾ, ಇಂದಿರಾ, ವಿದ್ಯಾ, ಲೋಕೇಶ್, ರಘ, ಹೇಮಂತ್, ವೆಂಕಟೇಶ್ ರೆಡ್ಡಿ, ಕಾಮರಾಜು ಸೇರಿದಂತೆ ಇತರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
