By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಒಳಮೀಸಲಾತಿ ಸಿಗುವವರೆಗೆ ಜನ್ಮ ದಿನಾಚರಣೆ ಇಲ್ಲ | ಎಚ್.ಆಂಜನೇಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಒಳಮೀಸಲಾತಿ ಸಿಗುವವರೆಗೆ ಜನ್ಮ ದಿನಾಚರಣೆ ಇಲ್ಲ | ಎಚ್.ಆಂಜನೇಯ

ಮುಖ್ಯ ಸುದ್ದಿ

ಒಳಮೀಸಲಾತಿ ಸಿಗುವವರೆಗೆ ಜನ್ಮ ದಿನಾಚರಣೆ ಇಲ್ಲ | ಎಚ್.ಆಂಜನೇಯ

News Desk Chitradurga News
Last updated: 13 April 2025 18:25
News Desk Chitradurga News
2 months ago
Share
H. Anjaneya
ಎಚ್‌.ಆಂಜನೇಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 13 APRIL 2025

ಚಿತ್ರದುರ್ಗ: ಒಳಮೀಸಲಾತಿ 30 ವರ್ಷದ ಹೋರಾಟದ ಫಲ. ಆದರೆ, ಬಹಳಷ್ಟು ಗೊಂದಲ, ಕಾರಣದ ಕೈಗಳ ಕಾರಣಕ್ಕೆ ವಿಳಂಬ ಆಗಿದೆ. ಈ ಮಧ್ಯೆ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿ ಕಾರ್ಯ ಆರಂಭಗೊಂಡು, ಒಳಮೀಸಲಾತಿ ಜಾರಿಗೊಳ್ಳಲಿದೆ. ಅಲ್ಲಿಯವರೆಗೂ ನಾನು ಯಾವುದೇ ಹಬ್ಬ-ಹರಿದಿನ ಜೊತೆಗೆ ನನ್ನ ಜನ್ಮದಿನ ಕೂಡ ಆಚರಿಸುವುದಿಲ್ಲ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

Also Read: ಜಿಲ್ಲೆಯಲ್ಲಿ ಭರ್ಜರಿ ಮಳೆ | ಅಡಿಕೆ ತೋಟ, ಮನೆ, ವಿದ್ಯುತ್‌ ಕಂಬಕ್ಕೆ ಹಾನಿ

ಪತ್ರಿಕಾ ಪ್ರಕಟಣೆ ನೀಡಿರುವ ಅವರು, 15 ಏಪ್ರಿಲ್ 2025ಕ್ಕೆ ನನಗೆ 70 ವರ್ಷ ತುಂಬಲಿದ್ದು, ಈ ದಿನವನ್ನು ಸ್ಮರಣೀಯಗೊಳಿಸಲು ಹಿತೈಷಿಗಳು, ಅಭಿಮಾನಿಗಳು, ಬೆಂಬಲಿಗರು ಬೆಂಗಳೂರಿನ ಅರಮನೆ ಮೈದಾನ ಆವರಣದಲ್ಲಿನ ವಿಹಾರದಲ್ಲಿ ಕಾರ್ಯಕ್ರಮ ಸಿದ್ಧತೆ ಮಾಡಿಕೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದರು. ಈಗ ಅವರೆಲ್ಲರನ್ನೂ ಮನವೊಲಿಸಿ, ಜನ್ಮದಿನಾಚರಣೆ ಕಾರ್ಯಕ್ರಮವನ್ನು ರದ್ದುಗೊಳಿಸಿರುತ್ತೇನೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಸಮುದಾಯದಲ್ಲಿನ ನೊಂದ ಜನರಿಗೆ ಒಳಮೀಸಲಾತಿ ಜಾರಿ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಬೇಕೆಂಬುದು ನನ್ನ ಹಾಗೂ ಸಿದ್ದರಾಮಯ್ಯ ಅವರ ಗುರಿ ಆಗಿದೆ.

ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ನಮ್ಮ ಧ್ವನಿಗೆ ಬೆಂಬಲವಾಗಿ ನಿಂತಿದ್ದು, ನಮ್ಮ ಎಲ್ಲ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದಾರೆ. ಆದರೂ ಕಾಣದ ಕೈಗಳು ಒಳಮೀಸಲಾತಿಗೆ ಬಹಳಷ್ಟು ಅಡ್ಡಿಪಡಿಸಿದ್ದು, ಇದರ ವಿರುದ್ಧ ಧ್ವನಿ ಕೂಡ ಎತ್ತಿರುವೆ. ಜೊತೆಗೆ ಮುಖ್ಯಮಂತ್ರಿಗಳ ಮೇಲೆ ನಿರಂತರ ಒತ್ತಡ ತರುವ ಕೆಲಸ ಮಾಡಲಾಗುತ್ತಿದೆ.

Also Read: ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆ ಇರುವ ಮಗುವಿಗೆ ಇವೆರಡನ್ನು ಮಿಕ್ಸ್ ಮಾಡಿ ತಿನ್ನಿಸಿ

ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ, ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗಕ್ಕೆ ಪತ್ರ ಬರೆದು, ನಿಯೋಗ ತೆರಳಿ ಸರ್ವೇ ಸಂದರ್ಭ ಅಳವಡಿಸಿಕೊಳ್ಳಬೇಕಾದ ಅಂಶಗಳನ್ನು ಅವರುಗಳ ಗಮನಕ್ಕೆ ತರಲಾಗಿದೆ. ಎಲ್ಲಿಯೂ ಯಾವ ಸಮುದಾಯಗಳಿಗೂ ಅನ್ಯಾಯ ಆಗದ ರೀತಿ ಜಾತಿಗಣತಿ ಸರ್ವೇ ಪಾದರದರ್ಶಕವಾಗಬೇಕು, ಶೀಘ್ರ ಒಳಮೀಸಲಾತಿ ಜಾರಿಗೊಳ್ಳಬೇಕೆಂಬುದು ನಮ್ಮೆ ಬೇಡಿಕೆ ಆಗಿದೆ.

ಜನ್ಮದಿನಾಚರಣೆ ಸಂಭ್ರಮಕ್ಕಿಂತಲೂ ನಾನು ಸೇರಿ ಎಲ್ಲರಿಗೂ ಒಳಮೀಸಲಾತಿ ಜಾರಿ ಮುಖ್ಯ ವಿಷಯವಾಗಬೇಕು. ಏ.15ರಂದು ನನಗೆ ಶುಭಾಷಯ ಕೋರಲು ನನ್ನನ್ನು ಹುಡುಕಿಕೊಂಡು ಬರುವ ಅಗತ್ಯ ಇಲ್ಲ.

ತಾವುಗಳು ಇರುವ ಸ್ಥಳ, ಕಾಲೋನಿ, ಹಟ್ಟಿಗಳಲ್ಲಿ ಜಾತಿಗಣತಿ ಕಾರ್ಯದ ಸಂದರ್ಭ ಯಾವುದೇ ಕಾರಣಕ್ಕೂ ಆದಿಕರ್ನಾಟಕ, ಆದಿದ್ರಾವಿಡ ಎಂದು ಬರೆಸಬಾರದು. ಮೂಲ ಜಾತಿಯನ್ನು ಕಡ್ಡಾಯವಾಗಿ ಬರೆಸುವಂತೆ ಸಮುದಾಯದವರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೋರಿದ್ದಾರೆ.

Also Read: ಕಲ್ಲಂಗಡಿ ಬೀಜಗಳನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿಯಿರಿ

ಒಳಮೀಸಲಾತಿ ಪರಿಶಿಷ್ಟ ಗುಂಪಿನಲ್ಲಿರುವ 101 ಜಾತಿಗೂ ನ್ಯಾಯ ಕಲ್ಪಿಸುವ ಏಕೈಕ ಮಾರ್ಗವಾಗಿದೆ. ಜೊತೆಗೆ ಸಾಮಾಜಿಕ ನ್ಯಾಯದ ಹರಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪರಿಶಿಷ್ಟ ಜಾತಿಯಲ್ಲಿನ ಎಲ್ಲರಿಗೂ ನ್ಯಾಯ ಕೊಡಿಸಲು ದಿಟ್ಟ ಹೆಜ್ಜೆಯನ್ನಿಟ್ಟಿದ್ದಾರೆ. ನಾವುಗಳು ಅವರ ಕಾರ್ಯಕ್ಕೆ ಬೆಂಬಲವಾಗಿ ನಿಲ್ಲಬೇಕು.

ಮುಖ್ಯವಾಗಿ ಜಾತ್ರೆ, ಹಬ್ಬ-ಹರಿದಿನ ಆಚರಣೆ ಮರೆತು ಜಾತಿಗಣತಿ ಕಾರ್ಯ ಯಶಸ್ವಿಗೆ ಅದರಲ್ಲೂ ಸರ್ವೇ ಸಂದರ್ಭ ಮೂಲ ಜಾತಿ ದಾಖಲು ಆಗುವ ರೀತಿ ಜನರಲ್ಲಿ ಜಾಗೃತಿ ವಹಿಸಬೇಕು. ಈ ನಿಟ್ಟಿನಲ್ಲಿ ನನ್ನ ಜನ್ಮದಿನ ಏ.15ರಂದು ಈ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ನೊಂದ ಜನರಿಗೆ ಹಕ್ಕು ಕೊಡಿಸಲು ಶ್ರಮಿಸಬೇಕೆಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BirthdayChitradurgaChitradurga newsChitradurga UpdatesH.AnjaneyaKannada Latest NewsKannada NewsReservationSiddaramaiahಎಚ್.ಆಂಜನೇಯಒಳಮೀಸಲಾತಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜನ್ಮ ದಿನಾಚರಣೆಸಿದ್ದರಾಮಯ್ಯ
Share This Article
Facebook Email Print
Previous Article ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆ ಇರುವ ಮಗುವಿಗೆ ಇವೆರಡನ್ನು ಮಿಕ್ಸ್ ಮಾಡಿ ತಿನ್ನಿಸಿ
Next Article ಹೆರಿಗೆಯ ನಂತರ ನಿಮ್ಮ ಗರ್ಭಾಶಯ ಜಾರುತ್ತಿದೆಯೇ? ಹಾಗಾದ್ರೆ ಈ ಸಲಹೆ ಪಾಲಿಸಿರಿ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 17 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ
Dina Bhavishya
arecanut price list
ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up