
CHITRADURGA NEWS | 22 JANUARY 2025
ಚಿತ್ರದುರ್ಗ: ಜಿಲ್ಲಾ ಬಿಜೆಪಿಯಲ್ಲಿ ಬದಲಾವಣೆ ಪರ್ವ ಪ್ರಾರಂಭವಾಗಿದ್ದು, ಪಕ್ಷದ ಸಂಘಟನಾ ಕಾರ್ಯಕ್ರಮದಡಿ ನಾಲ್ಕು ಮಂಡಲಗಳಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಮಲ್ಲಾಪುರ ಕೆರೆ ನಿರ್ಲಕ್ಷ್ಯ | ಸುಮೋಟೊ ಕೇಸ್ | ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ
ಚಿತ್ರದುರ್ಗ ನಗರ, ಗ್ರಾಮಾಂತರ, ಹಿರಿಯೂರು ಹಾಗೂ ಹೊಳಲ್ಕೆರೆ ತಾಲೂಕುಗಳಿಗೆ ಹೊಸ ಅಧ್ಯಕ್ಷರ ಆಯ್ಕೆಯಾಗಿದ್ದು, ಹೊಸದುರ್ಗ, ಮೊಳಕಾಲ್ಮೂರು, ನಾಯಕನಹಟ್ಟಿ, ಭರಮಸಾಗರ ಮಂಡಲಗಳ ಅಧ್ಯಕ್ಷರ ಆಯ್ಕೆ ಬಾಕಿ ಉಳಿಸಲಾಗಿದೆ.
ಆಯ್ಕೆಯಾದ ನೂತನ ಅಧ್ಯಕ್ಷರು:
ಜಿಲ್ಲೆಯ ವಿವಿಧ ಮಂಡಲಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಎ.ಮುರುಳಿ ಪ್ರಕಟಣೆ ಹೊರಡಿಸಿದ್ದಾರೆ.
ಇದನ್ನೂ ಓದಿ: ಮೈಸೂರು ಮಹಾರಾಜರಿಂದ ವಾಣಿವಿಲಾಸ ಸಾಗರಕ್ಕೆ ಬಾಗೀನ ಅರ್ಪಣೆ
ಚಿತ್ರದುರ್ಗ ನಗರ ಘಟಕದ ಅಧ್ಯಕ್ಷರಾಗಿ ಎಚ್.ಎನ್.ಲೋಕೇಶ್ಕುಮಾರ್, ಚಿತ್ರದುರ್ಗ ಗ್ರಾಮಾಂತರ ಅಧ್ಯಕ್ಷರಾಗಿ ಕೆ.ನಾಗರಾಜಪ್ಪ, ಹಿರಿಯೂರು ಮಂಡಲ ಅಧ್ಯಕ್ಷರಾಗಿ ಕೆ.ಅಭಿನಂದನ್ ಹಾಗೂ ಹೊಳಲ್ಕೆರೆ ಮಂಡಲ ಅಧ್ಯಕ್ಷರಾಗಿ ಎ.ಇ.ವಸಂತಕುಮಾರ್ ನೇಮಕವಾಗಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
