
ಚಿತ್ರದುರ್ಗ ನ್ಯೂಸ್.ಕಾಂ: ಕರ್ನಾಟಕ ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ನವೆಂಬರ್ 1 ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡುವ ಪ್ರತಿಷ್ಠಿತ ಹಾಗೂ ರಾಜ್ಯದ ಘನತೆ ಎತ್ತಿ ಹಿಡಿಯುವ ರಾಜ್ಯೋತ್ಸವ ಪ್ರಶಸ್ತಿಗೆ ಸೂಕ್ತ ಸಾಧಕರನ್ನು ಆಯ್ಕೆ ಮಾಡಲು ಸರ್ಕಾರ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಿದೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಆಹ್ವಾನ ಮಾಡಿದ್ದು, ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ನಾಮನಿರ್ದೇಶನ ಮಾಡಬಹುದಾಗಿದೆ.
ಇದನ್ನೂ ಓದಿ: ಪ್ರಪ್ರಥಮ ಅಂತರ್ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಸಾಣೇಹಳ್ಳಿ ಶ್ರೀಗಳ ಆಯ್ಕೆ
ನಾಮನಿರ್ದೇಶನ ಮಾಡಲು (ಇಂದಿನಿಂದ)ಅಕ್ಟೋಬರ್ 1 ರಿಂದ ಪೋರ್ಟಲ್ನಲ್ಲಿ ಅವಕಾಶ ಕಲ್ಪಿಸಿದ್ದು, ಮುಂದಿನ 15 ದಿನಗಳವರೆಗೆ ಆನ್ಲೈನ್ ಮೂಲಕ ಹೆಸರು ನೊಂದಾಯಿಸಬಹುದು. ಅ.15 ನಾಮನಿರ್ದೇಶನಕ್ಕೆ ಕಡೆಯ ದಿನವಾಗಿದೆ.
ನಾಮನಿರ್ದೇಶನ ಮಾಡಲು https://Sevasindhu.karnataka.gov.in ಸೇವಾಸಿಂಧು ಪೋರ್ಟಲ್ನ ವೆಬ್ಸೈಟ್ ಸಂಪರ್ಕಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
