
CHITRADURGA NEWS | 18 SEPTEMBER 2024
ಚಿತ್ರದುರ್ಗ: ನಗರದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಸೆ.28 ರಂದು ನಡೆಯಲಿದೆ.
ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆ ಚಳ್ಳಕೆರೆ ಗೇಟ್ನಿಂದ ಬಿ.ಡಿ.ರಸ್ತೆ ಮೂಲಕ ಹೊಳಲ್ಕೆರೆ ರಸ್ತೆ ಮಾರ್ಗವಾಗಿ ಚಂದ್ರವಳ್ಳಿವರೆಗೆ ಸಾಗಲಿದೆ.
ಇದನ್ನೂ ಓದಿ: ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ
ಈ ಮಾರ್ಗದಲ್ಲಿ ಸಾರ್ವಜನಿಕರು ಶೋಭಾಯಾತ್ರೆ ನೋಡಲು ಯಾವುದೇ ಅಂಗಡಿ ಮುಂಗಟ್ಟು, ಮಳಿಗೆ ಹಾಗೂ ಕಟ್ಟಡದ ಮೇಲೆ ಹತ್ತಬಾರದು ಎಂದು ಬೆಸ್ಕಾಂ ಸೂಚನೆ ನೀಡಿದೆ.
ವಿದ್ಯುತ್ ತಂತಿಗಳು ಕಟ್ಟಡದ ಸಮೀಪವೇ ಹಾದು ಹೊಗಿರುತ್ತವೆ. ಇದರಿಂದ ವಿದ್ಯುತ್ ಅವಘಡಗಳು ಸಂಭವಿಸಬಹುದು. ಆದ್ದರಿಂದ ಅಂಗಡಿ ಹಾಗೂ ಕಟ್ಟಡ ಮಾಲಿಕರು ಈ ಬಗ್ಗೆ ನಿಗಾ ವಹಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿಯರ್ ಕೋರಿದ್ದಾರೆ.
ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಅಪಘಾತ
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

