By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಿದ್ಯಾರ್ಥಿಗಳಿಗೆ ಇಸ್ರೇಲ್ ಜನರ ಶಿಸ್ತಿನ ಪಾಠ ಹೇಳಿದ ಶಾಸಕ ಡಾ.ಎಂ.ಚಂದ್ರಪ್ಪ | ಉಪ್ಪರಿಗೇನಹಳ್ಳಿ ಕಾಲೇಜಿನಿಂದ ಎನ್ನೆಸ್ಸೆಸ್ಸ್ ಶಿಬಿರ ಆಯೋಜನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಿದ್ಯಾರ್ಥಿಗಳಿಗೆ ಇಸ್ರೇಲ್ ಜನರ ಶಿಸ್ತಿನ ಪಾಠ ಹೇಳಿದ ಶಾಸಕ ಡಾ.ಎಂ.ಚಂದ್ರಪ್ಪ | ಉಪ್ಪರಿಗೇನಹಳ್ಳಿ ಕಾಲೇಜಿನಿಂದ ಎನ್ನೆಸ್ಸೆಸ್ಸ್ ಶಿಬಿರ ಆಯೋಜನೆ

ತಾಲೂಕುಮುಖ್ಯ ಸುದ್ದಿಹೊಳಲ್ಕೆರೆ

ವಿದ್ಯಾರ್ಥಿಗಳಿಗೆ ಇಸ್ರೇಲ್ ಜನರ ಶಿಸ್ತಿನ ಪಾಠ ಹೇಳಿದ ಶಾಸಕ ಡಾ.ಎಂ.ಚಂದ್ರಪ್ಪ | ಉಪ್ಪರಿಗೇನಹಳ್ಳಿ ಕಾಲೇಜಿನಿಂದ ಎನ್ನೆಸ್ಸೆಸ್ಸ್ ಶಿಬಿರ ಆಯೋಜನೆ

chitradurganews.com
Last updated: 18 October 2023 20:06
chitradurganews.com
2 years ago
Share
ವಿಶೇಷ ವಾರ್ಷಿಕ ಶಿಬಿರವನ್ನು ಶಾಸಕ ಡಾ.ಎಂ.ಚಂದ್ರಪ್ಪ ಉದ್ಘಾಟಿಸಿದರು.
ವಿಶೇಷ ವಾರ್ಷಿಕ ಶಿಬಿರವನ್ನು ಶಾಸಕ ಡಾ.ಎಂ.ಚಂದ್ರಪ್ಪ ಉದ್ಘಾಟಿಸಿದರು.
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ(ಎನ್‍ಎಸ್‍ಎಸ್) ಘಟಕದಿಂದ ಬುಧವಾರ ಕೆರೆಯಾಗಳಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ವಿಶೇಷ ವಾರ್ಷಿಕ ಶಿಬಿರವನ್ನು ಶಾಸಕ ಡಾ.ಎಂ.ಚಂದ್ರಪ್ಪ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ಎನ್‍ಎಸ್‍ಎಸ್ ನೇತೃತ್ವದಲ್ಲಿ ವಿದ್ಯಾರ್ಥಿಗಳು 8 ದಿನಗಳ ಕಾಲ ಗ್ರಾಮದಲ್ಲಿ ಸ್ವಚ್ಛತೆ, ಆರೋಗ್ಯ ಜಾಗೃತಿ ಸೇರಿದಂತೆ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಸ್ವಾಗತಾರ್ಹ. ವಿದ್ಯಾರ್ಥಿಳು ಶಿಕ್ಷಣದ ಜೊತೆ ಪರೋಪಕಾರದ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎಂದರು.

ಇದನ್ನೂ ಓದಿ: ಗುಡ್ಡದ ತಿಮ್ಮಪ್ಪನಿಗೆ ಅನ್ನದ ಕೋಟೆ | ಹರಿದು ಬಂದ ಜನಸಾಗರ

ಕೇವಲ 90 ಲಕ್ಷ ಜನಸಂಖ್ಯೆಯಿರುವ ಇಸ್ರೇಲ್ ಪ್ಯಾಲೆಸ್ತಿನಗಳು ಒಡ್ಡಿರುವ ಸವಾಲನ್ನು ಸಮರ್ಥವಾಗಿ ಎದುರಿಸುತ್ತಿದೆ. ಅಲ್ಲಿ ಹುಟ್ಟಿದವರು ಹೆಣ್ಣಿರಲಿ, ಗಂಡಿರಲಿ ಶಿಕ್ಷಣದ ನಂತರ ಕಡ್ಡಾಯವಾಗಿ ಸೇನೆಯಲ್ಲಿ ಸೇವೆ ಸಲ್ಲಿಸಬೇಕು ಎಂಬ ನಿಯಮವಿದೆ. ಈ ಕಾರಣಕ್ಕೆ ಅಲ್ಲಿ ದೇಶಾಭಿಮಾನ ಈ ಮಟ್ಟಕ್ಕೆ ಬೆಳೆದಿದೆ ಎಂದು ಪ್ರಶಂಸಿದರು.

ರಾಜಕಾರಣದಲ್ಲಿ ಅಧಿಕಾರ ಸಿಕ್ಕಾಗ ಹತ್ತಾರು ಜನ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡಿ ಸಮಾಜದ ಋಣ ತೀರಿಸಬೇಕು. ಸಾರ್ವಜನಿಕ ಹಿತ ಕಾಯುವುದರ ಜೊತೆಗೆ ಬಡವರ ಕಷ್ಟ-ಸುಖಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.

ಇಸ್ರೇಲ್ ಜನರ ಶಿಸ್ತಿನ ಪಾಠ ಹೇಳಿದ ಶಾಸಕ ಡಾ.ಎಂ.ಚಂದ್ರಪ್ಪ
ಇಸ್ರೇಲ್ ಜನರ ಶಿಸ್ತಿನ ಪಾಠ ಹೇಳಿದ ಶಾಸಕ ಡಾ.ಎಂ.ಚಂದ್ರಪ್ಪ

ತಾಲ್ಲೂಕಿನಾದ್ಯಂತ ಎಲ್ಲಾ ಕೆರೆಗಳನ್ನು ಅಭಿವೃದ್ದಿಪಡಿಸಿ ಚೆಕ್ ಡ್ಯಾಂ ಕಟ್ಟಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಜಾಸ್ತಿಯಾಗಿದೆ. ನೀರು ಮಳೆಯಿಲ್ಲದ ರಾಷ್ಟ್ರ ಇಸ್ರೇಲ್ ಎತ್ತರಕ್ಕೆ ಬೆಳೆದಿದೆ ಎನ್ನುವುದಾದರೆ ಅಲ್ಲಿನ ಪ್ರಜೆಗಳಲ್ಲಿರುವ ಸಮಯ ಹಾಗೂ ಕಾಯಕ ಪ್ರಜ್ಞೆ ಕಾರಣ ಎಂದು ತಿಳಿಸಿದರು.

ವಿದ್ಯುತ್ ಸಮಸ್ಯೆಯಾಗಬಾರದೆಂದು ಕೆರೆಯಾಗಳಹಳ್ಳಿ ಪಕ್ಕ ತೇಕಲವಟ್ಟಿ ಗುಡ್ಡದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಪವರ್ ಸ್ಟೇಷನ್ ಕಟ್ಟಿಸಿದ್ದೇನೆ. ಚಿಕ್ಕಜಾಜೂರಿನ ಕೋಟಹಾಳ್ ಸಮೀಪದ ಸ್ಟೇಷನ್‍ಗೆ ಜೋಗದಿಂದ ನೇರವಾಗಿ ವಿದ್ಯುತ್ ಪೂರೈಕೆ ಮಾಡುವುದಕ್ಕಾಗಿ 250 ಕೋಟಿ ರೂ. ವೆಚ್ಚದಲ್ಲಿ ಪವರ್ ಸ್ಟೇಷನ್ ಕೆಲಸ ಆರಂಭವಾಗಿದೆ ಎಂದು ತಿಳಿಸಿದರು.

ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ ಅದರ ಬಗ್ಗೆ ಚಿಂತೆ ಮಾಡುವುದಿಲ್ಲ. ಸಾವಿರಾರು ಕೋಟಿ ರೂ. ಅನುದಾನ ತಂದು ಕೆಲಸ ಮಾಡುವ ಸಾಮಥ್ರ್ಯ ಹೊಂದಿದ್ದೇನೆ.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ತಿಮ್ಮಾಭೋವಿ, ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಟಿ.ಚಂದ್ರಪ್ಪ, ಸದಸ್ಯರಾದ ಕೆ.ದ್ಯಾಮಣ್ಣ, ಎಲ್.ಪ್ರಸನ್ನಕುಮಾರ್, ಹೊನ್ನಪ್ಪ, ಮುಖಂಡರಾದ ಕೆ.ಆರ್.ಸುರೇಶ್, ಮೂರ್ತಣ್ಣ, ರಂಗಧಾಮ, ದಿನೇಶ್, ಮಂಜುನಾಥ್, ನೌಕರರ ಸಂಘದ ಕಾರ್ಯಾಧ್ಯಕ್ಷ ಎ.ಜಯಪ್ಪ, ಪ್ರಾಚಾರ್ಯರಾದ ಟಿ.ಮಹೇಶ್ವರಪ್ಪ, ಎನ್‍ಎಸ್‍ಎಸ್ ಶಿಬಿರದ ಕಾರ್ಯಕ್ರಮಾಧಿಕರಿ ಆರ್.ಚಂದ್ರಶೇಖರ್, ಉಪನ್ಯಾಸಕರಾದ ಟಿ.ಲೋಹಿತ್ ಕುಮಾರ್, ಬಿ.ವಿಜಯ್, ಸಿ.ಕೆ.ನಯಾಜ್, ಕೆ.ಹೆಚ್.ಉಮೇಶ್, ಪಿ.ಪುನೀತ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CampChitradurgaChitradurga UpdatesDr.M.Ch.ChandrappaHolalkereKannada Latest NewsKereyagalahalliM.C.RaghuchandanMlaNSSPre-Graduate CollegeUpparigenahalliಉಪ್ಪರಿಗೇನಹಳ್ಳಿಎಂ.ಸಿ.ರಘುಚಂದನ್ಎನ್‍ಎಸ್‍ಎಸ್ಕನ್ನಡ ಲೇಟೆಸ್ಟ್ ನ್ಯೂಸ್ಕೆರೆಯಾಗಳಹಳ್ಳಿಕ್ಯಾಂಪ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಡಾ.ಎಂ.ಚಂ.ಚಂದ್ರಪ್ಪಪದವಿ ಪೂರ್ವ ಕಾಲೇಜುಶಾಸಕಹೊಳಲ್ಕೆರೆ
Share This Article
Facebook Email Print
Previous Article Application Invitation ತೋಟಗಾರಿಕೆ ಬೆಳೆಗಾರರು ಅರ್ಜಿ ಸಲ್ಲಿಸಿ
Next Article ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲದ ಟ್ಯಾಬ್ಲೋ ಮೈಸೂರು ದಸರಾಕ್ಕೆ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲದ ಟ್ಯಾಬ್ಲೋ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up