By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    9 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    11 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    11 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    12 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    16 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    23 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 day ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    22 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    23 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    2 days ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    3 days ago
Reading: ಹೋರಾಟಗಾರ್ತಿ ವರಲಕ್ಷ್ಮೀಗೆ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ | ಚಿತ್ರದುರ್ಗದ ಲಿಡ್ಕರ್‌ ಭವನದಲ್ಲಿ ಕಾರ್ಯಕ್ರಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹೋರಾಟಗಾರ್ತಿ ವರಲಕ್ಷ್ಮೀಗೆ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ | ಚಿತ್ರದುರ್ಗದ ಲಿಡ್ಕರ್‌ ಭವನದಲ್ಲಿ ಕಾರ್ಯಕ್ರಮ

chitradurganews.com
Last updated: 13 December 2025 18:59
chitradurganews.com
4 months ago
Share
Nulenuru shankrappa award for Varalakshmi
ಹೋರಾಟಗಾರ್ತಿ ವರಲಕ್ಷ್ಮೀ ಅವರಿಗೆ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ
SHARE

CHITRADURGA NEWS | 13 DECEMBER 2025

ಚಿತ್ರದುರ್ಗ: ಹಿರಿಯ ರೈತ ನಾಯಕ, ದಿ.ನುಲೇನೂರು ಶಂಕರಪ್ಪ ಅವರ ಹೆಸರಿನಲ್ಲಿ ಸ್ಥಾಪನೆಯಾಗಿರುವ ಪ್ರತಿಷ್ಠಾನದಿಂದ ಇದೇ ಮೊದಲ ಬಾರಿಗೆ ಹೋರಾಟಗಾರ್ತಿ ಕೋಲಾರದ ವರಲಕ್ಷ್ಮೀ ಅವರಿಗೆ ನುಲೇನೂರು ಶಂಕರಪ್ಪ ಹಸಿರು ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಗರದ ಲಿಡ್ಕರ್‌ ಭವನದಲ್ಲಿ ನುಲೇನೂರು ಶಂಕರಪ್ಪ ಪ್ರತಿಷ್ಠಾನದಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 13 | ಹತ್ತಿ ರೇಟ್ ಎಷ್ಟಿದೆ?

ಪ್ರಶಸ್ತಿ 25 ಸಾವಿರ ನಗದು, ಸ್ಮರಣಿಕೆ ಹಾಗೂ ರೇಷ್ಮೆ ಸೀರೆಯನ್ನು ಒಳಗೊಂಡಿತ್ತು. ಕಾರ್ಯಕ್ರಮದ ಸಭಾಂಗಣಕ್ಕೆ ಆಗಮಿಸಿದ ವರಲಕ್ಷ್ಮೀ ಅವರನ್ನು ಹೂಮಳೆಗರೆದು ಸ್ವಾಗತಿಸಲಾಯಿತು.

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಶಸ್ತಿ ಅರ್ಪಣೆ:

ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ವರಲಕ್ಷ್ಮೀ ಅವರು, ಮೂವತ್ತು ವರ್ಷಗಳ ಹೋರಾಟದಲ್ಲಿ ಎಂದೂ ಪ್ರಶಸ್ತಿ, ಪುರಸ್ಕಾರಗಳಿಗೆ ಒಪ್ಪಿಕೊಂಡಿಲ್ಲ. ಆದರ್ಶ, ರೈತ ನಾಯಕರೊಬ್ಬರ ಹೆಸರಿನಲ್ಲಿ ಮಹಿಳಾ ಹೋರಾಟಗಾರರನ್ನು ಗುರುತಿಸುವ ಎಚ್ಚರಕ್ಕೆ ನನ್ನದೊಂದು ಲಾಲ್ ಸಲಾಂ ಎಂದರು.

ಇದನ್ನೂ ಓದಿ: ಅಧಿವೇಶನದಲ್ಲಿ ಭದ್ರಾ ಮೇಲ್ದಂಡೆ ಬಿಸಿ ಬಿಸಿ ಚರ್ಚೆ | ಅನುದಾನ ಬರುತ್ತೋ ಇಲ್ಲವೋ ಗೊತ್ತಿಲ್ಲ, ಚರ್ಚೆಯಂತೂ ಆಯ್ತು

ಈ ಪುರಸ್ಕಾರವನ್ನು ನಾನು ಈ ನಾಡಿನ  ಅಂಗನಾಡಿ ಕಾರ್ಯಕರ್ತೆಯರಿಗೆ ಮತ್ತು ಆಶಾ ಕಾರ್ಯಕರ್ತೆಯರಿಗೆ ಅರ್ಪಿಸುವೆ. ಪ್ರಭುತ್ವದ ವಿರುದ್ಧ ಹೋರಾಟಕ್ಕೆ ಇಳಿದಾಗಲೆಲ್ಲಾ ನಾವು ಮನೆಯನ್ನು ಮರೆತು ಹೋರಾಟ ಮಾಡಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಆಶಾ, ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಭದ್ರತೆ ಇಲ್ಲ. ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದೇವೆ. ಈವತ್ತಿನ ಸರ್ಕಾರಗಳು ಹೋರಾಟಗಾರರ ಮೇಲೆ ನಿಷೇಧಗಳನ್ನು ಹೇರುತ್ತಾ ಬರುತ್ತಿವೆ. ದೆಹಲಿಯಲ್ಲಿ ನಡೆದ ರೈತರ ಹೋರಾಟದ ಇತಿಹಾಸ ನಮಗೆಲ್ಲಾ ತಿಳಿದಿದೆ. ನೂರು ಜನರು ಮಾತ್ರ ಇಂತಹ ಜಾಗದಲ್ಲಿ ಹೋರಾಟ ಮಾಡಬೇಕು ಎಂಬ ಷರತ್ತು ವಿಧಿಸುವುದನ್ನು ನೋಡಿದರೆ ನಾವೆಲ್ಲಾ ಮಿಂಚು ಹುಳುಗಳಾಗಬೇಕಿದೆ. ರೈತ, ದಲಿತ, ಕಾರ್ಮಿಕ ಅಂದರೆ ಹಸಿರು, ನೀಲಿ, ಕೆಂಪು ಒಂದಾಗದಿದ್ದರೆ ಪ್ರಭುತ್ವದ ಕಾನೂನುಗಳು ನಮ್ಮ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನದಲ್ಲಿ ಇರಲಿವೆ ಎಂದು ವಿವರಿಸಿದರು.
ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮಾಡುವ ಕೆಲಸಕ್ಕೆ ಭದ್ರತೆಯಿಲ್ಲದ ಕಾರಣ ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ವಿಷಾದಿಸಿದರು.

ಇದನ್ನೂ ಓದಿ: ಭದ್ರೆ ನೀರು ಜಿಲ್ಲೆಗೆ ಹರಿಯಲು ಯಾರೆಲ್ಲಾ ಕಾರಣ ಗೊತ್ತಾ | ನೀರಾವರಿ ಯೋಜನೆ ಕುರಿತು ಶ್ರೀ ಶಾಂತವೀರ ಸ್ವಾಮೀಜಿ ಮುಕ್ತ ಮಾತು

ರೈತರಿಗೆ 9 ವರ್ಷದಲ್ಲಿ 24 ಲಕ್ಷ ಕೋಟಿ ರೂ. ನಷ್ಟ:

ರೈತ ನಾಯಕ, ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾತನಾಡುತ್ತಾ, ದೇಶದಲ್ಲಿ ಸ್ವಾಮಿನಾಥನ್‌ ವರದಿ ಜಾರಿಯಾಗದ ಹಿನ್ನೆಲೆಯಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ರೈತರು, ಕಾರ್ಮಿಕರಿಗೆ 24 ಲಕ್ಷ ಕೋಟಿ ರೂ. ನಷ್ಟವಾಗಿದೆ. 2024-25ನೇ ಸಾಲಿನಲ್ಲಿ 3 ಲಕ್ಷ ಕೋಟಿ ರೂ. ನಷ್ಟವಾಗಿದೆ ಎಂದರು.
ಬ್ರಿಟೀಷರು ಭಾರತಕ್ಕೆ ಮೊದಲು ಅಂದರೆ, ಸಾವಿರ ವರ್ಷ ಮೊದಲೇ ಭಾರತದ ಜಿಡಿಪಿ ಜಗತ್ತಿನಲ್ಲೇ ಹೆಚ್ಚಾಗಿತ್ತು. ಆಗ ಹಳ್ಳಿಗಳಲ್ಲಿ ಗುಡಿ ಕೈಗಾರಿಕೆಗಳಿದ್ದವು. ರೈತರು ಕೃಷಿ ಜೊತೆಗೆ ಉಪವೃತ್ತಿ ಮಾಡಿಕೊಂಡಿದ್ದರು ಎಂದು ತಿಳಿಸಿದರು. ಇಂದು ರಚನಾತ್ಮಕ ಹೋರಾಟಗಳಿಂದ ಮಾತ್ರ ಸಾಮಾನ್ಯ ಜನರು ಬದುಕು ಕಟ್ಟಿಕೊಳ್ಳುವುದನ್ನು ಕಲಿಸಿಕೊಡಬೇಕಾಗಿದೆ. ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ:

ಇನ್ನೂ ಕಾರ್ಯಕ್ರಮದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡುತ್ತಾ, ಎಂಭತ್ತರ ದಶಕದಲ್ಲಿದ್ದ ಹೋರಾಟದ ಸ್ಫೂರ್ತಿ ಇಂದು ಇಲ್ಲ. ಹೆಚ್ಚು ಹೆಚ್ಚು ಯುವಕರು ಹೋರಾಟಕ್ಕೆ ಧುಮಕಬೇಕಿದೆ ಎಂದರು.

ಇದನ್ನೂ ಓದಿ: ರೈತರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ | ಕೃಷಿ ಅಧಿಕಾರಿಗಳಿಗೆ ಡಿಸಿ ಸೂಚನೆ

ತಂತ್ರಜ್ಞಾನ ಯುಗದಲ್ಲಿ ನಾವಿದ್ದರೂ ಆಗಿನ ಕಾಲದಲ್ಲಿ ಒಂದು ಕರೆಕೊಟ್ಟರೂ ಸಾಕು ಸಾವಿರ ಸಾವಿರ ಸಂಖ್ಯೆಯಲ್ಲಿ ಹೋರಾಟಕ್ಕೆ ಜನರು ಬರುತ್ತಿದ್ದರು. ಈಗ ಪ್ರಾಮಾಣಿಕ ಹೋರಾಟಗಾರರನ್ನು ಹುಡುಕಬೇಕಿದೆ ಎಂದರು.

ನುಲೇನೂರು ಶಂಕರಪ್ಪ ಪ್ರತಿಷ್ಠಾನದಿಂದ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಜಿಲ್ಲೆಯಲ್ಲಿ ನೀರಾವರಿ ಹೋರಾಟಕ್ಕೆ ನುಲೇನೂರು ಶಂಕರಪ್ಪ ಅವರ ಕೊಡುಗೆ ದೊಡ್ಡದಿದೆ. ಇಂತಹವರ ಹೆಸರಿನಲ್ಲಿ ಪ್ರತಿಷ್ಥಾನ ಆರಂಭಿಸಿ ಮೊದಲ ಬಾರಿಗೆ ಮಹಿಳಾ ಹೋರಾಟಗಾರರಿಗೆ ಶಂಕರಪ್ಪನವರ ಹೆಸರಿನಲ್ಲಿ ಪುರಸ್ಕಾರ ಮಾಡುತ್ತಿರುವುದು ಅವರ ಹೋರಾಟದ ಜೀವಂತಿಕೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ರೈತ ಚಳವಳಿ ಉತ್ತುಂಗದಲ್ಲಿ ಇದ್ದ ಕಾಲದಲ್ಲಿಯೇ ದಲಿತ ಚಳವಳಿಯೂ ಕೂಡ ರಾಜ್ಯದಲ್ಲಿ ಉತ್ತುಂಗ ಸ್ಥಿತಿಯಲ್ಲಿತ್ತು. ರೈತ, ದಲಿತ, ಕಾರ್ಮಿಕ ಚಳವಳಿಗಳು ಒಂದೇ ವೇದಿಕೆಯಲ್ಲಿ ಸೇರಿ ಸಂಯುಕ್ತ ಹೋರಾಟ ಎಂದು ಮಾಡಿಕೊಂಡು ಈ ನಾಡಿನ ಉಳಿವಿಗಾಗಿ ಹೋರಾಡುವ ಅಗತ್ಯವಿದೆ. ಕಾಮ್ರೆಡ್ ವರಲಕ್ಷ್ಮೀ ಅವರ ಹೋರಾಟವನ್ನು ಕಣ್ಣಾರೆ ಕಂಡಿರುವ ನಾವುಗಳು ಅವರಿಂದ ಮಹಿಳಾ ಹೋರಾಟಕ್ಕೆ ಶಕ್ತಿ ಬಂದಿದೆ ಎಂದು ಬಣ್ಣಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್‌ 12 |ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ರೇಟ್‌

ದೇವನಹಳ್ಳಿಯಲ್ಲಿ ರೈತರ ಭೂಮಿಯನ್ನು ಆಮಿಷವೊಡ್ಡಿ ಕಬಳಿಸಲು ಹೋದ ಸರ್ಕಾರದ ವಿರುದ್ಧ ಹಮ್ಮಿಕೊಂಡ ಚಳವಳಿಗೆ ಸೋತ ಸರ್ಕಾರ ನೋಟಿಪಿಕೇಷನ್ ವಾಪಾಸ್ ಪಡೆದಾಗ ಆದ ಸಂತೋಷಕ್ಕೆ ಪಾರವೇ ಇಲ್ಲ. ಇಂತಹ ಯಶಸ್ವಿಗಳು ಹೋರಾಟಗಾರಿಗೆ ಸಿಕ್ಕ ಪುರಸ್ಕಾರ ಎಂದರು.

ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ಮಾತನಾಡಿ, ದಲಿತ ಚಳವಳಿಯಲ್ಲಿ ಹೋರಾಟ ಆರಂಭಿಸಿ ಚಂದ್ರಗುತ್ತಿಯಲ್ಲಿ ನಡೆಯುತ್ತಿದ್ದ ಅಮಾನುಷ ಬೆತ್ತಲೆ ಹೋರಾಟವನ್ನು ಖಂಡಿಸುವ ಚಳವಳಿ ನಡೆಸಿದಾಗ ಸರ್ಕಾರ ಅಂತಹ ಅನಿಷ್ಟ ಪದ್ಧತಿಯನ್ನು ನಿಷೇಧಿಸಿದಾಗ ಅದು ಚಳವಳಿಯ ಗೆಲುವಾಗಿತ್ತು. ಇದಾದ ನಂತರ ರೈತ ಚಳವಳಿಯಲ್ಲಿ ಪ್ರೊ.ನಂಜುಂಡಸ್ವಾಮಿ, ಸುಂದರೇಶ್ ಅಂತಹವರ ಹೋರಾಟದಿಂದ ಪ್ರೇರೇಪಿತಗೊಂಡು ರೈತ ಚಳವಳಿಯಲ್ಲಿ ಅನೇಕ ಹೋರಾಟಗಳ ಮೂಲಕ ಪ್ರಭುತ್ವವನ್ನು ಎಚ್ಚರಿಸುವ ಕೆಲಸ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 12 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ರೈತ ಮುಖಂಡ ನುಲೇನೂರು ಶಂಕರಪ್ಪ, ದಲಿತ ಮುಖಂಡ ಎಂ.ಜಯಣ್ಣ ಹಾಗೂ ಓಡೆಯರ್ ಹೆಸರಿನಲ್ಲಿ ಪ್ರತಿ ವರ್ಷ ರಾಜ್ಯ ಮಟ್ಟದ ಪ್ರಶಸ್ತಿ ಕೊಡಬೇಕು ಎಂಬ ಚಿಂತನೆಯಲ್ಲಿದ್ದೆವು. ಆದರೆ, ಜಯಣ್ಣ ಮತ್ತು ಓಡೆಯರ್ ಹೆಸರಿನಲ್ಲಿ ಬೇರೊಂದು ಸಂಘಟನೆ ಪ್ರಶಸ್ತಿ ಕೊಡಬೇಕು ಎಂಬ ಆಲೋಚನೆಯಲ್ಲಿದ್ದ ಕಾರಣ ನುಲೇನೂರು ಶಂಕರಪ್ಪ ಅವರ ಹೆಸರಲ್ಲಿ ಪ್ರಾರಂಭಿಸಿರುವ ಪ್ರತಿಷ್ಥಾನದಿಂದ ಹಸಿರು ಪ್ರಶಸ್ತಿ ಕೊಡಲಾಗುತ್ತಿದೆ. ಜಯಣ್ಣ ಹೆಸರಿನಲ್ಲಿ ಪ್ರಶಸ್ತಿ ಕೊಡುವ ಆಲೋಚನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.

ನುಲೇನೂರು ಶಂಕರಪ್ಪ ಅವರ ಪುತ್ರ ಡಾ. ರವಿಶಂಕರ್ ಮಾತನಾಡಿ, ತಂದೆಯವರು ಹೋರಾಟದಲ್ಲಿ ಎಂದಿಗೂ ತನ್ನ ತತ್ವ ಸಿದ್ಧಾಂತ ಬಿಟ್ಟವರಲ್ಲ. ಹಣಕ್ಕಾಗಿ ಎಂದಿಗೂ ಯಾರೊಂದಿಗೂ ರಾಜಿಯಾದವರಲ್ಲ. ಎಂತಹ ಕಡುಕಷ್ಟ ಬಂದರೂ ಹಾದಿ ತಪ್ಪಿದವರಲ್ಲ. ಬದಲಾಗಿ ಸಂಕಷ್ಟದ ಸಂದರ್ಭದಲ್ಲಿ ಹೇಗೆ ವರ್ತಿಸಬೇಕು ಎಂಬುದನ್ನು ನಮಗೆ ಜೀವಿತದ ಕಾಲದಲ್ಲಿ ಕಲಿಸಿ ಹೋಗಿದ್ದಾರೆ ಎಂದು ಮೆಲುಕು ಹಾಕಿದರು.

ನಿವೃತ್ತ ಪ್ರಾಚಾರ್ಯ ಜೆ.ಯಾದವರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಆಡಳಿತ ಪಕ್ಷದ ಆರು ಜನ ಶಾಸಕರಿದ್ದರೂ ‌ಸರ್ಕಾರದ ಮೇಲೆ ಒತ್ತಡ ತಂದು ಭದ್ರಾ ಕಾಮಗಾರಿ ಪೂರ್ಣಗೊಳಿಸಲು ವಿಳಂಬ ಧೋರಣೆ ತೋರುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿರಿಯೂರು ತಾಲೂಕಿನಲ್ಲಿ ಬೆಳೆ ವಿಮೆ ನೋಂದಣಿ ಪ್ರಾರಂಭ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ಎಸ್. ವಿನಾಯಕ್ ತೊಡರನಾಳ್ ಮಾತನಾಡಿ, ಶಂಕರಣ್ಣ ಹಾಗೂ ನಾನು ಅಕ್ಕಪಕ್ಕದ ಊರಿನವರು ರೈತರ ಮಕ್ಕಳಾಗಿ ಜನಿಸಿ ಪಟ್ಟಣ ಸೇರಿ ರೈತ ಕಸುಬನ್ನು ಬಿಡುವವರ ಬಗ್ಗೆ ಸದಾ ಬೇಸರಿಸಿಕೊಳ್ಳುತ್ತಿದ್ದರು ಎಂದು ನೆನಪಿಸಿಕೊಂಡರು.

ಅಧ್ಯಕ್ಷತೆ ವಹಿಸಿದ್ದ ನೀರಾವರಿ ಆನುಷ್ಠಾಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ,ಎ.ಲಿಂಗಾರೆಡ್ಡಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದಲ್ಲಿ ನುಲೇನೂರು ಶಂಕರಪ್ಪ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಮುಂಚೂಣಿ ನಾಯಕರಾಗಿದ್ದರು. ಯೋಜನೆಗೆ ಅನುದಾನ ನೀಡುವಲ್ಲಿ ರಾಜ್ಯ ಸರ್ಕಾರ ಉದಾಸೀನ ತೋರುತ್ತಿದೆ.  ಸರ್ಕಾರದ ಬಳಿ ಹಣ ಇಲ್ಲದಿದ್ದರೆ ಬಾಂಡ್ ಬಿಡುಗಡೆ ಮಾಡಲಿ,ಕೊಳ್ಳಲು ಜನರಿದ್ದಾರೆ ಎಂದರು.

ರೈತ ಮಖಂಡರಾದ  ಕೆ.ಪಿ. ಭೂತಯ್ಯ, ಹಂಪಯ್ಯನ ಮಾಳಿಗೆ ಧನಂಜಯ, ಗೋವಿಂದರಾಜು, ಕಾರ್ಮಿಕ ಮುಖಂಡ ಸುರೇಶ್ ಬಾಬು, ಪ್ರಾಂತರೈತ ಸಂಘದ ಯಶವಂತ್ ಮಾತನಾಡಿದರು.

ಇದನ್ನೂ ಓದಿ: ರೈತರ ಬೆಳೆ ಮಾರಾಟ ಮಾಡಲು ಎಪಿಎಂಸಿ ನಿರ್ಮಾಣ | ಶಾಸಕ ಡಾ.ಎಂ.ಚಂದ್ರಪ್ಪ 

ರೈತ ಸಂಘದ ವಲಯ ಕಾರ್ಯದರ್ಶಿ ಅರುಣ್ ಕುಮಾರ್ ಕುರುಡಿ, ಬಸ್ತಿಹಳ್ಳಿ ಸುರೇಶ್ ಬಾಬು, ಹೊರಕೆರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಲ್ಲಾಪುರ ತಿಪ್ಪೇಸ್ವಾಮಿ, ಸಿಪಿಐ ಮುಖಂಡ ಸುರೇಶ್ ಬಾಬು, ಕಮಲಮ್ಮ ನುಲೇನೂರು ಶಂಕರಪ್ಪ ಇದ್ದರು.ಜಡೇಕುಂಟೆ ಮಂಜುನಾಥ್ ಸ್ವಾಗತಿಸಿದರು. ನವೀನ್ ಮಸ್ಕಲ್  ನಿರೂಪಿಸಿ ವಂದಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:awardNulenuru Shankrappa prathishtanaಚಿತ್ರದುರ್ಗನುಲೇನೂರು ಶಂಕರಪ್ಪ ಪ್ರತಿಷ್ಠಾನ
Share This Article
Facebook Email Print
Previous Article ಚಿತ್ರದುರ್ಗ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಒತ್ತಡದ ಬದುಕಿನಲ್ಲಿ ಜಾನಪದ ಪರಂಪರೆ ಕಣ್ಮರೆ | ADC ಕುಮಾರಸ್ವಾಮಿ
Next Article ಶ್ರೀ ಸಿದ್ದೇಶ್ವರಸ್ವಾಮಿ ಚಂದ್ರವಳ್ಳಿ ದವಳೇಶ್ವರ ಸ್ವಾಮಿ ಕಾರ್ತಿಕೋತ್ಸವ ನಾಳೆ
Leave a Comment

Leave a Reply Cancel reply

Your email address will not be published. Required fields are marked *

JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಮುಖ್ಯ ಸುದ್ದಿ
ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
ಮುಖ್ಯ ಸುದ್ದಿ
ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up