
CHITRADURGA NEWS | 20 OCTOBER 2025
ಚಿತ್ರದುರ್ಗ: ನಾಯಕ ಸಮುದಾಯದ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ರಮೇಶ್ ಕತ್ತಿ ಅವರ ಪ್ರಕರಣ ದಾಖಲಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನಾಯಕ ಸಮಾಜ ಆಗ್ರಹಿಸಿತು.

ಇದನ್ನೂ ಓದಿ: ವಿವಿ ಸಾಗರಕ್ಕೆ ಭರ್ಜರಿ ಒಳಹರಿವು | ಮೈದುಂಬಲಿದೆ ಕೋಡಿಯ ಹರಿವು
ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನೆ ಮೆರವಣಿಗೆ ನಡೆಸಿ, ರಮೇಶ್ ಕತ್ತಿ ವಿರುದ್ದ ಘೋಷಣೆ ಕೂಗಲಾಯಿತು. ನಂತರ ಡಿವೈಎಸ್ಪಿಯವರಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಬಿ.ಕೆ ಮಾಡೆಲ್ ಹೈಸ್ಕೂಲ್ ಮೈದಾನ ಡಿಸಿಸಿ ಬ್ಯಾಂಕಿನ ಚುನಾವಣಾ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಬೆಲ್ಲದ ಬಾಗೇವಾಡಿಯ ರಮೇಶ ಕತ್ತಿಯವರು ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷರನ್ನು ವಾಲ್ಮೀಕಿ ಸಮುದಾಯ ಕುರಿತು ಬ್ಯಾಡರ ಸೂಳೆ ಮಕ್ಕಳು ಎಂಬ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಅವಮಾನಿಸಿದ್ದಾರೆ.
ಇದರಿಂದ ರಾಜ್ಯಾದಾದ್ಯಂತ 75 ಲಕ್ಷ ವಾಲ್ಮೀಕಿ ಸಮುದಾಯದ ಮನಸ್ಸಿಗೆ ತೀವ್ರಘಾಸಿ ಆಗಿದೆ ಹಾಗೂ ಭಾವನೆಗಳಿಗೆ ಧಕ್ಕೆ, ತೀವ್ರ ಆಘಾತವಾಗಿದೆ.
ಇದನ್ನೂ ಓದಿ: ಮಳೆಯ ಅಬ್ಬರ | ರೈತರನ್ನು ಚಿತ್ ಮಾಡಿದ ಚಿತ್ತಾ ಮಳೆ
ಈ ವಿಡಿಯೋ ಸಾಮಾಜಿಕ ಜಾಲಾತಾಣಗಳಲ್ಲಿ ಹರಿದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವವಿದೆ. ಇದರಿಂದ ಜಿಲ್ಲೆಯ ಬೇರೆ ಬೇರೆ ಸಮುದಾಯಗಳ ಮಧ್ಯ ತೀವ್ರ ಘರ್ಷಣೆ ಉಂಟಾಗುವ ಸಂಭವವಿದೆ. ಸತತವಾಗಿ ವಾಲ್ಮೀಕಿ ಸಮುದಾಯಕ್ಕೆ ಅವಹೇಳನಕಾರಿಯಾಗಿ ಬಿಂಬಿಸುವ ಕೆಲಸ ಮಾಡಿರುತ್ತಾರೆ.
ಮೇಲು-ಕೀಳು ಭಾವನೆಗಳಿಗೆ ಚಾಲನೆ ನೀಡುವುದರ ಮೂಲಕ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನವನ್ನು ಅವಮಾನಿಸಿದ್ದು ಅಲ್ಲದೇ, ಈಗಾಗಲೇ ಈತನು ಸತತವಾಗಿ ಕೆಳ ಸಮುದಾಯಗಳ ಭಾವನೆಗಳಿಗೆ ಘಾಸಿ ಉಂಟುಮಾಡಿರುತ್ತಾರೆ ಎಂದು ದೂರಿದರು.
ಈಗ ಸಾಂಕೇತಿಕವಾಗಿ ನಾಯಕ ಸಮುದಾಯ ಪ್ರತಿಭಟನೆ ಮಾಡುತ್ತಿದೆ. ಒಂದು ವಾರದಲ್ಲಿ ರಮೇಶ್ ರವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳದಿದ್ದರೆ ರಾಜ್ಯವ್ಯಾಪ್ತಿ ಹೋರಾಟ ಕೈಗೆತ್ತಿಕೊಳ್ಳಲಾಗುವುದು.
ದಲಿತ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಯಾವುದೇ ಮೇಲ್ವರ್ಗದ ಜನತೆ ತಳ ವರ್ಗದ ಜನರನ್ನು ಜಾತಿ ಹಿಡಿದು ನಿಂದಿಸಿದರೆ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ. ಇದನ್ನು ಉಪಯೋಗಿಸಿಕೊಂಡು ರಮೇಶ್ ಕತ್ತಿಯವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಲಾಯಿತು.
ಇದನ್ನೂ ಓದಿ: ವಿವಿ ಸಾಗರ ಜಲಾಶಯ ಭರ್ತಿ | 4ನೇ ಸಲ ಕೋಡಿ ಬಿದ್ದು ಹೊಸ ದಾಖಲೆ
ರಮೇಶ ಕತ್ತಿಯವರು ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುತ್ತಾರೆ. ಈತನ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಕೊಳ್ಳಲು ಮನವಿ ಮಾಡಲಾಯಿತು.
ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಮುಖಂಡ ಗೋಪಾಲಸ್ವಾಮಿ ನಾಯಕ, ನಗರಸಭಾ ಸದಸ್ಯ ದೀಪು, ಡಿಸಿಸಿ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಎಸ್.ಟಿ. ಸೆಲ್ ಅಧ್ಯಕ್ಷ ಮಂಜುನಾಥ್, ಅಂಜನಪ್ಪ, ತಿಪ್ಪೇಸ್ವಾಮಿ ಎಟಿಎಸ್, ಲಿಂಗವ್ವನಾಗ್ತಿಹಳ್ಳಿ ತಿಪ್ಪೇಸ್ವಾಮಿ, ತಿಮ್ಮರಾಜು, ಶೇಖರಪ್ಪ, ರಾಜಪ್ಪ ರಮೇಶ್, ಮಂಜಣ್ಣ, ಸಿದ್ದಪ್ಪ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
