CHITRADURGA NEWS | 17 OCTOBER 2024
ಚಿತ್ರದುರ್ಗ: ಸತತ ಮಳೆಯಿಂದ ನೆಂದು ಹೋಗಿದ್ದ ಮನೆಯ ಗೋಡೆ ಕುಸಿದು ಬಿದ್ದು (Rain Damage) ವೃದ್ದೆ ಮೃತಪಟ್ಟಿರುವ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕಿನ ಈಚಲನಾಗೇನಹಳ್ಳಿ ಗ್ರಾಮದ 63 ವರ್ಷದ ವೃದ್ಧೆ ರಂಗಮ್ಮನ ಮೇಲೆ ಒದ್ದೆಯಾಗಿದ್ದ ಗೋಡೆ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆ
ಘಟನಾ ಸ್ಥಳಕ್ಕೆ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ, ಸರ್ಕಾರದಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವಂತೆ ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: 123 ಅಡಿ ದಾಟಿದ ವಿವಿ ಸಾಗರ ಜಲಾಶಯ | ಭರ್ತಿಯಾಗಲು 7 ಅಡಿ ಬಾಕಿ
ತಹಶೀಲ್ದಾರ್ ಡಾ.ನಾಗವೇಣಿ, ಗ್ರಾಮಾಂಗತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗ್ರಾಪಂ ಅಧ್ಯಕ್ಷೆ ನಿರ್ಮಲಾ ಬಸವರಾಜ್, ಸದಸ್ಯ ಸುರೇಶ್, ಮಾಜಿ ಸದಸ್ಯ ಸಿದ್ದಣ್ಣ ಮತ್ತಿತರರಿದ್ದರು.
ಕಳೆದ ಒಂದು ವಾರದಿಂದ ಬಿಟ್ಟು ಬಿಡುದಂತೆ ಸುರಿಯುತ್ತಿರುವ ಮಳೆಯಿಂದಾಗಿ ರಂಗಮ್ಮ ವಾಸಿಸುತ್ತಿದ್ದ ಮನೆಯ ಗೋಡೆ ಒದ್ದೆಯಾಗಿ ಕುಸಿದು ಬಿದ್ದಿದೆ.
ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆಯಲ್ಲಿ ಕ್ಷಿಪ್ರ ಕಾರ್ಯಪಡೆ ರಚಿಸಿ | ಡಿಸಿ ವೆಂಕಟೇಶ್ ಸಲಹೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
