By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Onake Obavva: ಒನಕೆ ಓಬವ್ವ ಜಯಂತಿ | ಛಲವಾದಿ ಸಮುದಾಯದಿಂದ ಕರಪತ್ರ ಬಿಡುಗಡೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Onake Obavva: ಒನಕೆ ಓಬವ್ವ ಜಯಂತಿ | ಛಲವಾದಿ ಸಮುದಾಯದಿಂದ ಕರಪತ್ರ ಬಿಡುಗಡೆ

ಮುಖ್ಯ ಸುದ್ದಿ

Onake Obavva: ಒನಕೆ ಓಬವ್ವ ಜಯಂತಿ | ಛಲವಾದಿ ಸಮುದಾಯದಿಂದ ಕರಪತ್ರ ಬಿಡುಗಡೆ

News Desk Chitradurga News
Last updated: 4 November 2024 15:57
News Desk Chitradurga News
8 months ago
Share
ಒನಕೆ ಓಬವ್ವ ಜಯಂತಿ | ಛಲವಾದಿ ಸಮುದಾಯದಿಂದ ಕರಪತ್ರ ಬಿಡುಗಡೆ
ಒನಕೆ ಓಬವ್ವ ಜಯಂತಿ | ಛಲವಾದಿ ಸಮುದಾಯದಿಂದ ಕರಪತ್ರ ಬಿಡುಗಡೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 NOVEMBER 2024

ಚಿತ್ರದುರ್ಗ: ವೀರವನಿತೆ ಒನಕೆ ಓಬವ್ವ(Onake Obavva) ಜಯಂತಿಯನ್ನು ನವೆಂಬರ್ 11 ರಂದು ಅದ್ದೂರಿಯಾಗಿ ಆಚರಿಸುವ ಕುರಿತು ಛಲವಾದಿ ಸಮುದಾಯದ ಮುಖಂಡರು ಭಾನುವಾರ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಿ ಕರಪತ್ರ ಬಿಡುಗಡೆ(Leaflet release)ಗೊಳಿಸಿದರು.

ಕ್ಲಿಕ್ ಮಾಡಿ ಓದಿ: ವಕ್ಫ್ ಹೆಸರಿನಲ್ಲಿ ಅಕ್ರಮ ಜಮೀನು ಒತ್ತುವರಿ | ಹೋರಾಟಕ್ಕೆ ಬಿಜೆಪಿ ನಿರ್ಧಾರ | ಕೆ.ಎಸ್.ನವೀನ್ 

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಸಿ.ನಿರಂಜನಮೂರ್ತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸಂಯುಕ್ತಾಶ್ರಯದಲ್ಲಿ ನಡೆಯುವ ಒನಕೆ ಓಬವ್ವ ಜಯಂತಿಗೆ ಛಲವಾದಿ ಜನಾಂಗದವರೆಲ್ಲಾ ಸೇರಿ ಕೈಜೋಡಿಸಿ ಊರಿನ ಹಬ್ಬದ ರೀತಿಯಲ್ಲಿ ಆಚರಿಸಿ ಒನಕೆ ಓಬವ್ವಳ ಸಾಹಸ, ದಿಟ್ಟತನವನ್ನು ಮುಂದಿನ ಪೀಳಿಗೆಗೆ ಪರಿಚಯಿಸೋಣ ಎಂದರು.

ಅಂದು ಬೆಳಿಗ್ಗೆ 8-30 ಕ್ಕೆ ಹೊಳಲ್ಕೆರೆ ರಸ್ತೆಯಲ್ಲಿರುವ ಒನಕೆ ಓಬವ್ವ ದೇವಸ್ಥಾನದಿಂದ ಪುಷ್ಪಾಲಂಕೃತ ಸಾರೋಟಿನಲ್ಲಿ ಓಬವ್ವಳ ಭಾವಚಿತ್ರದೊಂದಿಗೆ ವಿವಿಧ ಕಲಾತಂಡಗಳ ಮೆರವಣಿಗೆ ಹೊರಟು ರಂಗಮAದಿರ ತಲುಪಲಿದ್ದು, 11 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ಛಲವಾದಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಛಲವಾದಿ ಜನಾಂಗದ ಮಂಜುನಾಥ್ ಮಾತನಾಡಿ, ಒಬವ್ವಳ ಜಯಂತಿ ಮೂಲಕ ಛಲವಾದಿ ಜನಾಂಗದವರು ಒಂದೆಡೆ ಸೇರಿ ಸಂಘಟನೆಯಾಗೋಣ. ಇದರಿಂದ ಮುಂದಿನ ಪೀಳಿಗೆಗೆ ಪರಂಪರೆಯನ್ನು ಉಳಿಸಿದಂತಾಗುತ್ತದೆಂದು ಸಲಹೆ ನೀಡಿದರು.

ಕ್ಲಿಕ್ ಮಾಡಿ ಓದಿ: ಇಸ್ಪೀಟ್ ಆಡುತ್ತಿದ್ದವರ ಬಂಧನ | ಚಿಕ್ಕಜಾಜೂರು ಪೊಲೀಸರ ಕಾರ್ಯಾಚರಣೆ

ಕೃಷಿ ಇಲಾಖೆ ನಿವೃತ್ತ ಉಪ ನಿರ್ದೇಶಕ ಛಲವಾದಿ ಸಮಾಜದ ವೆಂಕಟೇಶ್ ಮಾತನಾಡಿ, ಒನಕೆ ಓಬವ್ವ ಜಯಂತಿಯಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸನ್ಮಾನಿಸೋಣ ಎಂದು ಹೇಳಿದರು.

ಪಿ.ವಿ.ಎಸ್.ಆಸ್ಪತ್ರೆಯ ಡಾ.ಪಿ.ವಿ.ಶ್ರೀಧರಮೂರ್ತಿ, ನ್ಯಾಯವಾದಿಗಳಾದ ಹೆಚ್.ಅಣ್ಣಪ್ಪಸ್ವಾಮಿ, ಎನ್.ಶಶಾಂಕ್, ಮುಖಂಡರಾದ ಬಾಳೆಕಾಯಿ ಶ್ರೀನಿವಾಸ್, ಎಸ್.ಎನ್.ರವಿಕುಮಾರ್, ನವೀನ್, ಶಿಕ್ಷಣ ಇಲಾಖೆಯ ನಾಗರಾಜ್, ಜಯರಾಂ ಕೆ.ಪರಮೇಶ್ವರಪ್ಪ ಪೂಜಾರ್, ಪ್ರದೀಪ್, ಸೋಮಣ್ಣ, ಹನುಮಂತಪ್ಪ, ಈರಜ್ಜನಹಟ್ಟಿ ತಿಪ್ಪೇಸ್ವಾಮಿ, ಜಗ್ಗಣ್ಣ, ರಂಗಸ್ವಾಮಿ ಮತ್ತಿತರರಿದ್ದರು.

ಕ್ಲಿಕ್ ಮಾಡಿ ಓದಿ: ಮದ್ದೇರಿನಲ್ಲಿ ದೇವಸ್ಥಾನ ಉದ್ಘಾಟನೆ | ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chalawadi communityChitradurgaChitradurga UpdatesjayantiKannada Latest NewsKannada NewsLeaflet releaseOnake Obavvaಒನಕೆ ಓಬವ್ವಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕರಪತ್ರ ಬಿಡುಗಡೆಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಛಲವಾದಿ ಸಮುದಾಯಜಯಂತಿ
Share This Article
Facebook Email Print
Previous Article ಚಿತ್ರದುರ್ಗ ನಗರಸಭೆ Chitradurga: ಚಿತ್ರದುರ್ಗ-ಚಳ್ಳಕೆರೆ ನಗರಸಭೆ ಉಪಚುನಾವಣೆ | ತೆರವಾದ ಸ್ಥಾನಗಳಿಗೆ ಮೀಸಲಾತಿ ನಿಗಧಿ
Next Article VaniVilasa sagara dam VaniVilasa Dam: ವಿವಿ ಸಾಗರಕ್ಕೆ ಒಳಹರಿವು ಬಂದ್ | ಎಷ್ಟು ಅಡಿವರೆಗೆ ಬಂತು ನೀರು
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up