By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: SSLC ಯಲ್ಲಿ 625ಕ್ಕೆ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ಬಹುಮಾನ | 2 ಕೋಟಿ ಮೀಸಲು | ಶಾಸಕ ಎಂ.ಚಂದ್ರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » SSLC ಯಲ್ಲಿ 625ಕ್ಕೆ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ಬಹುಮಾನ | 2 ಕೋಟಿ ಮೀಸಲು | ಶಾಸಕ ಎಂ.ಚಂದ್ರಪ್ಪ

ಹೊಳಲ್ಕೆರೆ

SSLC ಯಲ್ಲಿ 625ಕ್ಕೆ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ಬಹುಮಾನ | 2 ಕೋಟಿ ಮೀಸಲು | ಶಾಸಕ ಎಂ.ಚಂದ್ರಪ್ಪ

News Desk Chitradurga News
Last updated: 9 June 2025 21:52
News Desk Chitradurga News
2 weeks ago
Share
ಸರ್ಕಾರದ ಸೌಲಭ್ಯಗಳ ವಿತರಣೆ ಸನ್ಮಾನ ಕಾರ್ಯಕ್ರಮ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 JUNE 2025

ಹೊಳಲ್ಕೆರೆ: 10ನೇ ತರಗತಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ತಲಾ ಒಂದು ಲಕ್ಷ ರೂ.ಗಳ ಬಹುಮಾನ ನೀಡುತ್ತೇನೆ. ತಾಲ್ಲೂಕಿನಲ್ಲಿ ಕನಿಷ್ಠ 200 ಮಕ್ಕಳಾದರು 625 ಅಂಕಗಳನ್ನ ಪಡೆಯಬೇಕು. ಅದಕ್ಕಾಗಿ ಎರಡು ಕೋಟಿ ರೂ.ಗಳನ್ನು ಮೀಸಲು ಇಡುತ್ತೇನೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.

Also Read: ತುಸು ಇಳಿಕೆ ಕಂಡ ರಾಶಿ ಅಡಿಕೆ ಧಾರಣೆ

ಪಟ್ಟಣದ ಸಂವಿಧಾನಸೌಧದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಎರಡು ವರ್ಷ ಶಿಕ್ಷಣದಲ್ಲಿ ಹರುಷ, 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ಕಾರ್ಯಾಗಾರ ಹಾಗೂ ಸರ್ಕಾರಿ ಸೌಲಭ್ಯಗಳ ವಿತರಣೆ ಮತ್ತು 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯಬೇಕಾದರೆ ಈಗಿನಿಂದಲೇ ಕಷ್ಟಪಟ್ಟು ಓದಬೇಕು. ತಂದೆ-ತಾಯಿಗಳು ನಿಮ್ಮ ಮೇಲೆ ನಿರೀಕ್ಷೆಯಿಟ್ಟುಕೊಂಡಿರುತ್ತಾರೆ.

ಗುರು-ಹಿರಿಯರಿಗೆ ಕೀರ್ತಿ ತರುವ ಜವಾಬ್ದಾರಿ ನಿಮ್ಮ ಮೇಲಿದೆ. ನೀವು ಓದುವ ಶಾಲೆಗಳಿಗೆ ದಿನಪತ್ರಿಕೆಗಳನ್ನು ಸರಬರಾಜು ಮಾಡಲಾಗುವುದು.

ಪತ್ರಿಕೆಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಿ. ಗುಣ ಮಟ್ಟದ ಶಾಲಾ-ಕಾಲೇಜುಗಳನ್ನು ಕಟ್ಟಿಸಿ ನುರಿತ ಶಿಕ್ಷಕರುಗಳನ್ನು ನೇಮಿಸಲಾಗಿದೆ. ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಶೂ, ಸಾಕ್ಸ್ , ಮೊಟ್ಟೆ, ಬಾಳೆಹಣ್ಣು ನೀಡಲಾಗುತ್ತಿದೆ.

Also Read: ಮುಂಗಾರು ಪೂರ್ವದಲ್ಲಿ ಕೃಷಿಕರಿಗೆ ಖುಷಿ ಕೊಟ್ಟ ಮಳೆರಾಯ ನಾಪತ್ತೆ 

ಸರ್ಕಾರದಿಂದ ಎಲ್ಲಾ ಸೌಲಭ್ಯಗಳು ಸಿಗುತ್ತಿವೆ. ಯಾವುದೇ ಸೌಲತ್ತು ಇಲ್ಲದ ಕಷ್ಟದ ಕಾಲದಲ್ಲಿ ನಾವುಗಳು ಓದಿದ್ದೇವೆ. ನಿಮಗೆ ಎಲ್ಲಾ ರೀತಿಯ ಅನುಕೂಲಗಳಿವೆ. ಸದುಪಯೋಗಪಡಿಸಿಕೊಳ್ಳಿ. ಯಾವುದೇ ಒಂದು ದೇಶ ಅಭಿವೃದ್ದಿಯಾಗಬೇಕಾದರೆ ವಿದ್ಯಾವಂತರ ಸಂಖ್ಯೆ ಜಾಸ್ತಿಯಾಗಬೇಕು. ಹಾಗಾಗಿ ಕಷ್ಟಪಟ್ಟು ಓದಿ ಪಿ.ಯು.ಸಿ. ನಂತರ ತಾಂತ್ರಿಕ ಶಿಕ್ಷಣಕ್ಕೆ ಸೀಟು ಗಳಿಸುವುದು ಸುಲಭವಲ್ಲ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷೆ ನಾಗರತ್ನ ವೇದಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಬಿಆರ್ಸಿ ಸುರೇಂದ್ರನಾಥ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕೇಶ್ ಮತ್ತು ವಿದ್ಯಾರ್ಥಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesexamKannada Latest NewsKannada NewsMLA M. ChandrappaPrizeSSLCStudentsಎಸ್.ಎಸ್.ಎಲ್.ಸಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪರೀಕ್ಷೆಬಹುಮಾನವಿದ್ಯಾರ್ಥಿಗಳುಶಾಸಕ ಎಂ.ಚಂದ್ರಪ್ಪ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಅಡೆತಡೆಗಳು
Next Article ಸೇಬು ಡಾರ್ಕ್‍ ಸರ್ಕಲ್‍ಗಳನ್ನು ನಿವಾರಿಸುತ್ತದೆಯೇ?
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up