CHITRADURGA NEWS | 12 MAY 2026
ಚಿತ್ರದುರ್ಗ: ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಲು ಸಾಧ್ಯ ಎಂದು ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಸ್.ಸಂದೀಪ್ ತಿಳಿಸಿದರು.
ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಪಂ ಸಿಇಓ ಖಡಕ್ ಸೂಚನೆ
ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ, ಮದರ್ ಥೆರೆಸಾ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ಮಹಾರಾಣಿ ಕಾಲೇಜಿನ ವಾಲ್ಮೀಕಿ ಸಭಾಂಗಣದಲ್ಲಿ ಮಂಗಳವಾರ ನಡೆದ ಶುಶ್ರೂಷಕರ ದಿನಾಚರಣೆ ಹಾಗೂ 34 ನೇ ಬ್ಯಾಚ್ನ ವಿದ್ಯಾರ್ಥಿಗಳಿಂದ ಜ್ಯೋತಿ ಬೆಳಗಿಸುವ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸೇವಾ ಮನೋಭಾವನೆಯಿಂದ ಡಿ.ಬೋರಪ್ಪನವರು 58 ವರ್ಷಗಳ ಹಿಂದೆ ಕಟ್ಟಿ ಬೆಳೆಸಿದ ವಿದ್ಯಾಸಂಸ್ಥೆಯನ್ನು ಅವರ ಆಸೆ ಕನಸಿನಂತೆ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಬಹುತೇಕ ಸಂಸ್ಥೆಗಳು ಗ್ರಾಮೀಣ ಭಾಗದಲ್ಲಿವೆ. ಕೆಲವು ಕಡೆ ಸಂಚಾರಿ ವ್ಯವಸ್ಥೆಯೂ ಇಲ್ಲ. ಅಂತಹ ಕಡೆ ಮಕ್ಕಳಿಗೆ ಶಿಕ್ಷಣ ಕೊಡಬೇಕೆಂಬುದು ನಮ್ಮ ಉದ್ದೇಶ. ಸಾವಿರಾರು ವಿದ್ಯಾರ್ಥಿಗಳಿಗೆ ಈ ಸಂಸ್ಥೆ ವಿದ್ಯಾದಾನ ಮಾಡಿದೆ.
ಮುಂದಿನ ದಿನಗಳಲ್ಲಿ ಬಿ.ಎಸ್ಸಿ. ನರ್ಸಿಂಗ್ ಹಾಗೂ ಉನ್ನತ ಕೋರ್ಸ್ಗಳನ್ನು ಆರಂಭಿಸುವ ಪ್ರಯತ್ನ ಮಾಡುತ್ತಿದ್ದೇವೆ. ಜೊತೆಗೆ ಉದ್ಯೋಗಾವಕಾಶದ ಶಿಕ್ಷಣವನ್ನು ನೀಡುವುದು ನಮ್ಮ ಚಿಂತನೆ ಎಂದು ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.12 | ಹತ್ತಿ ರೇಟ್ ಎಷ್ಟಿದೆ?
ವೇದಾಂತ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ತೇಜಸ್ವಿ ಎಚ್.ಟಿ. ಮಾತನಾಡಿ, ವೈದ್ಯರುಗಳಿಗಿಂತಲೂ ನರ್ಸ್ಗಳು ರೋಗಿಗಳ ಹತ್ತಿರ ಹೆಚ್ಚು ಸಮಯವಿರುತ್ತಾರೆ. ನರ್ಸಿಂಗ್ ವೃತ್ತಿ ಅತ್ಯಂತ ಪವಿತ್ರವಾದುದು. ಹಾಗಾಗಿ ನಿಮ್ಮ ವೃತ್ತಿಯಲ್ಲಿ ಸಬಲೀಕರಣಗೊಂಡಾಗ ರೋಗಿಗಳ ಜೀವ ಉಳಿಸಲು ಸಾಧ್ಯ. ನರ್ಸಿಂಗ್ ಶಿಕ್ಷಣದ ಜೊತೆ ನೈಪುಣ್ಯತೆ ಅಳವಡಿಸಿಕೊಂಡಾಗ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಫ್ಲಾರೆಂನ್ಸ್ ನೈಟಿಂಗೇಲ್ ಅತ್ಯಂತ ಶ್ರೀಮಂತ ಕುಟುಂಬದಲ್ಲಿ ಜನಿಸಿದವರಾದರು ಜೀವನದುದ್ದಕ್ಕೂ ಸೇವೆಯಲ್ಲಿಯೇ ತೃಪ್ತಿ ಕಂಡುಕೊಂಡರು. ಆಡಂಭರದ ಜೀವನ ಮಾಡಲಿಲ್ಲ. ಕಠಿಣವಾದ ದಾರಿಯನ್ನು ಆಯ್ಕೆ ಮಾಡಿಕೊಂಡರು. ನರ್ಸ್ಗಳು ಸಬಲೀಕರಣಗೊಳ್ಳಬೇಕಾಗಿರುವುದರಿಂದ ಹೆಚ್ಚಿನ ಅಧಿಕಾರ ನೀಡಬೇಕು. ಇದರಿಂದ ರೋಗಿಗಳ ಪ್ರಾಣ ಉಳಿಸಬಹುದು ಎಂದು ನುಡಿದರು.
ಮದರ್ ಥೆರೆಸಾ ಸ್ಕೂಲ್ ಆಫ್ ನರ್ಸಿಂಗ್ನ ಪ್ರಾಂಶುಪಾಲರಾದ ಮಂಜುಳ ಆರ್. ಮಾತನಾಡುತ್ತ ದಿನದ 24 ಗಂಟೆಯೂ ರೋಗಿಗಳ ಸೇವೆ ಮಾಡುವ ಅವಕಾಶ ನರ್ಸ್ಗಳಿಗಿದೆ. ವೃತ್ತಿ, ಸಾಂಸಾರಿಕ, ವೈಯಕ್ತಿಕ ಜೀವನದಲ್ಲಿ ಏನೆ ಅಡೆತಡೆಗಳು ಎದುರಾದರು ಎದೆಗುಂದದೆ ರೋಗಿಗಳ ಸೇವೆ ಮಾಡಿ. ಆಗ ವೃತ್ತಿಯಲ್ಲಿ ನಿಮಗೆ ತೃಪ್ತಿ ಸಿಗುತ್ತದೆ. ವಿಧೇಯತೆ ಮುಖ್ಯ. ಶಿಸ್ತಿಗೆ ಮತ್ತೊಂದು ಹೆಸರು ಮದರ್ ಥೆರೆಸಾ ಎಂದು ಸ್ಮರಿಸಿದರು.
ನರ್ಸಿಂಗ್ ಸ್ಕೂಲ್ನ ಹಿರಿಯ ಉಪನ್ಯಾಸಕಿ ವಿ.ಎಸ್.ಪೋತದಾರ್ ಮಾತನಾಡಿದರು. ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಎಸ್.ಸಾಗರ್ ವೇದಿಕೆಯಲ್ಲಿದ್ದರು.
ಇದನ್ನೂ ಓದಿ: ಜಿಟಿಟಿಸಿ ತರಬೇತಿ ಕೇಂದ್ರಕ್ಕೆ ಪಿ.ರಘು ಭೇಟಿ | ಡಿಪ್ಲೊಮಾ ಕೋರ್ಸ್ಗಳಿಂದ ಉಜ್ವಲ ಭವಿಷ್ಯ
ಮದಕರಿ ವಿದ್ಯಾಸಂಸ್ಥೆಯ ಕಾರ್ಯನಿರ್ವಾಹಕ ಮಹಾಂತೇಶ್ ಹಾಗೂ ಉಪನ್ಯಾಸಕರುಗಳು ಸಮಾರಂಭದಲ್ಲಿ ಹಾಜರಿದ್ದರು.
2025-26 ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
