By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬ್ಯಾಂಕ್‍ಗಳು ಬಡವರ ಹೆಬ್ಬಾಗಿಲಾದಾಗ ಮಾತ್ರ ದೇಶದಲ್ಲಿ ಪರಿವರ್ತನೆಯಾಗಲು ಸಾಧ್ಯ| ಎ.ನಾರಾಯಣಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬ್ಯಾಂಕ್‍ಗಳು ಬಡವರ ಹೆಬ್ಬಾಗಿಲಾದಾಗ ಮಾತ್ರ ದೇಶದಲ್ಲಿ ಪರಿವರ್ತನೆಯಾಗಲು ಸಾಧ್ಯ| ಎ.ನಾರಾಯಣಸ್ವಾಮಿ

ಮುಖ್ಯ ಸುದ್ದಿ

ಬ್ಯಾಂಕ್‍ಗಳು ಬಡವರ ಹೆಬ್ಬಾಗಿಲಾದಾಗ ಮಾತ್ರ ದೇಶದಲ್ಲಿ ಪರಿವರ್ತನೆಯಾಗಲು ಸಾಧ್ಯ| ಎ.ನಾರಾಯಣಸ್ವಾಮಿ

News Desk Chitradurga News
Last updated: 14 March 2024 17:19
News Desk Chitradurga News
1 year ago
Share
ಪಿಎಂ-ಸೂರಜ್ ನ್ಯಾಷನಲ್ ಪೋರ್ಟಲ್‍ನ ಉದ್ಘಾಟನೆ ಕಾರ್ಯಕ್ರಮ
ಪಿಎಂ-ಸೂರಜ್ ನ್ಯಾಷನಲ್ ಪೋರ್ಟಲ್‍ನ ಉದ್ಘಾಟನೆ ಕಾರ್ಯಕ್ರಮ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 MARCH 2024

ಚಿತ್ರದುರ್ಗ: ಬಡವರು, ಶೋಷಿತ ವರ್ಗಗಳ ಆರ್ಥಿಕಾಭಿವೃದ್ಧಿ ಚಟುವಟಿಕೆಗಳಿಗಾಗಿ ಸಾಲ-ಸೌಲಭ್ಯ ನೀಡುವ ನಿಟ್ಟಿನಲ್ಲಿ ಬ್ಯಾಂಕ್‍ಗಳು ಬಡವರ ಹೆಬ್ಬಾಗಿಲಾಗಬೇಕು. ಬ್ಯಾಂಕ್‍ಗಳು ಬಡವರ ಹೆಬ್ಬಾಗಿಲಾದಾಗ ಮಾತ್ರ ದೇಶದಲ್ಲಿ ಪರಿವರ್ತನೆಯಾಗಲು ಸಾಧ್ಯ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಹಾಗೂ ಸಂಸದರಾದ ಎ.ನಾರಾಯಣಸ್ವಾಮಿ ಅವರು ಹೇಳಿದರು.

ಇದನ್ನೂ ಓದಿ : 49 ಸಾವಿರದ ಗಡಿ ತಲುಪಿದ ಅಡಿಕೆ ಧಾರಣೆ

ನಗರದ ತರಾಸು ರಂಗಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಿಎಂ-ಸೂರಜ್ ನ್ಯಾಷನಲ್ ಪೋರ್ಟಲ್‍ನ ಉದ್ಘಾಟನೆ ಹಾಗೂ ಗ್ರಾಹಕ ಸಂಪರ್ಕ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಹಕ ಸಂಪರ್ಕ ಮೇಳದಂತಹ ಕಾರ್ಯಕ್ರಮಗಳು ನಿಂತ ನೀರಾಗಬಾರದು. ತೆರಿಗೆ ಹಣವನ್ನು ಬಡವರ ಮನೆ ಬಾಗಿಲಿಗೆ ಕೊಂಡೊಯ್ಯುವ ಸಂಕಲ್ಪ ಎಲ್ಲ ಸರ್ಕಾರಗಳು, ಜನಪ್ರತಿನಿಧಿಗಳು ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ : ಬಣ್ಣ ಹಾಕಿದ ಗೋಬಿ ಮಂಚೂರಿಗೆ ನಿಷೇಧ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗಗಳು, ಸಫಾಯಿ ಕರ್ಮಚಾರಿಗಳು ಸೇರಿದಂತೆ ಎಲ್ಲ ವರ್ಗಗಳ ಸಮುದಾಯಕ್ಕೆ ಅವರ ಸ್ವಂತ ವ್ಯವಹಾರಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಆರ್ಥಿಕ ಸಹಾಯವನ್ನು ವಿವಿಧ ರಾಜ್ಯಗಳ ಆಯಾ ಬ್ಯಾಂಕ್‍ಗಳ ಮೂಲಕ ಸಾಲ ವಿತರಣೆ ಮಾಡುವ ಪಿಎಂ-ಸೂರಜ್ ಪೋರ್ಟಲ್‍ನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿ ರಾಷ್ಟ್ರದ ಜನತೆಗೆ ಕೇಂದ್ರ ಸರ್ಕಾರದಿಂದ ಶೋಷಿತ ವರ್ಗಕ್ಕೆ ಹಾಗೂ ದಲಿತರಿಗೆ ಇಂದು ರೂ.660 ಕೋಟಿ ಅನುದಾನವನ್ನು ದೇಶದ ಒಟ್ಟು 01 ಲಕ್ಷ ಮಂದಿಗೆ ಆರ್ಥಿಕ ಸಹಾಯದ ಸಾಲಸೌಲಭ್ಯ ವಿತರಣೆ ಮಾಡಿದ್ದಾರೆ ಎಂದು ಹೇಳಿದರು.

ಸಾಲ-ಸೌಲಭ್ಯದ ಮಂಜೂರಾತಿ ಆದೇಶ ಪ್ರತಿ ಸಾಂಕೇತಿಕವಾಗಿ ವಿತರಣೆ
ಸಾಲ-ಸೌಲಭ್ಯದ ಮಂಜೂರಾತಿ ಆದೇಶ ಪ್ರತಿ ಸಾಂಕೇತಿಕವಾಗಿ ವಿತರಣೆ

ಇದನ್ನೂ ಓದಿ : ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌

ಬಡವರಿಗಾಗಿ ಕೆಲಸ ಮಾಡುವುದು, ಬಡವರ ಜತೆ ಇರುವುದು ನನಗೆ ಸ್ವರ್ಗ ಇದ್ದಂತೆ ಎಂದು ಹೇಳಿದ ಸಚಿವರು, ಅಧಿಕಾರಿಗಳು ಬಡವರಿಗಾಗಿ ಕೊಡುವ ಯೋಜನೆಗಳನ್ನು ಆದ್ಯತೆ ಮೇರೆಗೆ ತಲುಪಿಸುವ ಕಾರ್ಯ ಮಾಡಬೇಕು. ಬಡವರ ದರ್ಶನ ಅಧಿಕಾರಿಗಳಿಗೆ ಪ್ರಥಮಾಧ್ಯತೆಯಾಗಬೇಕು. ಆಗ ಮಾತ್ರ ದೇಶದಲ್ಲಿ ಪರಿವರ್ತನೆಯಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಯ ಫಲಾನುಭವಿಗಳಿಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ವತಿಯಿಂದ ಸಾಲ-ಸೌಲಭ್ಯದ ಮಂಜೂರಾತಿ ಆದೇಶ ಪ್ರತಿ ಸಾಂಕೇತಿಕವಾಗಿ ವಿತರಣೆ ಮಾಡಿದರು.

ಇದನ್ನೂ ಓದಿ : ಚುನಾವಣೆ ಹೊಸ್ತಿಲಲ್ಲಿ ಸರ್ಕಾರಿ ನೌಕರರಿಗೆ ಬಂಪರ್‌

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಬಳ್ಳಾರಿ ಕೇಂದ್ರ ಕಚೇರಿ ಜನರಲ್ ಮ್ಯಾನೇಜನರ್ ಭಾಗ್ಯರೇಖಾ, ಎನ್‍ಎಸ್‍ಸಿಎಫ್‍ಡಿಸಿ ಸಿಜಿಎಂ ರಮೇಶ್‍ರಾವ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ತಿಪ್ಪೇಶ್, ಎನ್‍ಐಸಿ ಅಧಿಕಾರಿ ಕೆಆರ್‍ಕೆ ಶಾಸ್ತ್ರಿ, ದಾವಣಗೆರೆಯ ಕೆನರಾ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಕೆ.ಶ್ರೀನಿವಾಸ್, ಗಣ್ಯರಾದ ಮುರುಳಿ, ಮೀಸೆ ಮಹಲಿಂಗಪ್ಪ ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:A. NarayanaswamyBankChitradurgaLoan-facilitythe poorಎ.ನಾರಾಯಣಸ್ವಾಮಿಚಿತ್ರದುರ್ಗಬಡವರುಬ್ಯಾಂಕ್ಸಾಲ-ಸೌಲಭ್ಯ
Share This Article
Facebook Email Print
Previous Article ಗಾಯಿತ್ರಿ ಸಿದ್ದೇಶ್ವರ ದುರ್ಗದ ಸೊಸೆ ದಾವಣಗೆರೆ ಬಿಜೆಪಿ ಅಭ್ಯರ್ಥಿ | ಶಕ್ತಿಕೇಂದ್ರ ಭೀಮಸಮುದ್ರಕ್ಕೆ ಮತ್ತೊಂದು ಹಿರಿಮೆ
Next Article ಈ.ವಿಶಾಲ ರಸಾಯನಶಾಸ್ತ್ರದಲ್ಲಿ ಪಿಎಚ್‍ಡಿ ಪಡೆದ ಈ.ವಿಶಾಲ
Leave a Comment

Leave a Reply Cancel reply

Your email address will not be published. Required fields are marked *

ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up