By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಶೇಷ ಅತ್ತೆ-ಸೊಸೆಯರ ಕಾರ್ಯಕ್ರಮ ಮತ್ತು ಕುಟುಂಬ ಕಲ್ಯಾಣ ಯೋಜನೆ ಆಪ್ತ ಸಮಾಲೋಚನಾ ಶಿಬಿರ
    ತಾಯಿ-ಮಗುವಿನ ಆರೋಗ್ಯಕ್ಕೆ ಮೂರು ವರ್ಷಗಳ ಅಂತರ ಅಗತ್ಯ | ಬಿ.ಮೂಗಪ್ಪ
    5 hours ago
    ನೈಸರ್ಗಿಕ ಕೃಷಿ – ಸಾವಯವ ಕೃಷಿ ಕುರಿತು ತರಬೇತಿ ಕಾರ್ಯಾಗಾರ
    ಸುಸ್ಥಿರ ಕೃಷಿಗೆ ಸಾವಯವ ಅತ್ಯಗತ್ಯ | ಆರ್.ರಜನೀಕಾಂತ್
    5 hours ago
    DRDO ಕೇಂದ್ರಕ್ಕೆ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಭೇಟಿ
    DRDO ಕೇಂದ್ರಕ್ಕೆ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಭೇಟಿ 
    5 hours ago
    ವೀರಶೈವ ಸಮಾಜದಿಂದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು
    ವಿದ್ಯಾರ್ಥಿಗಳ ಜೀವನಕ್ಕೆ ಶಿಕ್ಷಣ ಮತ್ತು ಸಂಸ್ಕಾರ ಅತ್ಯಗತ್ಯ | ಶ್ರೀ ಬಸವಪ್ರಭು ಸ್ವಾಮೀಜಿ
    18 hours ago
    ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ
    ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ 
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 days ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    19 hours ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    7 days ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 15 | ಉದ್ಯೋಗಿಗಳಿಗೆ ಬಡ್ತಿ, ಆರ್ಥಿಕವಾಗಿ ಅನುಕೂಲಕರ ವಾತಾವರಣ
    8 hours ago
    today bhavishya
    ದಿನ ಭವಿಷ್ಯ | ಜುಲೈ 14 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ದೂರ ಪ್ರಯಾಣದಲ್ಲಿ ಎಚ್ಚರ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 13 | ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ, ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ
    2 days ago
    today bhavishya
    ದಿನ ಭವಿಷ್ಯ | ಜುಲೈ 12 | ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು, ದೂರ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಜುಲೈ 11 | ಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    17 minutes ago
    ಮಾರುಕಟ್ಟೆ ಧಾರಣೆ | ಜುಲೈ 14 | ಹತ್ತಿ ರೇಟ್ ಎಷ್ಟಿದೆ?
    22 hours ago
    ಮಾರುಕಟ್ಟೆ ಧಾರಣೆ | ಜುಲೈ 13 | ಮೆಕ್ಕೆಜೋಳ ರೇಟ್…
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ | ಜುಲೈ 10 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 days ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    4 days ago
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    2 weeks ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    2 weeks ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    foundation
    ನೀವು ಹಚ್ಚಿದ ಫೌಂಡೇಶನ್ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಫಾಲೋ ಮಾಡಿ
    7 hours ago
    vegetables
    ಮಳೆಗಾಲದಲ್ಲಿ ಈ ತರಕಾರಿಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ
    8 hours ago
    pigmentation problems
    ಪಿಗ್ಮೆಂಟೇಶನ್ ಸಮಸ್ಯೆ ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ತಿಳಿಬೇಕಾ?
    1 day ago
    kidney
    ನಿಮ್ಮ ಕಿಡ್ನಿ ಆರೋಗ್ಯವಾಗಿಡಲು ಈ ಬೀಜಗಳನ್ನು ಸೇವಿಸಿ
    1 day ago
    pregnant women to eat gourd
    ಗರ್ಭಿಣಿಯರು ಸೋರೆಕಾಯಿ ತಿನ್ನುವುದು ಸುರಕ್ಷಿತವೇ? 
    2 days ago
Reading: ಸುಸ್ಥಿರ ಕೃಷಿಗೆ ಸಾವಯವ ಅತ್ಯಗತ್ಯ | ಆರ್.ರಜನೀಕಾಂತ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸುಸ್ಥಿರ ಕೃಷಿಗೆ ಸಾವಯವ ಅತ್ಯಗತ್ಯ | ಆರ್.ರಜನೀಕಾಂತ್

News Desk Chitradurga News
Last updated: 15 July 2026 09:59
News Desk Chitradurga News
5 hours ago
Share
ನೈಸರ್ಗಿಕ ಕೃಷಿ – ಸಾವಯವ ಕೃಷಿ ಕುರಿತು ತರಬೇತಿ ಕಾರ್ಯಾಗಾರ
ನೈಸರ್ಗಿಕ ಕೃಷಿ – ಸಾವಯವ ಕೃಷಿ ಕುರಿತು ತರಬೇತಿ ಕಾರ್ಯಾಗಾರ
SHARE

CHITRADURGA NEWS | 15 JULY 2026

ಚಿತ್ರದುರ್ಗ: ಮುಂದಿನ ಪೀಳಿಗೆಗೆ ಫಲವತ್ತಾದ ಜೀವಂತ ಮಣ್ಣನ್ನು ಉಳಿಸಿ, ಕಡಿಮೆ ವೆಚ್ಚದಲ್ಲಿ ಸುಸ್ಥಿರ ಇಳುವರಿ ಪಡೆಯಲು ರೈತರು ನೈಸರ್ಗಿಕ ಹಾಗೂ ಸಾವಯವ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಹೇಳಿದರು.

ಇದನ್ನೂ ಓದಿ: DRDO ಕೇಂದ್ರಕ್ಕೆ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಭೇಟಿ 

ಹಿರಿಯೂರು ತಾಲ್ಲೂಕಿನ ಇಲ್ಲಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜುಲೈ 9 ರಿಂದ 11ರವರೆಗೆ ರೈತರಿಗಾಗಿ ಆಯೋಜಿಸಲಾಗಿದ್ದ ನೈಸರ್ಗಿಕ ಕೃಷಿ – ಸಾವಯವ ಕೃಷಿ ಕುರಿತ ಮೂರು ದಿನಗಳ ಉಚಿತ ವಸತಿಯುಕ್ತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮಣ್ಣು ಪರೀಕ್ಷೆಯ ಫಲಿತಾಂಶ ಆಧರಿಸದೆ ರಾಸಾಯನಿಕ ಗೊಬ್ಬರಗಳು, ಶಿಫಾರಸ್ಸಿಗಿಂತ ಹೆಚ್ಚಿನ ಪೀಡೆನಾಶಕಗಳು ಹಾಗೂ ಕಳೆನಾಶಕಗಳನ್ನು ಅತಿಯಾಗಿ ಬಳಸುವುದರಿಂದ ಮಣ್ಣಿನಲ್ಲಿರುವ ಉಪಯುಕ್ತ ಸೂಕ್ಷ್ಮಜೀವಿಗಳು ನಾಶವಾಗುತ್ತಿವೆ. ಇದರಿಂದ ಮಣ್ಣಿನ ರಚನೆ ಮತ್ತು ಫಲವತ್ತತೆ ಸಂಪೂರ್ಣವಾಗಿ ಕುಸಿಯುತ್ತಿದ್ದು, ಕೃಷಿ ವೆಚ್ಚ ಹೆಚ್ಚಾಗುತ್ತಿದೆ. 

ಇದು ಮಾನವನ ಆರೋಗ್ಯ ಹಾಗೂ ಪರಿಸರದ ಮೇಲೂ ಗಂಭೀರ ದುಷ್ಪರಿಣಾಮ ಬೀರುತ್ತಿದೆ ಎಂದು ಎಚ್ಚರಿಸಿದರು. ಕೃಷಿ ಅವಶೇಷಗಳು ಮತ್ತು ಅಡಿಕೆ ಸಿಪ್ಪೆಯನ್ನು ಸುಡುವ ಬದಲು ಸಗಣಿ, ಗಂಜಲ, ಹಸಿರು ಎಲೆಗೊಬ್ಬರಗಳನ್ನು ಬಳಸಿ ಕಾಂಪೋಸ್ಟ್ ಹಾಗೂ ಎರೆಹುಳು ಗೊಬ್ಬರ ತಯಾರಿಸಬೇಕು. ಕನಿಷ್ಠ ಉಳುಮೆ, ಕಂದಕ-ಬದು ನಿರ್ಮಾಣ, ಮಲ್ಚಿಂಗ್ (ಮುಚ್ಚಿಗೆ) ಅಳವಡಿಕೆಯಿಂದ ಮಣ್ಣಿನ ತೇವಾಂಶ ಮತ್ತು ಜೀವವೈವಿಧ್ಯತೆಯನ್ನು ಕಾಪಾಡಿಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು.

ಇದನ್ನೂ ಓದಿ: ವಿದ್ಯಾರ್ಥಿಗಳ ಜೀವನಕ್ಕೆ ಶಿಕ್ಷಣ ಮತ್ತು ಸಂಸ್ಕಾರ ಅತ್ಯಗತ್ಯ | ಶ್ರೀ ಬಸವಪ್ರಭು ಸ್ವಾಮೀಜಿ

ಮೂರು ದಿನಗಳ ಈ ಕಾರ್ಯಾಗಾರದಲ್ಲಿ ರೈತರಿಗೆ ಕೇವಲ ಸೈದ್ಧಾಂತಿಕ ಮಾಹಿತಿ ನೀಡದೆ, ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳ ಮೂಲಕ ನೈಸರ್ಗಿಕ ಕೃಷಿಯ ವಿವಿಧ ಆಯಾಮಗಳನ್ನು ಪರಿಚಯಿಸಲಾಯಿತು. 

ಮೊದಲನೇ ದಿನ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕ ಇಂದೂಧರ ಅವರು ತಮ್ಮ ಜಮೀನಿನಲ್ಲಿ ಅಳವಡಿಸಿಕೊಂಡಿರುವ ಯಶಸ್ವಿ ಕೃಷಿ ಪದ್ಧತಿಗಳನ್ನು ಹಂಚಿಕೊಂಡರು. ನೀರು, ಪೋಷಕಾಂಶಗಳ ನಿರ್ವಹಣೆ ಹಾಗೂ ಪರಿಸರ ಸ್ನೇಹಿ ಕೀಟ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದ ಅವರು, ಜೀವಾಮೃತ, ಬೀಜಾಮೃತ, ಘನ ಜೀವಾಮೃತ ಮತ್ತು ಸಸ್ಯ ಪ್ರಚೋದಕಗಳನ್ನು ಸ್ಥಳದಲ್ಲೇ ತಯಾರಿಸಿ ಪ್ರಾತ್ಯಕ್ಷಿಕೆ ನೀಡಿದರು.

ಎರಡನೇ ದಿನ ಮಲ್ಟಿಪ್ಲೆಕ್ಸ್ ಬಯೋಟೆಕ್‍ನ ತಾಂತ್ರಿಕ ತಜ್ಞರಾದ ಕುಮಾರ್, ಶೃತಿ ಮತ್ತು ಪ್ರಸನ್ನ ಅವರು ತರಬೇತಿ ನೀಡಿದರು. 

ಇದನ್ನೂ ಓದಿ: ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ

ಮಣ್ಣಿನ ಫಲವತ್ತತೆ ಹೆಚ್ಚಿಸಲು ಸೂಕ್ಷ್ಮಜೀವಿಗಳ ಪಾತ್ರ ಮತ್ತು ಜೈವಿಕ ಪೀಡೆನಾಶಕಗಳ ಮಹತ್ವವನ್ನು ತಿಳಿಸಿಕೊಟ್ಟರಲ್ಲದೆ, ತೋಟಗಾರಿಕಾ ಬೆಳೆಗಾರರಿಗೆ ಪ್ರಮುಖ ಸವಾಲಾಗಿರುವ ಅಡಿಕೆ ಸಿಪ್ಪೆಯಿಂದ ಗುಣಮಟ್ಟದ ಕಾಂಪೋಸ್ಟ್ ತಯಾರಿಸುವ ಪ್ರಾಯೋಗಿಕ ವಿಧಾನವನ್ನು ಯಶಸ್ವಿಯಾಗಿ ಪ್ರದರ್ಶಿಸಿದರು.

ಮೂರನೇ ದಿನ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಕೀಟಶಾಸ್ತ್ರ ತಜ್ಞ ಡಾ. ರುದ್ರಮುನಿ ಅವರು ಇಂದೋರ್, ಬೆಂಗಳೂರು, ಜಪಾನ್ ಹಾಗೂ ನಾಡೆಪ್ ವಿಧಾನಗಳಲ್ಲಿ ಕಾಂಪೋಸ್ಟ್ ತಯಾರಿಸುವ ತಂತ್ರಜ್ಞಾನವನ್ನು ವಿವರಿಸಿದರು. 

ನಾಡೆಪ್ ವಿಧಾನದಲ್ಲಿ ಇಟ್ಟಿಗೆಯಿಂದ ನಿರ್ಮಿಸಿದ ತೊಟ್ಟಿಯಲ್ಲಿ ಕೃಷಿ ತ್ಯಾಜ್ಯ ಬಳಸಿ 4–5 ತಿಂಗಳಲ್ಲಿ ಅತ್ಯುತ್ತಮ ಕಾಂಪೋಸ್ಟ್ ಪಡೆಯಬಹುದು ಹಾಗೂ ಎರೆಹುಳು ಗೊಬ್ಬರವು ಮಣ್ಣಿನ ಭೌತಿಕ ಮತ್ತು ಜೈವಿಕ ಗುಣಗಳನ್ನು ಸುಧಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ತಿಳಿಸಿದರು. ಇದೇ ವೇಳೆ ಹನುಮಂತನಾಯ್ಕ ಅವರು ಕೃಷಿಯಲ್ಲಿ ಜೇನು ಸಾಕಣೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ: ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ 

ತರಬೇತಿಯ ಕೊನೆಯಲ್ಲಿ ಭಾಗವಹಿಸಿದ್ದ ರೈತರೆಲ್ಲರೂ ಬಬ್ಬೂರು ಫಾರಂನಲ್ಲಿರುವ ಎರೆಹುಳು ಗೊಬ್ಬರ ಉತ್ಪಾದನಾ ಘಟಕ, ಜೇನು ಕೃಷಿ ಘಟಕ ಹಾಗೂ ಕಾಂಪೋಸ್ಟ್ ಉತ್ಪಾದನಾ ಘಟಕಗಳಿಗೆ ಖುದ್ದಾಗಿ ಭೇಟಿ ನೀಡಿ, ತಜ್ಞರಿಂದ ಪ್ರಾಯೋಗಿಕ ಮಾಹಿತಿ ಪಡೆದುಕೊಂಡರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsOrganic AgricultureSustainable Agricultureಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಾವಯವ ಕೃಷಿಸುಸ್ಥಿರ ಕೃಷಿ
Share This Article
Facebook Email Print
Previous Article DRDO ಕೇಂದ್ರಕ್ಕೆ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಭೇಟಿ DRDO ಕೇಂದ್ರಕ್ಕೆ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಭೇಟಿ 
Next Article ವಿಶೇಷ ಅತ್ತೆ-ಸೊಸೆಯರ ಕಾರ್ಯಕ್ರಮ ಮತ್ತು ಕುಟುಂಬ ಕಲ್ಯಾಣ ಯೋಜನೆ ಆಪ್ತ ಸಮಾಲೋಚನಾ ಶಿಬಿರ ತಾಯಿ-ಮಗುವಿನ ಆರೋಗ್ಯಕ್ಕೆ ಮೂರು ವರ್ಷಗಳ ಅಂತರ ಅಗತ್ಯ | ಬಿ.ಮೂಗಪ್ಪ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ವಿಶೇಷ ಅತ್ತೆ-ಸೊಸೆಯರ ಕಾರ್ಯಕ್ರಮ ಮತ್ತು ಕುಟುಂಬ ಕಲ್ಯಾಣ ಯೋಜನೆ ಆಪ್ತ ಸಮಾಲೋಚನಾ ಶಿಬಿರ
ತಾಯಿ-ಮಗುವಿನ ಆರೋಗ್ಯಕ್ಕೆ ಮೂರು ವರ್ಷಗಳ ಅಂತರ ಅಗತ್ಯ | ಬಿ.ಮೂಗಪ್ಪ
ಮುಖ್ಯ ಸುದ್ದಿ
DRDO ಕೇಂದ್ರಕ್ಕೆ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಭೇಟಿ
DRDO ಕೇಂದ್ರಕ್ಕೆ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಭೇಟಿ 
ಮುಖ್ಯ ಸುದ್ದಿ
foundation
ನೀವು ಹಚ್ಚಿದ ಫೌಂಡೇಶನ್ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಫಾಲೋ ಮಾಡಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up