CHITRADURGA NEWS | 31 JULY 2026
ಚಿತ್ರದುರ್ಗ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಂಘಟನ್ ಸೃಜನ್ ಅಭಿಯಾನ ಸಭೆಯಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರವಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ, ಮಾಜಿ ಸಂಸದ ಹಾಗೂ ಎಐಸಿಸಿ ಚಿತ್ರದುರ್ಗ ಜಿಲ್ಲಾ ಸಂಘಟನ್ ಸೃಜನ್ ಅಭಿಯಾನ ಉಸ್ತುವಾರಿ ರಿಪುನ್ ಬೋರಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸುಮಾರು 60 ಮಂದಿ ಹೆಸರುಗಳನ್ನು ಸಲ್ಲಿಸಿದ್ದ ಹಿನ್ನೆಲೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲು ಸಭೆ ಆಯೋಜಿಸಲಾಗಿತ್ತು.
ಸಭೆ ಆರಂಭವಾಗುತ್ತಿದ್ದಂತೆ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಟಿ. ಜಗದೀಶ್ ಅವರ ಬೆಂಬಲಿಗರು ಘೋಷಣೆ ಕೂಗುತ್ತಾ ಹಾಗೂ ಫ್ಲೆಕ್ಸ್ಗಳನ್ನು ಹಿಡಿದು ಸಭಾಂಗಣ ಪ್ರವೇಶಿಸಿದರು.
ಈ ವೇಳೆ ಸಭೆಯಲ್ಲಿ ಘೋಷಣೆಗಳು ಅಥವಾ ಫ್ಲೆಕ್ಸ್ ಪ್ರದರ್ಶನಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ಪೀರ್ ಸೂಚಿಸಿದರು. ಆದರೆ ಕೆಲ ಕಾರ್ಯಕರ್ತರು ತಮ್ಮ ಅಭ್ಯರ್ಥಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹಿಸಿ ಘೋಷಣೆಗಳನ್ನು ಮುಂದುವರಿಸಿದರು.
ಇದನ್ನೂ ಓದಿ: ಹೋಂ ಸ್ಟೇ ನೋಂದಣಿಗೆ ಸೂಚನೆ
ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಗುಂಪು ಕಟ್ಟಿಕೊಂಡು ಬಂದವರನ್ನು ಬಿಜೆಪಿ ಬೆಂಬಲಿಗರು ಎಂದು ಹೇಳಿದರೆಂದು ಆರೋಪಿಸಿ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. “ನಾವು ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತರು” ಎಂದು ಘೋಷಣೆ ಕೂಗಿದ ಅವರು ವೇದಿಕೆಯತ್ತ ತೆರಳಲು ಯತ್ನಿಸಿದರು. ಕಾರ್ಯಾಧ್ಯಕ್ಷ ಕೆ.ಎಂ. ಹಾಲಸ್ವಾಮಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.
ಬಳಿಕ ಬಿ.ಟಿ. ಜಗದೀಶ್ ರಿಪುನ್ ಬೋರಾ ಅವರನ್ನು ಭೇಟಿ ಮಾಡಿ, ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಕೆಪಿಸಿಸಿ ಹಾಗೂ ಎಐಸಿಸಿಗೆ ಹೆಸರು ಶಿಫಾರಸು ಮಾಡುವಂತೆ ಮನವಿ ಮಾಡಿದರು.
ಇದೇ ವೇಳೆ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕಿನ ಕಾರ್ಯಕರ್ತರು, ಆರಂಭದಲ್ಲಿ ಹಲವು ಅಭ್ಯರ್ಥಿಗಳ ಹೆಸರನ್ನು ಸೂಚಿಸುವಂತೆ ತಿಳಿಸಲಾಗಿತ್ತು. ಈಗ ಒಬ್ಬರ ಹೆಸರನ್ನು ಮಾತ್ರ ಸೂಚಿಸುವಂತೆ ಹೇಳುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಶುಲ್ಕ ಮರುಪಾವತಿ, ವಿದ್ಯಾರ್ಥಿ ವೇತನ | ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಇದಕ್ಕೆ ಕೆಪಿಸಿಸಿ ಕಾರ್ಯದರ್ಶಿ ಸೌಗಂಧಿಕಾ ರಘುನಾಥ್ ಸ್ಪಷ್ಟನೆ ನೀಡಿ, ಕೆಪಿಸಿಸಿ ನಿರ್ದೇಶನದಂತೆ ಒಬ್ಬರ ಹೆಸರನ್ನು ಮಾತ್ರ ಶಿಫಾರಸು ಮಾಡಬೇಕಾಗಿದೆ ಎಂದು ತಿಳಿಸಿದರು. ಬಳಿಕ ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಸಂಪತ್ ಕುಮಾರ್ ಸೇರಿದಂತೆ ಮುಖಂಡರು ಕಾರ್ಯಕರ್ತರನ್ನು ಸಮಾಧಾನಪಡಿಸಿದ ನಂತರ ಸಭೆ ಮುಂದುವರಿಯಿತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

