CHITRADURGA NEWS | 17 JUNE 2025
ಚಿತ್ರದುರ್ಗ: ಅತಿಸಾರ ಭೇದಿ ನಿಯಂತ್ರಣಕ್ಕೆ ORS ಮತ್ತು ಜಿಂಕ್ ಸೂಕ್ತ ಮದ್ದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.
ಚಿತ್ರದುರ್ಗ ತಾಲೂಕಿನ ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅತಿಸಾರಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ: ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ
ಐದು ವರ್ಷದ ಒಳಗಿನ ಮಕ್ಕಳಲ್ಲಿ ಅತಿಸಾರಭೇದಿ ಆಗುವ ಸಾಧ್ಯತೆಯಿದ್ದು, ಅತಿಯಾಗಿ ಮಗು ಕಿರಿಕಿರಿ ಉಂಟು ಮಾಡುವುದು, ಮಗುವಿನ ಕಣ್ಣುಗಳು ಒಳಗೆ ಹೋದಂತೆ ಇರುವುದು, ಮಗುವಿಗೆ ತುಂಬಾ ಬಾಯಾರಿಕೆಯಾಗುವುದು, ಮಗುವಿನ ಹೊಟ್ಟೆಯ ಚರ್ಮವನ್ನು ಚಿವುಟಿ ಎಳೆದುಬಿಟ್ಟಾಗ ನಿಧಾನವಾಗಿ ಮೊದಲಿನ ಸ್ಥಿತಿಗೆ ಬರುವುದು ಇವು ನಿರ್ಜಲೀಕರಣದ ಲಕ್ಷಣಗಳಾಗಿದ್ದು, ಇಂತಹ ಸಂದರ್ಭದಲ್ಲಿ ಹೆಚ್ಚಿನ ಚಿಕಿತ್ಸೆಗೆ ತಕ್ಷಣವೇ ಆಸ್ಪತ್ರೆಗೆ ತೆರಳಬೇಕು ಎಂದರು.
ಇದನ್ನೂ ಓದಿ: ಖಾಸಗಿ ಕಂಪನಿಗಳಲ್ಲಿ ಉದ್ಯೋಗ | ಜೂ.19 ರಂದು ನೇರ ನೇಮಕಾತಿ ಸಂದರ್ಶನ
ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಕ್ಷತಾ ಮಾತನಾಡಿ, ಜೂನ್ 16ರಿಂದ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಇರುವುದರಿಂದ ಸಾರ್ವಜನಿಕ ವಲಯದಲ್ಲಿ ಅತಿಸಾರ ಭೇದಿ ಬಗ್ಗೆ ಮಾಹಿತಿ ನೀಡುತ್ತಾ, ಸರ್ಕಾರಿ ಆಸ್ಪತ್ರೆಗಳಲ್ಲಿ ಅತಿಸಾರ ಭೇದಿಗೆ ಓಆರ್ಎಸ್ ಮತ್ತು ಜಿಂಕ್ ಮಾತ್ರೆಗಳು ಲಭ್ಯವಿದ್ದು, ಸಾರ್ವಜನಿಕರು ಇವುಗಳ ಪ್ರಯೋಜನ ಪಡೆಯಬೇಕು. ಮಗುವಿಗೆ ಒಆರ್ಎಸ್ ಕುಡಿಸುವಾಗ ಮತ್ತು ಎದೆ ಹಾಲು ಉಣಿಸುವಾಗ ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.
ಇದನ್ನೂ ಓದಿ: UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಜನಸಂಖ್ಯಾ ಸ್ಥಿರತೆ ಕಾಪಾಡಲು ಉಚಿತವಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನಗಳಾದ ಮಹಿಳೆಯರಿಗೆ ಕಾಪರ್ಟಿ, ಡಿಂಪಾ ಇಂಜೆಕ್ಷನ್, ಛಾಯ, ಮಾಲಾ ಏನ್ ಮಾತ್ರೆಗಳು ಹಾಗೂ ಪುರುಷರಿಗೆ ನಿರೋಧಗಳು ಮತ್ತು ಶಾಶ್ವತ ವಿಧಾನವಾದ ಪುರುಷರಿಗೆ ಎನ್ಎಸ್ವಿ ಶಸ್ತ್ರ ಚಿಕಿತ್ಸೆ ಲಭ್ಯ ಇದ್ದು, ಇವುಗಳ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಓಆರ್ಎಸ್ ತಯಾರಿಸುವ ಬಗ್ಗೆ, ಕೈ ತೊಳೆಯುವ ವಿಧಾನಗಳ ಕುರಿತು ಪ್ರಾತ್ಯಕ್ಷಿಕೆ ಮಾಡಲಾಯಿತು.
ಇದನ್ನೂ ಓದಿ: ಅಡಿಕೆ ಧಾರಣೆ | ಜೂನ್ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಕೃಷ್ಣಪ್ಪ, ಸಿದ್ದೇಶ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಮಮತಾ, ಜಿ.ಆರ್.ಆಶಾ, ಶಾರದಾ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number